<p><strong>ಮೈಸೂರು</strong>: ಚಾಮುಂಡಿ ಬೆಟ್ಟದ ರಸ್ತೆ ಬದಿಯಲ್ಲೆಲ್ಲ ತ್ಯಾಜ್ಯ ಸಿಗುತ್ತಿದೆ. ಮದ್ಯ ಬಾಟಲಿಗಳು ಬಿದ್ದಿವೆ. ಪ್ಲಾಸ್ಟಿಕ್ನಿಂದಾಗಿ ಕಾಳ್ಗಿಚ್ಚು ಹೆಚ್ಚಾಗುತ್ತಿದೆ. ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇಧಿಸಬೇಕು. ಪ್ರವೇಶದ್ವಾರದಲ್ಲಿ ತಪಾಸಣೆ ಮಾಡಬೇಕು.</p>.<p>ಪಾಲಿಕೆಯಲ್ಲಿ ಶನಿವಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಬಿ. ಅಡಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಂಘ, ಸಂಸ್ಥೆಗಳು ಹಾಗೂ ಪಾಲಿಕೆ ಪಾಲುದಾರರ ಸಭೆಯಲ್ಲಿ ನಾಗರಿಕರು ಮೇಲಿನಂತೆ ಆಗ್ರಹಿಸಿದರು.</p>.<p>‘ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ಮೂಲಕ ಪ್ಲಾಸ್ಟಿಕ್ ಮುಕ್ತ ಚಾಮುಂಡಿಬೆಟ್ಟ ಅಭಿಯಾನ ನಡೆಸಿ ಟನ್ಗಟ್ಟಲೆ ತ್ಯಾಜ್ಯ ಸಂಗ್ರಹಿಸಿದ್ದೆವು. ಭಕ್ತರು, ಪ್ರವಾಸಿಗರು ಕಸದ ತಾಣವಾಗಿಸಿದ್ದಾರೆ. ಕೆಎಸ್ಆರ್ಟಿಸಿ ಬಸ್ಗಳಿಗೆ ಮಾತ್ರ ಪ್ರವೇಶ ಕಲ್ಪಿಸಬೇಕು’ ಎಂದು ಸಮಿತಿಯ ಲೀಲಾ ಶಿವಕುಮಾರ್ ಆಗ್ರಹಿಸಿದರು. </p>.<p>ಅದಕ್ಕೆ ಪ್ರತಿಕ್ರಿಯಿಸಿದ ಸುಭಾಷ್ ಬಿ. ಅಡಿ, ‘ತಿರುಪತಿ ಮಾದರಿಯಲ್ಲಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಜಿಲ್ಲಾಧಿಕಾರಿ ಹಾಗೂ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಜೊತೆ ಚರ್ಚಿಸಲಾಗುವುದು. ಬಸ್ ಹಾಗೂ ವಾಹನ ತಪಾಸಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದರು.</p>.<p>‘ಎಲ್ಲೆಡೆ ಏಕಬಳಕೆ ಪ್ಲಾಸ್ಟಿಕ್ ಬಳಕೆ ಮಾಡುವವರಿಗೆ ಕಡ್ಡಾಯವಾಗಿ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರನ್ನೊಳಗೊಂಡ ತಪಾಸಣಾ ತಂಡವನ್ನು ರಚಿಸಲಾಗುವುದು. ಪ್ಲಾಸ್ಟಿಕ್ ಬಳಕೆ ಮಾಡುವ ಹೋಟೆಲ್, ಮಳಿಗೆದಾರರ ಪರವಾನಗಿ ರದ್ದು ಮಾಡಬೇಕು’ ಎಂದರು. </p>.<p>‘ತ್ಯಾಜ್ಯ ನಿರ್ವಹಣೆಗೆ ವಿಷನ್ ಗ್ರೂಪ್ ರಚಿಸಿ ಸಲಹೆ ಸ್ವೀಕರಿಸಲಾಗುತ್ತಿತ್ತು. ಸಲಹಾ ಸಮಿತಿ ನಿಷ್ಕ್ರಿಯವಾಗಿದೆ’ ಎಂದು ಶೂನ್ಯ ತ್ಯಾಜ್ಯ ನಿರ್ವಹಣಾ ಘಟಕದ ಉಸ್ತುವಾರಿ ವಹಿಸಿಕೊಂಡಿರುವ ನಾಗಪತಿ ಹೇಳಿದರು.