ಮೈಸೂರು: ಜಯಲಕ್ಷ್ಮಿಪುರಂನಲ್ಲಿರುವ ಅಥರ್ವ ಮಲ್ಟಿ ಸ್ಪೆಷಲಿಟಿ ಆಯುರ್ವೇದಿಕ್ ಅಂಡ್ ಹೀಲಿಂಗ್ ಸೆಂಟರ್ನಲ್ಲಿ ಗಣಪತಿ ಹಬ್ಬದ ಅಂಗವಾಗಿ ವಿನ್ಯಾಸ ಈವೆಂಟ್ಸ್ ಸಂಸ್ಥೆಯಿಂದ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ತಯಾರಿಕೆ ಕಾರ್ಯಾಗಾರ ನಡೆಯಿತು.
ಸಂಸ್ಥೆಯ ಪದಾಧಿಕಾರಿ ಜ್ಯೋತಿ ರೇಚಣ್ಣ ಮಾತನಾಡಿ, ‘ನಗರದಲ್ಲಿ ಪಿಒಪಿ ಗಣಪತಿ ಮೂರ್ತಿಗಳಿಂದ ಆಗುತ್ತಿರುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಪಿಒಪಿ ಗಣಪತಿ ಮೂರ್ತಿಗಳಿಂದ ಜಲಮೂಲಗಳು ಕಲುಷಿತಗೊಳ್ಳುತ್ತಿವೆ. ಇವುಗಳ ಬದಲಿಗೆ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು' ಎಂದು ಹೇಳಿದರು.
ಶಾಲಾ- ಕಾಲೇಜುಗಳ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸ್ಥಳೀಯರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.