<p><strong>ಸರಗೂರು:</strong> ‘ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಜ.2 ರಿಂದ ನಾಲ್ಕು ದಿನಗಳು ನಡೆಯುವ ಚಿಕ್ಕದೇವಮ್ಮ ಜಾತ್ರೆ ಮಹೋತ್ಸವಕ್ಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಮೋಹನಕುಮಾರಿ ಸೂಚಿಸಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದ ಚಿಕ್ಕದೇವಮ್ಮ ಜಾತ್ರೆ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಜಾತ್ರಾ ಮಹೋತ್ಸವವನ್ನು ಕಳೆದ ಬಾರಿಗಿಂತ ಉತ್ತಮವಾಗಿ ನಡೆಸಬೇಕು. ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕು’ ಎಂದರು.</p>.<p>‘ಜಾತ್ರಾಮಾಳವನ್ನು ಸಮತಟ್ಟು ಮಾಡಿಕೊಡಬೇಕು. ಜಾತ್ರೆಗೆ ಬರುವ ಭಕ್ತಾದಿಗಳು ತೊಂದರೆ ಇಲ್ಲದಂತೆ ದರ್ಶನ ಪಡೆಯಲು ವ್ಯವಸ್ಥೆ ಮಾಡಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು, ಆರೋಗ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>‘ಜಾತ್ರೆಗೆ ವಿವಿಧೆಡೆಯಿಂದ ಬರುವ ಭಕ್ತರ ಅನುಕೂಲಕ್ಕಾಗಿ ಬಸ್ ಸೌಲಭ್ಯ ಕಲ್ಪಿಸಬೇಕು. ಅಂಗಡಿ ಮುಂಗಟ್ಟು, ವಾಹನಗಳಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಸಬೇಕು. ಅನ್ನದಾಸೋಹ, ಸ್ನಾನಗೃಹ, ಶೌಚಾಲಯ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಅರಣ್ಯ ಇಲಾಖೆ ಅಧಿಕಾರಿಗಳು ರಸ್ತೆ ಬದಿಯಲ್ಲಿರುವ ಜಂಗಲ್ ತೆರವುಗೊಳಿಸಬೇಕು. ಇದಲ್ಲದೆ ಕಾಡುಪ್ರಾಣಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಜಾತ್ರೆ ವೇಳೆ ಗಸ್ತು ತಿರುಬೇಕು’ ಎಂದು ಸೂಚಿಸಿದರು.</p>.<p>ಮುಜರಾಯಿ ಇಲಾಖೆ ಇಒ ರಘು, ಶೋಭಾ, ಚಿಕ್ಕದೇವಮ್ಮನ ಬೆಟ್ಟದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧಿಕಾರಿ ಮಹದೇವಸ್ವಾಮಿ, ಇನ್ಸ್ಪೆಕ್ಟರ್ ಗೋಪಾಲ್, ಇಮ್ರಾನ್, ಶಿರಸ್ತೇದಾರ್ ಮನೋಹರ್, ಪಿಡಿಒ ಎ.ಜಿ.ಮಹೇಂದ್ರಸ್ವಾಮಿ ಹಾಗೂ ಅಧಿಕಾರಿಗಳು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು:</strong> ‘ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಜ.2 ರಿಂದ ನಾಲ್ಕು ದಿನಗಳು ನಡೆಯುವ ಚಿಕ್ಕದೇವಮ್ಮ ಜಾತ್ರೆ ಮಹೋತ್ಸವಕ್ಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಮೋಹನಕುಮಾರಿ ಸೂಚಿಸಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದ ಚಿಕ್ಕದೇವಮ್ಮ ಜಾತ್ರೆ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಜಾತ್ರಾ ಮಹೋತ್ಸವವನ್ನು ಕಳೆದ ಬಾರಿಗಿಂತ ಉತ್ತಮವಾಗಿ ನಡೆಸಬೇಕು. ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕು’ ಎಂದರು.</p>.<p>‘ಜಾತ್ರಾಮಾಳವನ್ನು ಸಮತಟ್ಟು ಮಾಡಿಕೊಡಬೇಕು. ಜಾತ್ರೆಗೆ ಬರುವ ಭಕ್ತಾದಿಗಳು ತೊಂದರೆ ಇಲ್ಲದಂತೆ ದರ್ಶನ ಪಡೆಯಲು ವ್ಯವಸ್ಥೆ ಮಾಡಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು, ಆರೋಗ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>‘ಜಾತ್ರೆಗೆ ವಿವಿಧೆಡೆಯಿಂದ ಬರುವ ಭಕ್ತರ ಅನುಕೂಲಕ್ಕಾಗಿ ಬಸ್ ಸೌಲಭ್ಯ ಕಲ್ಪಿಸಬೇಕು. ಅಂಗಡಿ ಮುಂಗಟ್ಟು, ವಾಹನಗಳಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಸಬೇಕು. ಅನ್ನದಾಸೋಹ, ಸ್ನಾನಗೃಹ, ಶೌಚಾಲಯ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಅರಣ್ಯ ಇಲಾಖೆ ಅಧಿಕಾರಿಗಳು ರಸ್ತೆ ಬದಿಯಲ್ಲಿರುವ ಜಂಗಲ್ ತೆರವುಗೊಳಿಸಬೇಕು. ಇದಲ್ಲದೆ ಕಾಡುಪ್ರಾಣಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಜಾತ್ರೆ ವೇಳೆ ಗಸ್ತು ತಿರುಬೇಕು’ ಎಂದು ಸೂಚಿಸಿದರು.</p>.<p>ಮುಜರಾಯಿ ಇಲಾಖೆ ಇಒ ರಘು, ಶೋಭಾ, ಚಿಕ್ಕದೇವಮ್ಮನ ಬೆಟ್ಟದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧಿಕಾರಿ ಮಹದೇವಸ್ವಾಮಿ, ಇನ್ಸ್ಪೆಕ್ಟರ್ ಗೋಪಾಲ್, ಇಮ್ರಾನ್, ಶಿರಸ್ತೇದಾರ್ ಮನೋಹರ್, ಪಿಡಿಒ ಎ.ಜಿ.ಮಹೇಂದ್ರಸ್ವಾಮಿ ಹಾಗೂ ಅಧಿಕಾರಿಗಳು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>