ಮೈಸೂರು: ಪದ್ಮಭೂಷಣ ಪುರಸ್ಕಾರಕ್ಕೆ ಭಾಜನರಾಗಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಅಭಿನಂದಿಸಿದರು.
ಇಲ್ಲಿನ ಕುವೆಂಪುನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಸಾಹಿತಿ ಪ್ರಧಾನ ಗುರುದತ್ತ, ‘ಮುಡಾ’ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇದ್ದರು.