<p><strong>ಮೈಸೂರು</strong>: ‘ಜನೌಷಧಿ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರ ನೋಟಿಸ್ ನೀಡಿರುವುದನ್ನು ಖಂಡಿಸಿ’ ಕೆ.ಆರ್.ಆಸ್ಪತ್ರೆ ಆವರಣದಲ್ಲಿ ನಗರ ಬಿಜೆಪಿ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು.</p>.<p>ಆಸ್ಪತ್ರೆಯ ಮುಂಭಾಗ ಆವರಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಮೋದಿ ಸರ್ಕಾರದ ಯೋಜನೆಗಳ ವಿರುದ್ಧ ದ್ವೇಷ ಸಾಧಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ’. ‘ಬಡವರಿಗೆ ವರವಾಗಿದ್ದ ಜನೌಷಧಿ ಕೇಂದ್ರ ಮುಚ್ಚಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’, ‘ಖಾಸಗಿ ಮೆಡಿಕಲ್ ಮಾಫಿಯಾಗೆ ಮಣಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಇತ್ಯಾದಿ ಘೋಷಣಾ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ‘ಕೇಂದ್ರ ಸರ್ಕಾರವು ಜನರಿಗೆ ಔಷಧಿ ಕಡಿಮೆ ಬೆಲೆಗೆ ಸಿಗಬೇಕೆಂದು ಜನೌಷಧಿ ಕೇಂದ್ರ ತೆರೆದಿದೆ. ಆದರೆ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ನಾವು ಐನೂರಕ್ಕೂ ಹೆಚ್ಚು ಔಷಧಿಯನ್ನು ಆಸ್ಪತ್ರೆಗಳಲ್ಲಿ ಕೊಡುತ್ತೇವೆ ಎಂದು ಸುಳ್ಳು ಅಂಶವನ್ನು ವಿಧಾನಸಭೆಯಲ್ಲಿ ಹೇಳಿದ್ದರು. ಅಶ್ವತ್ಥನಾರಾಯಣ ಕೇವಲ 250 ಔಷಧಿ ಮಾತ್ರ ಲಭ್ಯವಿದೆ ಎಂದಿದ್ದಾರೆ. ಈ ನಡುವೆ ನಮ್ಮ ಸರ್ಕಾರವೇ ಉಚಿತವಾಗಿ ಜೌಷಧಿ ನೀಡುತ್ತಿರುವುದರಿಂದ ಜನೌಷಧಿ ಅಗತ್ಯವಿಲ್ಲ ಎಂಬ ಉದ್ಧಟತನದ ಹೇಳಿಕೆಗಳನ್ನು ಕಾಂಗ್ರೆಸ್ ಪಕ್ಷದ ಸಚಿವರು ನೀಡುತ್ತಿದ್ದಾರೆ. ಈ ರೀತಿ ಪ್ರಶ್ನಿಸುವವರಿಗೆ ಕೇಂದ್ರದ ಅಕ್ಕಿ ಯಾಕೆ ಬೇಕು’ ಎಂದು ಪ್ರಶ್ನಿಸಿದರು.</p>.<p>‘ಜನೌಷಧಿ ಕೇಂದ್ರ ಮುಚ್ಚುವ ಮೂಲಕ ಮಧ್ಯಮ ವರ್ಗಕ್ಕೆ ತೊಂದರೆ ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನಮಂತ್ರಿ ಫೋಟೊ ಇರುವ ಕಾರಣಕ್ಕೆ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿದ್ದಾರೆ. ಹಾಗಿದ್ದರೆ ಇಂದಿರಾ ಕ್ಯಾಂಟೀನ್, ಬಸ್ಗಳಲ್ಲಿ ನಿಮ್ಮ ಪಕ್ಷದವರ ಫೋಟೊ ಯಾಕೆ ಹಾಕಿದ್ದೀರಿ, ಪ್ರಧಾನ ಮಂತ್ರಿ ಫೋಟೊ ಬಂದಿದ್ದಕ್ಕೆ ರಾಜಕಾರಣ ಮಾಡುವ ಹಾಗಿದ್ದರೆ ಯಾರೊಬ್ಬರ ಫೋಟೊವನ್ನೂ ಪ್ರದರ್ಶಿಸಬಾರದೆಂಬ ನಿರ್ಣಯ ಮಾಡಲಿ’ ಎಂದು ಆಗ್ರಹಿಸಿದರು. </p>.<p>ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ‘ಕಾಂಗ್ರೆಸ್ ಸರ್ಕಾರವು ದಿನನಿತ್ಯ ಉಪಯೋಗಿಸುವ ವಸ್ತುಗಳಿಗೆ ಬೆಲೆಯೇರಿಕೆ ಮಾಡಿದೆ. ಈಗ ಖಾಸಗಿ ಮೆಡಿಕಲ್ ಮಾಫಿಯಾದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿದೆ. ತಕ್ಷಣವೇ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಡಿಸಿರುವ ಆದೇಶ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಡಾ.ಅನಿಲ್ ಥಾಮಸ್, ರಘು, ಜೋಗಿ ಮಂಜು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಜನೌಷಧಿ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರ ನೋಟಿಸ್ ನೀಡಿರುವುದನ್ನು ಖಂಡಿಸಿ’ ಕೆ.ಆರ್.ಆಸ್ಪತ್ರೆ ಆವರಣದಲ್ಲಿ ನಗರ ಬಿಜೆಪಿ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು.</p>.<p>ಆಸ್ಪತ್ರೆಯ ಮುಂಭಾಗ ಆವರಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಮೋದಿ ಸರ್ಕಾರದ ಯೋಜನೆಗಳ ವಿರುದ್ಧ ದ್ವೇಷ ಸಾಧಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ’. ‘ಬಡವರಿಗೆ ವರವಾಗಿದ್ದ ಜನೌಷಧಿ ಕೇಂದ್ರ ಮುಚ್ಚಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’, ‘ಖಾಸಗಿ ಮೆಡಿಕಲ್ ಮಾಫಿಯಾಗೆ ಮಣಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಇತ್ಯಾದಿ ಘೋಷಣಾ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ‘ಕೇಂದ್ರ ಸರ್ಕಾರವು ಜನರಿಗೆ ಔಷಧಿ ಕಡಿಮೆ ಬೆಲೆಗೆ ಸಿಗಬೇಕೆಂದು ಜನೌಷಧಿ ಕೇಂದ್ರ ತೆರೆದಿದೆ. ಆದರೆ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ನಾವು ಐನೂರಕ್ಕೂ ಹೆಚ್ಚು ಔಷಧಿಯನ್ನು ಆಸ್ಪತ್ರೆಗಳಲ್ಲಿ ಕೊಡುತ್ತೇವೆ ಎಂದು ಸುಳ್ಳು ಅಂಶವನ್ನು ವಿಧಾನಸಭೆಯಲ್ಲಿ ಹೇಳಿದ್ದರು. ಅಶ್ವತ್ಥನಾರಾಯಣ ಕೇವಲ 250 ಔಷಧಿ ಮಾತ್ರ ಲಭ್ಯವಿದೆ ಎಂದಿದ್ದಾರೆ. ಈ ನಡುವೆ ನಮ್ಮ ಸರ್ಕಾರವೇ ಉಚಿತವಾಗಿ ಜೌಷಧಿ ನೀಡುತ್ತಿರುವುದರಿಂದ ಜನೌಷಧಿ ಅಗತ್ಯವಿಲ್ಲ ಎಂಬ ಉದ್ಧಟತನದ ಹೇಳಿಕೆಗಳನ್ನು ಕಾಂಗ್ರೆಸ್ ಪಕ್ಷದ ಸಚಿವರು ನೀಡುತ್ತಿದ್ದಾರೆ. ಈ ರೀತಿ ಪ್ರಶ್ನಿಸುವವರಿಗೆ ಕೇಂದ್ರದ ಅಕ್ಕಿ ಯಾಕೆ ಬೇಕು’ ಎಂದು ಪ್ರಶ್ನಿಸಿದರು.</p>.<p>‘ಜನೌಷಧಿ ಕೇಂದ್ರ ಮುಚ್ಚುವ ಮೂಲಕ ಮಧ್ಯಮ ವರ್ಗಕ್ಕೆ ತೊಂದರೆ ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನಮಂತ್ರಿ ಫೋಟೊ ಇರುವ ಕಾರಣಕ್ಕೆ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿದ್ದಾರೆ. ಹಾಗಿದ್ದರೆ ಇಂದಿರಾ ಕ್ಯಾಂಟೀನ್, ಬಸ್ಗಳಲ್ಲಿ ನಿಮ್ಮ ಪಕ್ಷದವರ ಫೋಟೊ ಯಾಕೆ ಹಾಕಿದ್ದೀರಿ, ಪ್ರಧಾನ ಮಂತ್ರಿ ಫೋಟೊ ಬಂದಿದ್ದಕ್ಕೆ ರಾಜಕಾರಣ ಮಾಡುವ ಹಾಗಿದ್ದರೆ ಯಾರೊಬ್ಬರ ಫೋಟೊವನ್ನೂ ಪ್ರದರ್ಶಿಸಬಾರದೆಂಬ ನಿರ್ಣಯ ಮಾಡಲಿ’ ಎಂದು ಆಗ್ರಹಿಸಿದರು. </p>.<p>ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ‘ಕಾಂಗ್ರೆಸ್ ಸರ್ಕಾರವು ದಿನನಿತ್ಯ ಉಪಯೋಗಿಸುವ ವಸ್ತುಗಳಿಗೆ ಬೆಲೆಯೇರಿಕೆ ಮಾಡಿದೆ. ಈಗ ಖಾಸಗಿ ಮೆಡಿಕಲ್ ಮಾಫಿಯಾದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿದೆ. ತಕ್ಷಣವೇ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಡಿಸಿರುವ ಆದೇಶ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಡಾ.ಅನಿಲ್ ಥಾಮಸ್, ರಘು, ಜೋಗಿ ಮಂಜು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>