</p>.<p>‘ಕಸ ವಿಂಗಡಣೆ ಮಾಡದ ಪ್ರತಿಮನಗೂ ದಂಡ ವಿಧಿಸಬೇಕು. ಇಲ್ಲದಿದ್ದರೆ ದೇಶದ ಸ್ವಚ್ಛನಗರಿಯಾಗಲು ಸಾಧ್ಯವಿಲ್ಲ. ಮಧ್ಯಪ್ರದೇಶದ ಇಂದೋರ್ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಪಡೆಯಲು ಪೌರಕಾರ್ಮಿಕರ ಜೊತೆಗೆ ಎಲ್ಲರ ಸಹಕಾರ ಸಿಕ್ಕಿದೆ. ಅದೇ ಮಾದರಿಯಲ್ಲಿ ಮೈಸೂರು ಕೆಲಸ ಮಾಡಬೇಕು’ ಎಂದು ಅಡಿ ಸಲಹೆ ನೀಡಿದರು. </p>.<p>‘ಮೈಸೂರು ಪಾರಂಪರಿಕ ನಗರಿಯಾಗಿದ್ದು, ಎಲ್ಲ ಕಟ್ಟಡಗಳು ಕುಸಿಯುತ್ತಿವೆ’ ಎಂದು ಇತಿಹಾಸತಜ್ಞ ಪ್ರೊ.ಎನ್.ಎಸ್.ರಂಗರಾಜು ಗಮನಸೆಳೆದರು. ಅದಕ್ಕೆ ಪ್ರತಿಕ್ರಿಯಿಸಿದ ಸುಭಾಷ್ ಬಿ. ಅಡಿ, ‘ಎಲ್ಲ ಉದ್ಯಮಿಗಳ ಸಹಕಾರ ಪಡೆದು ಅಭಿವೃದ್ಧಿಗೊಳಿಸಬೇಕು’ ಎಂದರು.</p>.<p>ವಿವಿಧ ಸಂಸ್ಥೆಗಳ ಸುರೇಶ್ ಕುಮಾರ್ ಜೈನ್, ನಾರಾಯಣ ಗೌಡ, ಗಂಟಯ್ಯ, ವಿಶ್ವನಾಥ್, ರಮೇಶ್ ಕಿಕ್ಕೇರಿ, ಲೀಲಾ ಶಿವಕುಮಾರ್, ಲೀಲಾ ವೆಂಕಟೇಶ್, ನಾಗಪತಿ, ಶೈಲಜೇಶ್ ಸಲಹೆ ನೀಡಿದರು.</p>.<p>ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಚಾಮುಂಡಿ ಬೆಟ್ಟದ ರಸ್ತೆ ಬದಿಯಲ್ಲೆಲ್ಲ ತ್ಯಾಜ್ಯ ಸಿಗುತ್ತಿದೆ. ಮದ್ಯ ಬಾಟಲಿಗಳು ಬಿದ್ದಿವೆ. ಪ್ಲಾಸ್ಟಿಕ್ನಿಂದಾಗಿ ಕಾಳ್ಗಿಚ್ಚು ಹೆಚ್ಚಾಗುತ್ತಿದೆ. ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇಧಿಸಬೇಕು. ಪ್ರವೇಶದ್ವಾರದಲ್ಲಿ ತಪಾಸಣೆ ಮಾಡಬೇಕು.</p>.<p>ಪಾಲಿಕೆಯಲ್ಲಿ ಶನಿವಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಬಿ. ಅಡಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಂಘ, ಸಂಸ್ಥೆಗಳು ಹಾಗೂ ಪಾಲಿಕೆ ಪಾಲುದಾರರ ಸಭೆಯಲ್ಲಿ ನಾಗರಿಕರು ಮೇಲಿನಂತೆ ಆಗ್ರಹಿಸಿದರು.</p>.<p>‘ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ಮೂಲಕ ಪ್ಲಾಸ್ಟಿಕ್ ಮುಕ್ತ ಚಾಮುಂಡಿಬೆಟ್ಟ ಅಭಿಯಾನ ನಡೆಸಿ ಟನ್ಗಟ್ಟಲೆ ತ್ಯಾಜ್ಯ ಸಂಗ್ರಹಿಸಿದ್ದೆವು. ಭಕ್ತರು, ಪ್ರವಾಸಿಗರು ಕಸದ ತಾಣವಾಗಿಸಿದ್ದಾರೆ. ಕೆಎಸ್ಆರ್ಟಿಸಿ ಬಸ್ಗಳಿಗೆ ಮಾತ್ರ ಪ್ರವೇಶ ಕಲ್ಪಿಸಬೇಕು’ ಎಂದು ಸಮಿತಿಯ ಲೀಲಾ ಶಿವಕುಮಾರ್ ಆಗ್ರಹಿಸಿದರು. </p>.