<p><strong>ಮೈಸೂರು</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮಕ್ಕಳ ದಿನಾಚರಣೆ ಕಾರ್ಯಕ್ರಮಗಳು ಸೋಮವಾರ ಸಂಭ್ರಮದಿಂದ ನಡೆದವು.</p>.<p>ಶಾಲೆಗಳಲ್ಲಿ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಪ್ರತಿಭೆ ಪ್ರದರ್ಶಿಸಿ ಸಂಭ್ರಮಿಸಿದರು.</p>.<p>ಮಕ್ಕಳೊಂದಿಗೆ ಬೆರೆತ ಶಾಸಕರು:</p>.<p>ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಜಯನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸೇರಿ ಮಕ್ಕಳ ದಿನ ಆಚರಿಸಿದರು.</p>.<p>‘ಪರೀಕ್ಷೆ ಒಂದು ಹಬ್ಬ’ ಎನ್ನುವ ಸಂವಾದ ಕಾರ್ಯಕ್ರಮ ನಡೆಸಿದರು. ‘ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಬೇಕು. ಭಯ ಸಲ್ಲದು’ ಎಂದು ಧೈರ್ಯ ತುಂಬಿದರು.</p>.<p>‘ಉನ್ನತ ಸ್ಥಾನದಲ್ಲಿರುವವರಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದವರ ಸಂಖ್ಯೆಯೇ ಹೆಚ್ಚಿದೆ. ಕೀಳರಿಮೆ ಇಟ್ಟುಕೊಳ್ಳಬಾರದು. ಉನ್ನತ ಶಿಕ್ಷಣಕ್ಕೆ ಬೇಕಾದ ಸಹಾಯವನ್ನು ನಾನು ಮಾಡುತ್ತೇನೆ’ ಎಂದು ತಿಳಿಸಿದರು.</p>.<p>‘ಚೆನ್ನಾಗಿ ಓದಿ ಒಳ್ಳೆಯ ಹೆಸರು ಮಾಡಿದರೆ ತಂದೆ–ತಾಯಿ ಹೆಮ್ಮೆ ಪಡುತ್ತಾರೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಮಕ್ಕಳನ್ನು ಪ್ರತಿ ಶನಿವಾರ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕರೆದೊಯ್ದು, ಪಠ್ಯೇತರ ಜ್ಞಾನ ನೀಡುವಂತೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಡಿಡಿಪಿಐ ಜೊತೆ ಚರ್ಚಿಸುತ್ತೇನೆ. ಆಟದ ಮೈದಾನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುತ್ತೇನೆ’ ಎಂದರು.</p>.<p>ಮಕ್ಕಳಿಗೆ ಪುಸ್ತಕ, ಲೇಖನಿ, ಸಿಹಿ ವಿತರಿಸಿದರು.</p>.<p>ಶಾಲೆ ಆವರಣದಲ್ಲಿ ನೂತನವಾಗಿ 2 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿಪೂಜೆ ನೆರೆವೇರಿಸಿದರು.</p>.<p>ಸಂವಾದದಲ್ಲಿ ಪ್ರಶ್ನೆಗೆ ಸರಿಯಾದ ಉತ್ತರ ನೀಡಿದವರಿಗೆ ನಗದು ಬಹುಮಾನ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ರಾಮರಾಧ್ಯಾ, ಬಿಆರ್ಪಿ ಶ್ರೀಕಂಠ ಶಾಸ್ತ್ರಿ, ಶಿಕ್ಷಕರ ಸಂಘದ ಅಧ್ಯಕ್ಷ ಸೋಮೇಗೌಡ, ಸುರೇಶ, ಎಸ್ಡಿಎಂಸಿ ಅಧ್ಯಕ್ಷೆ ವಿನುತಾ, ಬಿಆರ್ಸಿ ಶ್ರೀಕಂಠ ಸ್ವಾಮಿ, ಹರ್ಷ, ಮುಖಂಡರಾದ ಗಿರೀಶ್, ಪ್ರದೀಪ್, ಅನಿಲ್, ಕೃಷ್ಣ, ವಿಜಯ್, ಕೆಂಪರಾಜು, ಉಮೇಶ್, ಸೋಮಣ್ಣ, ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮಕ್ಕಳ ದಿನಾಚರಣೆ ಕಾರ್ಯಕ್ರಮಗಳು ಸೋಮವಾರ ಸಂಭ್ರಮದಿಂದ ನಡೆದವು.