ಈ ವೇಳೆ ಇಒ ಕೃಷ್ಣಕುಮಾರ್ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಪ್ರಕೃತಿ ವಿಕೋಪಗಳಿಗೆ ಒಳಗಾದಲ್ಲಿ ಪಂಚಾಯಿತಿಯ ಶೇ 25ರ ಅನುದಾನದಲ್ಲೇ ಪರಿಹಾರ ನೀಡುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ. ಈ ವ್ಯವಸ್ಥೆಯನ್ನು ತಾಲ್ಲೂಕಿನಾದ್ಯಂತ ಜಾರಿಗೊಳಿಸಿ ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ನೊಂದವರಿಗೆ ಪರಿಹಾರ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.