<p>ಅದಕ್ಕೆ ಪ್ರತಿಕ್ರಿಯಿಸಿದ ಸುಭಾಷ್ ಬಿ. ಅಡಿ, ‘ತಿರುಪತಿ ಮಾದರಿಯಲ್ಲಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಜಿಲ್ಲಾಧಿಕಾರಿ ಹಾಗೂ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಜೊತೆ ಚರ್ಚಿಸಲಾಗುವುದು. ಬಸ್ ಹಾಗೂ ವಾಹನ ತಪಾಸಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದರು.</p>.<p>‘ಎಲ್ಲೆಡೆ ಏಕಬಳಕೆ ಪ್ಲಾಸ್ಟಿಕ್ ಬಳಕೆ ಮಾಡುವವರಿಗೆ ಕಡ್ಡಾಯವಾಗಿ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರನ್ನೊಳಗೊಂಡ ತಪಾಸಣಾ ತಂಡವನ್ನು ರಚಿಸಲಾಗುವುದು. ಪ್ಲಾಸ್ಟಿಕ್ ಬಳಕೆ ಮಾಡುವ ಹೋಟೆಲ್, ಮಳಿಗೆದಾರರ ಪರವಾನಗಿ ರದ್ದು ಮಾಡಬೇಕು’ ಎಂದರು. </p>.<p>‘ತ್ಯಾಜ್ಯ ನಿರ್ವಹಣೆಗೆ ವಿಷನ್ ಗ್ರೂಪ್ ರಚಿಸಿ ಸಲಹೆ ಸ್ವೀಕರಿಸಲಾಗುತ್ತಿತ್ತು. ಸಲಹಾ ಸಮಿತಿ ನಿಷ್ಕ್ರಿಯವಾಗಿದೆ’ ಎಂದು ಶೂನ್ಯ ತ್ಯಾಜ್ಯ ನಿರ್ವಹಣಾ ಘಟಕದ ಉಸ್ತುವಾರಿ ವಹಿಸಿಕೊಂಡಿರುವ ನಾಗಪತಿ ಹೇಳಿದರು.</p>.<p>‘ಕಸ ವಿಂಗಡಣೆ ಮಾಡದ ಪ್ರತಿಮನಗೂ ದಂಡ ವಿಧಿಸಬೇಕು. ಇಲ್ಲದಿದ್ದರೆ ದೇಶದ ಸ್ವಚ್ಛನಗರಿಯಾಗಲು ಸಾಧ್ಯವಿಲ್ಲ. ಮಧ್ಯಪ್ರದೇಶದ ಇಂದೋರ್ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಪಡೆಯಲು ಪೌರಕಾರ್ಮಿಕರ ಜೊತೆಗೆ ಎಲ್ಲರ ಸಹಕಾರ ಸಿಕ್ಕಿದೆ. ಅದೇ ಮಾದರಿಯಲ್ಲಿ ಮೈಸೂರು ಕೆಲಸ ಮಾಡಬೇಕು’ ಎಂದು ಅಡಿ ಸಲಹೆ ನೀಡಿದರು. </p>.<p>‘ಮೈಸೂರು ಪಾರಂಪರಿಕ ನಗರಿಯಾಗಿದ್ದು, ಎಲ್ಲ ಕಟ್ಟಡಗಳು ಕುಸಿಯುತ್ತಿವೆ’ ಎಂದು ಇತಿಹಾಸತಜ್ಞ ಪ್ರೊ.ಎನ್.ಎಸ್.ರಂಗರಾಜು ಗಮನಸೆಳೆದರು. ಅದಕ್ಕೆ ಪ್ರತಿಕ್ರಿಯಿಸಿದ ಸುಭಾಷ್ ಬಿ. ಅಡಿ, ‘ಎಲ್ಲ ಉದ್ಯಮಿಗಳ ಸಹಕಾರ ಪಡೆದು ಅಭಿವೃದ್ಧಿಗೊಳಿಸಬೇಕು’ ಎಂದರು.</p>.<p>ವಿವಿಧ ಸಂಸ್ಥೆಗಳ ಸುರೇಶ್ ಕುಮಾರ್ ಜೈನ್, ನಾರಾಯಣ ಗೌಡ, ಗಂಟಯ್ಯ, ವಿಶ್ವನಾಥ್, ರಮೇಶ್ ಕಿಕ್ಕೇರಿ, ಲೀಲಾ ಶಿವಕುಮಾರ್, ಲೀಲಾ ವೆಂಕಟೇಶ್, ನಾಗಪತಿ, ಶೈಲಜೇಶ್ ಸಲಹೆ ನೀಡಿದರು.</p>.<p>ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>