ನವದೆಹಲಿಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಸ್ವಚ್ಛ ಮಧ್ಯಮ ನಗರ’ ಪ್ರಶಸ್ತಿಯನ್ನು ಪ್ರದಾನ ಮಾಡಲಾ ಯಿತು. ‘ಕಸ ಮುಕ್ತ ನಗರಗಳ ವಿಭಾಗ’ ದಲ್ಲಿ 5 ಸ್ಟಾರ್ಗಳ ಶ್ರೇಯಾಂಕಕ್ಕೆ ನಗರ ಪಾತ್ರವಾ ಗಿದೆ. ಸಚಿವ ಹರದೀಪ್ ಸಿಂಗ್ ಪುರಿ ಅವರಿಂದ ಮೇಯರ್ ಶಿವಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್, ಉಪ ಮೇಯರ್ ಡಾ.ಜಿ.ರೂಪಾ ಯೋಗೇಶ್, ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಇದ್ದರು.