<p><strong>ಪಿರಿಯಾಪಟ್ಟಣ</strong>: ಸಾರ್ವಜನಿಕರು ಕಸ ಸುರಿಯುತ್ತಿರುವ ಜಾಗದಲ್ಲಿ ರಂಗೋಲಿ ಬಿಡಿಸುವ ಮೂಲಕ ಅರಿವು ಮೂಡಿಸಲಾಯಿತು.</p>.<p>ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಜನರು ಕಸ ವಿಲೇವಾರಿ ವಾಹನಗಳಿಗೆ ಕಸ ಹಾಕದೆ ಕೆಲವು ಸ್ಥಳಗಳಲ್ಲಿ ಕಸ ಸುರಿಯುತ್ತಿರುವ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಸ ಸುರಿಯುತ್ತಿದ್ದ ಸ್ಥಳವನ್ನು ಮಂಗಳವಾರ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುರಸಭೆ ಅಧ್ಯಕ್ಷ ಪ್ರಕಾಶ್ ಸಿಂಗ್, ಕಸ ವಿಂಗಡನೆ ಮತ್ತು ವಿಲೇವಾರಿಯಲ್ಲಿ ನಾಗರಿಕರ ಪಾತ್ರ ಬಹುಮುಖ್ಯ. ನಾಗರಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.</p>.<p>ಸ್ಥಾಯಿ ಸಮಿತಿಯ ಅಧ್ಯಕ್ಷ ಅಬ್ದುಲ್ ಅರ್ಷದ್ ಮಾತನಾಡಿ, ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಇಂತಹ ಅನೇಕ ಜಾಗ ಗುರುತಿಸಿ, ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಜನರು ಇದರಿಂದ ಎಚ್ಚೆತ್ತುಕೊಂಡು ಕಸ ವಿಲೇವಾರಿ ವಾಹನಗಳಲ್ಲಿ ಕಸ ನೀಡಬೇಕು ಎಂದರು.</p>.<p>ವಾರ್ಡ್ ಸದಸ್ಯ ಮಂಜುನಾಥ, ಹೆಲ್ತ್ ಇನ್ ಸ್ಪೆಕ್ಟರ್ ಕೆ.ಜೆ.ಮೋಹನ್ ಮಾತನಾಡಿದರು.</p>.<p>ಪುರಸಭೆ ಸದಸ್ಯ ನಿರಂಜನ್, ಹೆಲ್ತ್ ಇನ್ ಸ್ಪೆಕ್ಟರ್ ಪ್ರದೀಪ್, ಪೌರ ಕಾರ್ಮಿಕ ಸಿಬ್ಬಂದಿಗಳಾದ ರಂಗರಾಜು, ಶ್ರೀನಿವಾಸ್, ಮಂಜುಳಾ, ಆನಂದ್, ಚಿಹ್ನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ</strong>: ಸಾರ್ವಜನಿಕರು ಕಸ ಸುರಿಯುತ್ತಿರುವ ಜಾಗದಲ್ಲಿ ರಂಗೋಲಿ ಬಿಡಿಸುವ ಮೂಲಕ ಅರಿವು ಮೂಡಿಸಲಾಯಿತು.</p>.<p>ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಜನರು ಕಸ ವಿಲೇವಾರಿ ವಾಹನಗಳಿಗೆ ಕಸ ಹಾಕದೆ ಕೆಲವು ಸ್ಥಳಗಳಲ್ಲಿ ಕಸ ಸುರಿಯುತ್ತಿರುವ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಸ ಸುರಿಯುತ್ತಿದ್ದ ಸ್ಥಳವನ್ನು ಮಂಗಳವಾರ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುರಸಭೆ ಅಧ್ಯಕ್ಷ ಪ್ರಕಾಶ್ ಸಿಂಗ್, ಕಸ ವಿಂಗಡನೆ ಮತ್ತು ವಿಲೇವಾರಿಯಲ್ಲಿ ನಾಗರಿಕರ ಪಾತ್ರ ಬಹುಮುಖ್ಯ. ನಾಗರಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.</p>.<p>ಸ್ಥಾಯಿ ಸಮಿತಿಯ ಅಧ್ಯಕ್ಷ ಅಬ್ದುಲ್ ಅರ್ಷದ್ ಮಾತನಾಡಿ, ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಇಂತಹ ಅನೇಕ ಜಾಗ ಗುರುತಿಸಿ, ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಜನರು ಇದರಿಂದ ಎಚ್ಚೆತ್ತುಕೊಂಡು ಕಸ ವಿಲೇವಾರಿ ವಾಹನಗಳಲ್ಲಿ ಕಸ ನೀಡಬೇಕು ಎಂದರು.</p>.<p>ವಾರ್ಡ್ ಸದಸ್ಯ ಮಂಜುನಾಥ, ಹೆಲ್ತ್ ಇನ್ ಸ್ಪೆಕ್ಟರ್ ಕೆ.ಜೆ.ಮೋಹನ್ ಮಾತನಾಡಿದರು.</p>.<p>ಪುರಸಭೆ ಸದಸ್ಯ ನಿರಂಜನ್, ಹೆಲ್ತ್ ಇನ್ ಸ್ಪೆಕ್ಟರ್ ಪ್ರದೀಪ್, ಪೌರ ಕಾರ್ಮಿಕ ಸಿಬ್ಬಂದಿಗಳಾದ ರಂಗರಾಜು, ಶ್ರೀನಿವಾಸ್, ಮಂಜುಳಾ, ಆನಂದ್, ಚಿಹ್ನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>