<p><strong>ಮೈಸೂರು:</strong> ‘ಬೆಂಗಳೂರಿನಲ್ಲಿ ಮಳೆ ಬಂದಾಗ ಪದೇಪದೇ ಸಮಸ್ಯೆ ಉಂಟಾಗುತ್ತಿದ್ದು ಎಲ್ಲೆಲ್ಲಿ ರಾಜಕಾಲುವೆ, ಕೆರೆ ಒತ್ತುವರಿಯಾಗಿದೆ ಎಂಬುದರ ಸಮೀಕ್ಷೆ ನಡೆಸಿ ಆ ಜಾಗದಲ್ಲಿರುವ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ಸೂಚಿಸಿರುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಳೆ ಬಂದಾಗ ತಗ್ಗು ಪ್ರದೇಶಗಳು ಜಲಾವೃತವಾಗುತ್ತವೆ. ಕೆರೆಯ ಆವರಣದಲ್ಲಿರುವ ಬಡಾವಣೆಗಳಿಗೆ, ರಾಜಕಾಲುವೆ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿದೆ. ಎಲ್ಲಿ ಹೆಚ್ಚು ಸಮಸ್ಯೆ ಇದೆ ಎಂಬುದನ್ನು ಗುರುತಿಸುತ್ತಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು’ ಎಂದರು.</p>.<p>‘ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕಾಮಗಾರಿ ಸಂಬಂಧ ಕಾರ್ಯಪಡೆ ರಚಿಸಲಾಗಿದೆ. ಒಂದೇ ರಸ್ತೆಯಲ್ಲಿ ಎಷ್ಟು ಬಾರಿ ಕಾಮಗಾರಿ ನಡೆದಿದೆ, ಯಾರು ಆ ಕಾಮಗಾರಿ ನಡೆಸಿದ್ದು ಹಾಗೂ ಅದರ ಗುಣಮಟ್ಟ ಪರಿಶೀಲಿಸಿ ವರದಿ ನೀಡಲು ಸೂಚಿಸಿದ್ದೇನೆ. ಕಳಪೆಯಾಗಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಮಳೆ ನಿಂತು ಮೇಲೆ ವೈಜ್ಞಾನಿಕವಾಗಿ ಗುಂಡಿ ಮುಚ್ಚುವ ಕಾರ್ಯ ಪೂರ್ಣಗೊಳಿಸಲಾಗುವುದು. ಪರಿಹಾರ ಕಾರ್ಯಕ್ಕೂ ಸೂಚಿಸಿದ್ದೇನೆ’ ಎಂದು ಹೇಳಿದರು.</p>.<p>ದಸರೆ ಕುರಿತು ಪ್ರತಿಕ್ರಿಯಿಸಿ, ‘ನಾಡಹಬ್ಬ ಆಚರಿಸಲು ಒಬ್ಬ ನಾಗರಿಕನಿಗೆ ಎಷ್ಟು ಖುಷಿಯಾಗಿದೆಯೋ ಅಷ್ಟೇ ಖುಷಿ ನನಗೆ. ಚಾಮುಂಡೇಶ್ವರಿ ಕೃಪೆಯಿಂದ ಈ ಬಾರಿ ದಸರೆ ಮುನ್ನಡೆಸುವ ಅವಕಾಶ ಸಿಕ್ಕಿದೆ. ನಾಡಿನಲ್ಲಿ ಉತ್ತಮ ಮಳೆಯಾಗಿ, ಬೆಳೆ ಚೆನ್ನಾಗಿ ಬಂದು ಜನರಿಗೆ ಒಳ್ಳೆಯದಾಗಲಿ ಎಂಬುದಾಗಿ ಬೇಡಿಕೊಳ್ಳುತ್ತೇನೆ’ ಎಂದರು.</p>.<p>‘ಕೋವಿಡ್ ಸಂದರ್ಭದಲ್ಲೂ ದಸರೆಯ ವಿಧಿವಿಧಾನ ಮುಂದುವರಿದಿದೆ. ಆದರೆ, ಜನರು ಪಾಲ್ಗೊಳ್ಳದೆ ನಾಡಹಬ್ಬ ಸಂಪೂರ್ಣವಾಗಲಾರದು. ಹೀಗಾಗಿ, ಸಾರ್ವಜನಿಕರು ದೊಡ್ಡಪ್ರಮಾಣದಲ್ಲಿ ಬರಬೇಕೆಂಬುದು ನಮ್ಮ ಮನಸ್ಸಿನಲ್ಲೂ ಇದೆ. ಆ ದಿನಗಳು ಬರಲಿವೆ’ ಎಂದು ಆಶಿಸಿದರು.</p>.