<p><strong>ಮೈಸೂರು:</strong> ‘ಶೌಚಾಲಯದೊಳಗೆ ಹೋಗಲು ಸಾಧ್ಯವಿಲ್ಲದಂತಹ ಅಸಹ್ಯಕರ ವಾತಾವರಣವಿದೆ. ಮುಚ್ಚಿರುವ ಕ್ಯಾಂಟೀನ್, ಸೀಲ್ ಮಾಡಿರುವ ಗ್ರಂಥಾಲಯದ ಬೀಗ ತೆರವುಗೊಳಿಸಿ... ಕಾಲೇಜಿಗೆ ಆವರಣಗೋಡೆ ನಿರ್ಮಿಸಿಕೊಡಿ... ನಮಗೂ ಲ್ಯಾಪ್ಟಾಪ್ ಒದಗಿಸಿ...’</p>.<p>ಕಾಲೇಜಿಗೆ ಶುಕ್ರವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ನಾರಾಯಣಗೆ ಮೈಸೂರಿನ ಶತಮಾನದ ಐತಿಹ್ಯ ಹೊಂದಿರುವ ಮಹಾರಾಣಿ ಮಹಿಳಾ ಕಲಾ ಹಾಗೂ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಸಲ್ಲಿಸಿದ ಒಕ್ಕೊರಲ ಬೇಡಿಕೆಯಿದು.</p>.<p>ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪಲ್ಲವಿ ಹೇಳಿದ ಅಹವಾಲುಗಳಿಗೆ ಶಾಸಕ ಎಲ್.ನಾಗೇಂದ್ರ ಸಹ ದನಿಗೂಡಿಸಿದರು. ಶೌಚಾಲಯದ ಸಮಸ್ಯೆ ಬಗ್ಗೆ ಪ್ರಾಂಶುಪಾಲರನ್ನು ವಿಚಾರಿಸಿ, ಈ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಡಿಸಿಎಂ ಸೂಚಿಸಿದರು.</p>.<p>ಸಭೆಯಲ್ಲೇ ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮೊಬೈಲ್ ಕರೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಆರ್.ಮೂಗೇಶಪ್ಪ ಅವರಿಗೆ ಡಿಸಿಎಂ ಸೂಚಿಸಿದರು. ನಂತರ ಮೆಲುದನಿಯಲ್ಲೇ ಆಯುಕ್ತರೊಂದಿಗೆ ಮಾತನಾಡಿದರು.</p>.<p>ವಿದ್ಯಾರ್ಥಿನಿಯೊಬ್ಬಳು ಈ ಸಂದರ್ಭ ಲ್ಯಾಪ್ಟಾಪ್ ಕೊಟ್ಟರೇ ಅಂಗೈನಲ್ಲೇ ಪ್ರಪಂಚ ಇರಲಿದೆ. ವಿದ್ಯಾಭ್ಯಾಸಕ್ಕಷ್ಟೇ ಬಳಸಿಕೊಳ್ಳುತ್ತೇವೆ. ನಾವೆಲ್ಲಾ ಬಡವರ ಮಕ್ಕಳು. ಎಲ್ಲರಿಗೂ ಲ್ಯಾಪ್ಟಾಪ್ ಒದಗಿಸಿ ಎಂದು ಮತ್ತೊಮ್ಮೆ ಉಪಮುಖ್ಯಮಂತ್ರಿಗೆ ಮನವಿ ಮಾಡಿದರು.</p>.<p><strong>ಶಿಕ್ಷಣಕ್ಕೆ ಆದ್ಯತೆ: ಡಿಸಿಎಂ</strong></p>.<p>‘ಶಿಕ್ಷಣಕ್ಕೆ ಮೊದಲ ಆದ್ಯತೆ. 400ಕ್ಕೂ ಹೆಚ್ಚು ಕಾಲೇಜುಗಳು ಚಿಂತಾಜನಕ ಸ್ಥಿತಿಯಲ್ಲಿವೆ. ಉಳಿದವು ಪರವಾಗಿಲ್ಲ. ಮೂಲ ಸೌಕರ್ಯ ಒದಗಿಸುವ ಜತೆಗೆ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳುವೆ’ ಎಂದು ಅಶ್ವಥನಾರಾಯಣ ತಿಳಿಸಿದರು.</p>.<p>‘ಗುಣಮಟ್ಟದಲ್ಲಿ ನಾವು ಸಾಕಷ್ಟು ಹಿಂದುಳಿದಿದ್ದೇವೆ. ಎಲ್ಲರ ಜತೆಗೂಡಿ ನಿರ್ದಿಷ್ಟ ಗುರಿ ತಲುಪಬೇಕಿದೆ. ಮೈಸೂರು ರಾಜ್ಯಕ್ಕೆ ಮಾದರಿಯಾಗಿದೆ. ಕಾಲೇಜುಗಳಿಂದಲೇ ಐಟಿ–ಬಿಟಿ ಕಂಪನಿಗಳೊಟ್ಟಿಗೆ ವಿದ್ಯಾರ್ಥಿಗಳಿಗೆ ಸಂವಹನ ಏರ್ಪಡಬೇಕಿದೆ’ ಎಂದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಶೌಚಾಲಯದೊಳಗೆ ಹೋಗಲು ಸಾಧ್ಯವಿಲ್ಲದಂತಹ ಅಸಹ್ಯಕರ ವಾತಾವರಣವಿದೆ. ಮುಚ್ಚಿರುವ ಕ್ಯಾಂಟೀನ್, ಸೀಲ್ ಮಾಡಿರುವ ಗ್ರಂಥಾಲಯದ ಬೀಗ ತೆರವುಗೊಳಿಸಿ... ಕಾಲೇಜಿಗೆ ಆವರಣಗೋಡೆ ನಿರ್ಮಿಸಿಕೊಡಿ... ನಮಗೂ ಲ್ಯಾಪ್ಟಾಪ್ ಒದಗಿಸಿ...’