<p><strong>ಮೈಸೂರು</strong>: ‘ಪ್ರಸಾದ್ ಯೋಜನೆಯಡಿ ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರಸಾದ್’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ಚಾಮುಂಡಿಬೆಟ್ಟದಲ್ಲಿ ಪರಿಸರಕ್ಕೆ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಅವರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿ ಮಾಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು. </p><p><strong>ವಾಸಿಸುವವರಿಗೆ ತೊಂದರೆ ಆಗದಂತೆ: </strong></p><p>‘ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ ಅಲ್ಲಿನ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗುತ್ತಿದೆ. ಅವರ ಸಲಹೆಗಳನ್ನು ಪಡೆದು ಅದರಂತೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.</p><p>ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ‘ವಿವಿಐಪಿ (ಅತಿಗಣ್ಯರ) ದರ್ಶನದ ಸಂದರ್ಭದಲ್ಲಿ ಇತರರು ಹೆಚ್ಚಿನ ಸಂಖ್ಯೆಯಲ್ಲಿ ನುಗ್ಗುವುದರಿಂದ ಗೊಂದಲ ಉಂಟಾಗುತ್ತದೆ. ಇದಕ್ಕೆ ಪರಿಹಾರ ರೂಪಿಸಬೇಕು. ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಹಿಂದೆ ಬೆಟ್ಟದಲ್ಲಿ ಅಂಗಡಿ ಮಳಿಗೆಗಳನ್ನು ಇಟ್ಟಿಕೊಂಡಿದ್ದ ಅರ್ಹರಿಗೆ ಮಾತ್ರ ಮಳಿಗೆ ಮಾಡಲು ಅವಕಾಶ ನೀಡಬೇಕು’ ಎಂದು ಹೇಳಿದರು.</p><p><strong>₹ 45.70 ಕೋಟಿ ಅನುದಾನ:</strong></p><p>ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ‘ಪ್ರಸಾದ್ ಯೋಜನೆಯಡಿ ₹ 45.70 ಕೋಟಿ ಅನುದಾನ ಮಂಜೂರಾಗಿದೆ. ಭಕ್ತರ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲು ಸರದಿ ಸಾಲಿಗಾಗಿ ‘ಕಲ್ಲಿನ ಕ್ಯೂ ಮಂಟಪ’ ನಿರ್ಮಿಸಲಾಗುವುದು. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಕ್ಯೂ ಬಂದು ದೇವಸ್ಥಾನದ ಮುಂಭಾಗದಲ್ಲಿ ಬಂದು ಸೇರುತ್ತದೆ’ ಎಂದು ತಿಳಿಸಿದರು.</p><p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪ್ರಸಾದ್ ಯೋಜನೆಯಡಿ ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರಸಾದ್’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ಚಾಮುಂಡಿಬೆಟ್ಟದಲ್ಲಿ ಪರಿಸರಕ್ಕೆ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಅವರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿ ಮಾಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು. </p><p><strong>ವಾಸಿಸುವವರಿಗೆ ತೊಂದರೆ ಆಗದಂತೆ: </strong></p><p>‘ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ ಅಲ್ಲಿನ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗುತ್ತಿದೆ. ಅವರ ಸಲಹೆಗಳನ್ನು ಪಡೆದು ಅದರಂತೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.</p><p>ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ‘ವಿವಿಐಪಿ (ಅತಿಗಣ್ಯರ) ದರ್ಶನದ ಸಂದರ್ಭದಲ್ಲಿ ಇತರರು ಹೆಚ್ಚಿನ ಸಂಖ್ಯೆಯಲ್ಲಿ ನುಗ್ಗುವುದರಿಂದ ಗೊಂದಲ ಉಂಟಾಗುತ್ತದೆ. ಇದಕ್ಕೆ ಪರಿಹಾರ ರೂಪಿಸಬೇಕು. ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಹಿಂದೆ ಬೆಟ್ಟದಲ್ಲಿ ಅಂಗಡಿ ಮಳಿಗೆಗಳನ್ನು ಇಟ್ಟಿಕೊಂಡಿದ್ದ ಅರ್ಹರಿಗೆ ಮಾತ್ರ ಮಳಿಗೆ ಮಾಡಲು ಅವಕಾಶ ನೀಡಬೇಕು’ ಎಂದು ಹೇಳಿದರು.</p><p><strong>₹ 45.70 ಕೋಟಿ ಅನುದಾನ:</strong></p><p>ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ‘ಪ್ರಸಾದ್ ಯೋಜನೆಯಡಿ ₹ 45.70 ಕೋಟಿ ಅನುದಾನ ಮಂಜೂರಾಗಿದೆ. ಭಕ್ತರ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲು ಸರದಿ ಸಾಲಿಗಾಗಿ ‘ಕಲ್ಲಿನ ಕ್ಯೂ ಮಂಟಪ’ ನಿರ್ಮಿಸಲಾಗುವುದು. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಕ್ಯೂ ಬಂದು ದೇವಸ್ಥಾನದ ಮುಂಭಾಗದಲ್ಲಿ ಬಂದು ಸೇರುತ್ತದೆ’ ಎಂದು ತಿಳಿಸಿದರು.</p><p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>