<p>ನಂಜನಗೂಡು ತಾಲ್ಲೂಕಿನ ಉಚ್ಚಗಣಿ ಗ್ರಾಮದ ದೇಗುಲ ಪುನರ್ ನಿರ್ಮಾಣ ಸಂಬಂಧ ಪ್ರತಿಕ್ರಿಯಿಸಿ, ‘ಕೆಲ ನಿಯಮ ರೂಪಿಸಬೇಕಿದೆ. ಆ ಬಳಿಕ ಶಂಕುಸ್ಥಾಪನೆ ಮಾಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಬೆಂಗಳೂರಿನಲ್ಲಿ ಮಳೆ ಬಂದಾಗ ಪದೇಪದೇ ಸಮಸ್ಯೆ ಉಂಟಾಗುತ್ತಿದ್ದು ಎಲ್ಲೆಲ್ಲಿ ರಾಜಕಾಲುವೆ, ಕೆರೆ ಒತ್ತುವರಿಯಾಗಿದೆ ಎಂಬುದರ ಸಮೀಕ್ಷೆ ನಡೆಸಿ ಆ ಜಾಗದಲ್ಲಿರುವ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ಸೂಚಿಸಿರುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಳೆ ಬಂದಾಗ ತಗ್ಗು ಪ್ರದೇಶಗಳು ಜಲಾವೃತವಾಗುತ್ತವೆ. ಕೆರೆಯ ಆವರಣದಲ್ಲಿರುವ ಬಡಾವಣೆಗಳಿಗೆ, ರಾಜಕಾಲುವೆ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿದೆ. ಎಲ್ಲಿ ಹೆಚ್ಚು ಸಮಸ್ಯೆ ಇದೆ ಎಂಬುದನ್ನು ಗುರುತಿಸುತ್ತಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು’ ಎಂದರು.</p>.<p>‘ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕಾಮಗಾರಿ ಸಂಬಂಧ ಕಾರ್ಯಪಡೆ ರಚಿಸಲಾಗಿದೆ. ಒಂದೇ ರಸ್ತೆಯಲ್ಲಿ ಎಷ್ಟು ಬಾರಿ ಕಾಮಗಾರಿ ನಡೆದಿದೆ, ಯಾರು ಆ ಕಾಮಗಾರಿ ನಡೆಸಿದ್ದು ಹಾಗೂ ಅದರ ಗುಣಮಟ್ಟ ಪರಿಶೀಲಿಸಿ ವರದಿ ನೀಡಲು ಸೂಚಿಸಿದ್ದೇನೆ. ಕಳಪೆಯಾಗಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಮಳೆ ನಿಂತು ಮೇಲೆ ವೈಜ್ಞಾನಿಕವಾಗಿ ಗುಂಡಿ ಮುಚ್ಚುವ ಕಾರ್ಯ ಪೂರ್ಣಗೊಳಿಸಲಾಗುವುದು. ಪರಿಹಾರ ಕಾರ್ಯಕ್ಕೂ ಸೂಚಿಸಿದ್ದೇನೆ’ ಎಂದು ಹೇಳಿದರು.</p>.<p>ದಸರೆ ಕುರಿತು ಪ್ರತಿಕ್ರಿಯಿಸಿ, ‘ನಾಡಹಬ್ಬ ಆಚರಿಸಲು ಒಬ್ಬ ನಾಗರಿಕನಿಗೆ ಎಷ್ಟು ಖುಷಿಯಾಗಿದೆಯೋ ಅಷ್ಟೇ ಖುಷಿ ನನಗೆ. ಚಾಮುಂಡೇಶ್ವರಿ ಕೃಪೆಯಿಂದ ಈ ಬಾರಿ ದಸರೆ ಮುನ್ನಡೆಸುವ ಅವಕಾಶ ಸಿಕ್ಕಿದೆ. ನಾಡಿನಲ್ಲಿ ಉತ್ತಮ ಮಳೆಯಾಗಿ, ಬೆಳೆ ಚೆನ್ನಾಗಿ ಬಂದು ಜನರಿಗೆ ಒಳ್ಳೆಯದಾಗಲಿ ಎಂಬುದಾಗಿ ಬೇಡಿಕೊಳ್ಳುತ್ತೇನೆ’ ಎಂದರು.</p>.<p>‘ಕೋವಿಡ್ ಸಂದರ್ಭದಲ್ಲೂ ದಸರೆಯ ವಿಧಿವಿಧಾನ ಮುಂದುವರಿದಿದೆ. ಆದರೆ, ಜನರು ಪಾಲ್ಗೊಳ್ಳದೆ ನಾಡಹಬ್ಬ ಸಂಪೂರ್ಣವಾಗಲಾರದು. ಹೀಗಾಗಿ, ಸಾರ್ವಜನಿಕರು ದೊಡ್ಡಪ್ರಮಾಣದಲ್ಲಿ ಬರಬೇಕೆಂಬುದು ನಮ್ಮ ಮನಸ್ಸಿನಲ್ಲೂ ಇದೆ. ಆ ದಿನಗಳು ಬರಲಿವೆ’ ಎಂದು ಆಶಿಸಿದರು.</p>.<p>ನಂಜನಗೂಡು ತಾಲ್ಲೂಕಿನ ಉಚ್ಚಗಣಿ ಗ್ರಾಮದ ದೇಗುಲ ಪುನರ್ ನಿರ್ಮಾಣ ಸಂಬಂಧ ಪ್ರತಿಕ್ರಿಯಿಸಿ, ‘ಕೆಲ ನಿಯಮ ರೂಪಿಸಬೇಕಿದೆ. ಆ ಬಳಿಕ ಶಂಕುಸ್ಥಾಪನೆ ಮಾಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>