</p>.<p>ಕಾಲೇಜಿಗೆ ಶುಕ್ರವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ನಾರಾಯಣಗೆ ಮೈಸೂರಿನ ಶತಮಾನದ ಐತಿಹ್ಯ ಹೊಂದಿರುವ ಮಹಾರಾಣಿ ಮಹಿಳಾ ಕಲಾ ಹಾಗೂ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಸಲ್ಲಿಸಿದ ಒಕ್ಕೊರಲ ಬೇಡಿಕೆಯಿದು.</p>.<p>ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪಲ್ಲವಿ ಹೇಳಿದ ಅಹವಾಲುಗಳಿಗೆ ಶಾಸಕ ಎಲ್.ನಾಗೇಂದ್ರ ಸಹ ದನಿಗೂಡಿಸಿದರು. ಶೌಚಾಲಯದ ಸಮಸ್ಯೆ ಬಗ್ಗೆ ಪ್ರಾಂಶುಪಾಲರನ್ನು ವಿಚಾರಿಸಿ, ಈ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಡಿಸಿಎಂ ಸೂಚಿಸಿದರು.</p>.<p>ಸಭೆಯಲ್ಲೇ ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮೊಬೈಲ್ ಕರೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಆರ್.ಮೂಗೇಶಪ್ಪ ಅವರಿಗೆ ಡಿಸಿಎಂ ಸೂಚಿಸಿದರು. ನಂತರ ಮೆಲುದನಿಯಲ್ಲೇ ಆಯುಕ್ತರೊಂದಿಗೆ ಮಾತನಾಡಿದರು.</p>.<p>ವಿದ್ಯಾರ್ಥಿನಿಯೊಬ್ಬಳು ಈ ಸಂದರ್ಭ ಲ್ಯಾಪ್ಟಾಪ್ ಕೊಟ್ಟರೇ ಅಂಗೈನಲ್ಲೇ ಪ್ರಪಂಚ ಇರಲಿದೆ. ವಿದ್ಯಾಭ್ಯಾಸಕ್ಕಷ್ಟೇ ಬಳಸಿಕೊಳ್ಳುತ್ತೇವೆ. ನಾವೆಲ್ಲಾ ಬಡವರ ಮಕ್ಕಳು. ಎಲ್ಲರಿಗೂ ಲ್ಯಾಪ್ಟಾಪ್ ಒದಗಿಸಿ ಎಂದು ಮತ್ತೊಮ್ಮೆ ಉಪಮುಖ್ಯಮಂತ್ರಿಗೆ ಮನವಿ ಮಾಡಿದರು.</p>.<p><strong>ಶಿಕ್ಷಣಕ್ಕೆ ಆದ್ಯತೆ: ಡಿಸಿಎಂ</strong></p>.<p>‘ಶಿಕ್ಷಣಕ್ಕೆ ಮೊದಲ ಆದ್ಯತೆ. 400ಕ್ಕೂ ಹೆಚ್ಚು ಕಾಲೇಜುಗಳು ಚಿಂತಾಜನಕ ಸ್ಥಿತಿಯಲ್ಲಿವೆ. ಉಳಿದವು ಪರವಾಗಿಲ್ಲ. ಮೂಲ ಸೌಕರ್ಯ ಒದಗಿಸುವ ಜತೆಗೆ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳುವೆ’ ಎಂದು ಅಶ್ವಥನಾರಾಯಣ ತಿಳಿಸಿದರು.</p>.<p>‘ಗುಣಮಟ್ಟದಲ್ಲಿ ನಾವು ಸಾಕಷ್ಟು ಹಿಂದುಳಿದಿದ್ದೇವೆ. ಎಲ್ಲರ ಜತೆಗೂಡಿ ನಿರ್ದಿಷ್ಟ ಗುರಿ ತಲುಪಬೇಕಿದೆ. ಮೈಸೂರು ರಾಜ್ಯಕ್ಕೆ ಮಾದರಿಯಾಗಿದೆ. ಕಾಲೇಜುಗಳಿಂದಲೇ ಐಟಿ–ಬಿಟಿ ಕಂಪನಿಗಳೊಟ್ಟಿಗೆ ವಿದ್ಯಾರ್ಥಿಗಳಿಗೆ ಸಂವಹನ ಏರ್ಪಡಬೇಕಿದೆ’ ಎಂದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>