</p>.<p>ಶಾಲೆಗಳಲ್ಲಿ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಪ್ರತಿಭೆ ಪ್ರದರ್ಶಿಸಿ ಸಂಭ್ರಮಿಸಿದರು.</p>.<p>ಮಕ್ಕಳೊಂದಿಗೆ ಬೆರೆತ ಶಾಸಕರು:</p>.<p>ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಜಯನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸೇರಿ ಮಕ್ಕಳ ದಿನ ಆಚರಿಸಿದರು.</p>.<p>‘ಪರೀಕ್ಷೆ ಒಂದು ಹಬ್ಬ’ ಎನ್ನುವ ಸಂವಾದ ಕಾರ್ಯಕ್ರಮ ನಡೆಸಿದರು. ‘ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಬೇಕು. ಭಯ ಸಲ್ಲದು’ ಎಂದು ಧೈರ್ಯ ತುಂಬಿದರು.</p>.<p>‘ಉನ್ನತ ಸ್ಥಾನದಲ್ಲಿರುವವರಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದವರ ಸಂಖ್ಯೆಯೇ ಹೆಚ್ಚಿದೆ. ಕೀಳರಿಮೆ ಇಟ್ಟುಕೊಳ್ಳಬಾರದು. ಉನ್ನತ ಶಿಕ್ಷಣಕ್ಕೆ ಬೇಕಾದ ಸಹಾಯವನ್ನು ನಾನು ಮಾಡುತ್ತೇನೆ’ ಎಂದು ತಿಳಿಸಿದರು.</p>.<p>‘ಚೆನ್ನಾಗಿ ಓದಿ ಒಳ್ಳೆಯ ಹೆಸರು ಮಾಡಿದರೆ ತಂದೆ–ತಾಯಿ ಹೆಮ್ಮೆ ಪಡುತ್ತಾರೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಮಕ್ಕಳನ್ನು ಪ್ರತಿ ಶನಿವಾರ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕರೆದೊಯ್ದು, ಪಠ್ಯೇತರ ಜ್ಞಾನ ನೀಡುವಂತೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಡಿಡಿಪಿಐ ಜೊತೆ ಚರ್ಚಿಸುತ್ತೇನೆ. ಆಟದ ಮೈದಾನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುತ್ತೇನೆ’ ಎಂದರು.</p>.<p>ಮಕ್ಕಳಿಗೆ ಪುಸ್ತಕ, ಲೇಖನಿ, ಸಿಹಿ ವಿತರಿಸಿದರು.</p>.<p>ಶಾಲೆ ಆವರಣದಲ್ಲಿ ನೂತನವಾಗಿ 2 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿಪೂಜೆ ನೆರೆವೇರಿಸಿದರು.</p>.<p>ಸಂವಾದದಲ್ಲಿ ಪ್ರಶ್ನೆಗೆ ಸರಿಯಾದ ಉತ್ತರ ನೀಡಿದವರಿಗೆ ನಗದು ಬಹುಮಾನ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ರಾಮರಾಧ್ಯಾ, ಬಿಆರ್ಪಿ ಶ್ರೀಕಂಠ ಶಾಸ್ತ್ರಿ, ಶಿಕ್ಷಕರ ಸಂಘದ ಅಧ್ಯಕ್ಷ ಸೋಮೇಗೌಡ, ಸುರೇಶ, ಎಸ್ಡಿಎಂಸಿ ಅಧ್ಯಕ್ಷೆ ವಿನುತಾ, ಬಿಆರ್ಸಿ ಶ್ರೀಕಂಠ ಸ್ವಾಮಿ, ಹರ್ಷ, ಮುಖಂಡರಾದ ಗಿರೀಶ್, ಪ್ರದೀಪ್, ಅನಿಲ್, ಕೃಷ್ಣ, ವಿಜಯ್, ಕೆಂಪರಾಜು, ಉಮೇಶ್, ಸೋಮಣ್ಣ, ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>