ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.10ರಂದು ಮೈಸೂರಿಗೆ ಸಿಎಂ ಬಸವರಾಜ ಬೊಮ್ಮಾಯಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Last Updated 8 ಡಿಸೆಂಬರ್ 2022, 4:13 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ.10ರಂದು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 1.05ಕ್ಕೆ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ನಂತರ ಚಾಮುಂಡಿ ಬೆಟ್ಟದ ಪಾದದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿರುವ ರಜತ ಮಹೋತ್ಸವ 'ಬೆಳ್ಳಿ ಬೆಳಗು' ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3ಕ್ಕೆ ಇನ್ಫೊಸಿಸ್ ಕ್ಯಾಂಪಸ್‌ನಲ್ಲಿ ನಡೆಯಲಿರುವ 'ಅನ್‌ಲೀಶ್-2022' ಅಂತರರಾಷ್ಟ್ರೀಯ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5ಕ್ಕೆ ರಂಗಾಯಣದಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.15ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT