<p><strong>ಮೈಸೂರು:</strong> ‘20ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಿರುವ ಹೋಟೆಲ್ಗಳಿಗೆ ಕೈಗಾರಿಕೆಯ ಸ್ಥಾನಮಾನ ನೀಡಲು ಕ್ರಮ ವಹಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p><p>ಇಲ್ಲಿನ ವಿಜಯನಗರದ ಬಂಟರ ಭವನದಲ್ಲಿ ಶನಿವಾರ ನಡೆದ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಹೋಟೆಲ್ ಮಾಲೀಕರ ಸಂಘದವರ ಮನವಿಗೆ ಅವರು ಸ್ಪಂದಿಸಿದರು.</p><p>‘ಪ್ರವಾಸೋದ್ಯಮ ಬೆಳೆಯಲು ಹೋಟೆಲ್ ಉದ್ಯಮ ಬಹಳ ಸಹಕಾರಿಯಾಗಿದೆ. ಈ ಉದ್ಯಮದ ಬೆಳವಣಿಗೆಗೆ ಎಲ್ಲ ರೀತಿಯ ಸಹಕಾರ ಕೊಡಲಾಗುವುದು. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳಿಂದ ಆಗಿರುವ ಅನುಕೂಲಗಳ ಬಗ್ಗೆ ಹೋಟೆಲ್ ಮಾಲೀಕರು ಹಾಗೂ ಸಂಘದವರು ಪ್ರಚಾರ ಮಾಡಬೇಕು’ ಎಂದು ಕೋರಿದರು.</p><p>‘ಶಕ್ತಿ’ ಯೋಜನೆಯಿಂದ ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮ ವೃದ್ಧಿಯಾಗುತ್ತಿದೆ. ಇದರಿಂದ, ಸರ್ಕಾರಕ್ಕೆ ತೆರಿಗೆಯೂ ಬರುತ್ತದೆ ಹಾಗೂ ರಾಜ್ಯದ ಆದಾಯವೂ ಹೆಚ್ಚುತ್ತದೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘20ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಿರುವ ಹೋಟೆಲ್ಗಳಿಗೆ ಕೈಗಾರಿಕೆಯ ಸ್ಥಾನಮಾನ ನೀಡಲು ಕ್ರಮ ವಹಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p><p>ಇಲ್ಲಿನ ವಿಜಯನಗರದ ಬಂಟರ ಭವನದಲ್ಲಿ ಶನಿವಾರ ನಡೆದ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಹೋಟೆಲ್ ಮಾಲೀಕರ ಸಂಘದವರ ಮನವಿಗೆ ಅವರು ಸ್ಪಂದಿಸಿದರು.</p><p>‘ಪ್ರವಾಸೋದ್ಯಮ ಬೆಳೆಯಲು ಹೋಟೆಲ್ ಉದ್ಯಮ ಬಹಳ ಸಹಕಾರಿಯಾಗಿದೆ. ಈ ಉದ್ಯಮದ ಬೆಳವಣಿಗೆಗೆ ಎಲ್ಲ ರೀತಿಯ ಸಹಕಾರ ಕೊಡಲಾಗುವುದು. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳಿಂದ ಆಗಿರುವ ಅನುಕೂಲಗಳ ಬಗ್ಗೆ ಹೋಟೆಲ್ ಮಾಲೀಕರು ಹಾಗೂ ಸಂಘದವರು ಪ್ರಚಾರ ಮಾಡಬೇಕು’ ಎಂದು ಕೋರಿದರು.</p><p>‘ಶಕ್ತಿ’ ಯೋಜನೆಯಿಂದ ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮ ವೃದ್ಧಿಯಾಗುತ್ತಿದೆ. ಇದರಿಂದ, ಸರ್ಕಾರಕ್ಕೆ ತೆರಿಗೆಯೂ ಬರುತ್ತದೆ ಹಾಗೂ ರಾಜ್ಯದ ಆದಾಯವೂ ಹೆಚ್ಚುತ್ತದೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>