ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಪಿ.ಕೆ.ಖಂಡೋಬಾ ಅವರು ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶರಾಗಿದ್ದ ಅವಧಿಯಲ್ಲಿ 15 ಜಿಲ್ಲೆಗಳಲ್ಲಿ ಶಾಸ್ತ್ರೀಯ ಭಾಷಾ ಕಮ್ಮಟಗಳನ್ನು ನಡೆಸಲಾಗಿತ್ತು. ಹೊಸ ತಲೆಮಾರು, ಹಳಗನ್ನಡ ಪಠ್ಯಗಳನ್ನು ಹೇಗೆ ಓದಬೇಕು ಎಂಬುದನ್ನು ವಿವಿಧ ವಿದ್ವಾಂಸರ ಮೂಲಕ ತರಬೇತಿ ನೀಡಲಾಗಿತ್ತು. ಆದರೆ, ಎರಡು ವರ್ಷಗಳ ಹಿಂದೆ ಈ ಕಮ್ಮಟ ನಿಂತು ಹೋಗಿತ್ತು. ಇದನ್ನು ಮತ್ತೆ ಆರಂಭಿಸಲು ಸಿಐಐಎಲ್ ನಿರ್ದೇಶಕರು ಒಪ್ಪಿದ್ದಾರೆ’ ಎಂದು ತಿಳಿಸಿದರು.