<p>ಜಯಪುರ: ಹೋಬಳಿಯ ದೊಡ್ಡಹುಂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮುರುಡ ಬಸವೇಶ್ವರಸ್ವಾಮಿ ದೇವಾಲಯ ಮತ್ತು ಮಾರಮ್ಮ ದೇವಸ್ಥಾನದ ಬಾಗಿಲುಗಳ ಬೀಗ ಮುರಿದ ಕಳ್ಳರು, ಹುಂಡಿಗಳನ್ನು ಒಡೆದು ಹಣ ಕದ್ದಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಅರ್ಚಕರು ದೇವಾಲಯಕ್ಕೆ ಬಂದ ವೇಳೆ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೇ ಅರ್ಚಕರು ಸ್ಥಳೀಯರಿಗೆ ಹಾಗೂ ಜಯಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ಮುರುಡ ಬಸವೇಶ್ವರಸ್ವಾಮಿ ದೇವಾಲಯದ ಅರ್ಚಕ ಕುಮಾರ್ ಅವರು ಕಳ್ಳತನವಾಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದು, ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಿಎಸ್ಐ ಪ್ರಕಾಶ್ ಯತ್ತಿನಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-51-526181853</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಯಪುರ: ಹೋಬಳಿಯ ದೊಡ್ಡಹುಂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮುರುಡ ಬಸವೇಶ್ವರಸ್ವಾಮಿ ದೇವಾಲಯ ಮತ್ತು ಮಾರಮ್ಮ ದೇವಸ್ಥಾನದ ಬಾಗಿಲುಗಳ ಬೀಗ ಮುರಿದ ಕಳ್ಳರು, ಹುಂಡಿಗಳನ್ನು ಒಡೆದು ಹಣ ಕದ್ದಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಅರ್ಚಕರು ದೇವಾಲಯಕ್ಕೆ ಬಂದ ವೇಳೆ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೇ ಅರ್ಚಕರು ಸ್ಥಳೀಯರಿಗೆ ಹಾಗೂ ಜಯಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ಮುರುಡ ಬಸವೇಶ್ವರಸ್ವಾಮಿ ದೇವಾಲಯದ ಅರ್ಚಕ ಕುಮಾರ್ ಅವರು ಕಳ್ಳತನವಾಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದು, ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಿಎಸ್ಐ ಪ್ರಕಾಶ್ ಯತ್ತಿನಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-51-526181853</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>