<p><strong>ಮೈಸೂರು:</strong> ಚಾಮುಂಡಿ ಬೆಟ್ಟಕ್ಕೆ ಬುಧವಾರ ರಾತ್ರಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲು ಬಂದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಸ್ಥಳೀಯರು ಸುತ್ತುವರಿದು ‘ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ದೇವಸ್ಥಾನಕ್ಕೆ ತೊಂದರೆಯಾಗುತ್ತಿದೆ. ಇದನ್ನು ನಿಲ್ಲಿಸಲು ಕ್ರಮವಹಿಸಿ’ ಎಂದು ಮನವಿ ಮಾಡಿದರು.</p>.<p>‘ಇಲ್ಲಿ ವೇದಿಕೆ ನಿರ್ಮಾಣ ಮಾಡಿದರೆ ಭಕ್ತರು ತಿರುಗಾಡಲು ಆಗುವುದಿಲ್ಲ. ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಯಾವುದೇ ಯೋಜನೆ ರೂಪಿಸುವಾಗಲೂ, ಜಾತ್ರಾ ಸಮಯದಲ್ಲೂ ನಮ್ಮನ್ನು ವಿಶ್ವಾಸಕ್ಕೆ ತಗೆದುಕೊಳ್ಳುವುದಿಲ್ಲ. ನಮ್ಮಿಂದ ಯಾವ ಸಲಹೆ ಸೂಚನೆ ಪಡೆಯುವುದಿಲ್ಲ’ ಎಂದು ಆರೋಪಿಸಿದರು.</p>.<p>‘ಕಾಮಗಾರಿ ಮಾಡಬಾರದು ಎಂದು ಸಂಬಂಧಪಟ್ಟವರಿಗೆ ತಿಳಿಸಿದ್ದೇವೆ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯಿಸಿ, ‘ಪ್ರಾಧಿಕಾರದ ವಿಚಾರವು ನ್ಯಾಯಾಲಯದಲ್ಲಿ ಇದೆ. ಅಲ್ಲಿ ಯಾವ ರೀತಿ ತೀರ್ಪು ಬರುತ್ತದೆ ನೋಡಿಕೊಂಡು, ಮುಂದಿನ ನಡೆ ನಿರ್ಧರಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಚಾಮುಂಡಿ ಬೆಟ್ಟಕ್ಕೆ ಬುಧವಾರ ರಾತ್ರಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲು ಬಂದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಸ್ಥಳೀಯರು ಸುತ್ತುವರಿದು ‘ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ದೇವಸ್ಥಾನಕ್ಕೆ ತೊಂದರೆಯಾಗುತ್ತಿದೆ. ಇದನ್ನು ನಿಲ್ಲಿಸಲು ಕ್ರಮವಹಿಸಿ’ ಎಂದು ಮನವಿ ಮಾಡಿದರು.</p>.<p>‘ಇಲ್ಲಿ ವೇದಿಕೆ ನಿರ್ಮಾಣ ಮಾಡಿದರೆ ಭಕ್ತರು ತಿರುಗಾಡಲು ಆಗುವುದಿಲ್ಲ. ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಯಾವುದೇ ಯೋಜನೆ ರೂಪಿಸುವಾಗಲೂ, ಜಾತ್ರಾ ಸಮಯದಲ್ಲೂ ನಮ್ಮನ್ನು ವಿಶ್ವಾಸಕ್ಕೆ ತಗೆದುಕೊಳ್ಳುವುದಿಲ್ಲ. ನಮ್ಮಿಂದ ಯಾವ ಸಲಹೆ ಸೂಚನೆ ಪಡೆಯುವುದಿಲ್ಲ’ ಎಂದು ಆರೋಪಿಸಿದರು.</p>.<p>‘ಕಾಮಗಾರಿ ಮಾಡಬಾರದು ಎಂದು ಸಂಬಂಧಪಟ್ಟವರಿಗೆ ತಿಳಿಸಿದ್ದೇವೆ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯಿಸಿ, ‘ಪ್ರಾಧಿಕಾರದ ವಿಚಾರವು ನ್ಯಾಯಾಲಯದಲ್ಲಿ ಇದೆ. ಅಲ್ಲಿ ಯಾವ ರೀತಿ ತೀರ್ಪು ಬರುತ್ತದೆ ನೋಡಿಕೊಂಡು, ಮುಂದಿನ ನಡೆ ನಿರ್ಧರಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>