ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ನಾರಾಯಣ, ‘ಸ್ವತಃ ಮುಖ್ಯಮಂತ್ರಿಗಳೆ ಭರವಸೆ ನೀಡಿದ್ದಾರೆ. ಇವರ ಮಾತನ್ನು ನಂಬಿ ಹಾಗೂ ದಸರೆ ಇರುವಾಗ ಪ್ರವಾಸಿಗರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಪ್ರತಿಭಟನೆಯನ್ನು ವಾಪಸ್ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನವಾಗಿ, ಜಾರಿಗೆ ಬಾರದಿದ್ದರೆ ಮತ್ತೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.