<p>ಮೈಸೂರು: ನಗರಕ್ಕೆ ಗುರುವಾರ ಸಂಜೆ ಬಂದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರವೂ ಇಲ್ಲೇ ವಾಸ್ತವ್ಯ ಹೂಡಿದರು.</p>.<p>ಬೆಳಿಗ್ಗೆ ನಜರ್ಬಾದ್ನ ಮೈಲಾರಿ ಹೋಟೆಲ್ನಲ್ಲಿ ದೋಸೆ ತಿಂದರು. ಅವರಿಗೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಸಿ.ಪುಟ್ಟರಂಗಶೆಟ್ಟಿ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಮುಡಾ ಅಧ್ಯಕ್ಷ ಕೆ.ಮರೀಗೌಡ ಮೊದಲಾದವರು ಜತೆಗಿದ್ದರು.</p>.<p>‘ಮೈಲಾರಿ ಹೋಟೆಲ್ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಇಲ್ಲಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು’ ಎಂದು ‘ಎಕ್ಸ್’ನಲ್ಲಿ ಹಂಚಿಕೊಂಡು ನೆನಪುಗಳಿಗೆ ಜಾರಿದರು.</p>.<p>ಬಳಿಕ, ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಅನೌಪಚಾರಿಕ ಸಭೆ ನಡೆಸಿದರು. ಮನೆಯ ಬಳಿಗೆ ಬಂದಿದ್ದ ಕೆಲವರಿಂದ ಅಹವಾಲು ಸ್ವೀಕರಿಸಿದರು. ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಎಲ್ಲರಿಂದಲೂ ಮನವಿ ಪತ್ರ ಸ್ವೀಕರಿಸಿದರು.</p>.<p>ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಸಲ್ಲಿಸಿದರು ಎಂದು ತಿಳಿದುಬಂದಿದೆ.</p>.<p>ನಂತರ ಮುಖ್ಯಮಂತ್ರಿ, ತಾಲ್ಲೂಕಿನ ಕಾಟೂರಿನ ತಮ್ಮ ತೋಟದಲ್ಲಿ ನಡೆದಿರುವ ಮನೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಬಳಿಕ ಟಿ.ಕೆ.ಲೇಔಟ್ನಲ್ಲಿರುವ ನಿವಾಸದಲ್ಲಿ ವಾಸ್ತವ್ಯ ಹೂಡಿದರು.</p>.<p>ಮೇ 25 (ಶನಿವಾರ) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು, ಇಲ್ಲಿಂದ ಬೆಳಿಗ್ಗೆ 11.30ಕ್ಕೆ ವಿಶೇಷ ವಿಮಾನದಲ್ಲಿ ತೆರಳುವರು. ರಾತ್ರಿ 8.20ಕ್ಕೆ ವಾಪಸಾಗಿ ನಗರದಲ್ಲೇ ವಾಸ್ತವ್ಯ ಹೂಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ನಗರಕ್ಕೆ ಗುರುವಾರ ಸಂಜೆ ಬಂದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರವೂ ಇಲ್ಲೇ ವಾಸ್ತವ್ಯ ಹೂಡಿದರು.</p>.<p>ಬೆಳಿಗ್ಗೆ ನಜರ್ಬಾದ್ನ ಮೈಲಾರಿ ಹೋಟೆಲ್ನಲ್ಲಿ ದೋಸೆ ತಿಂದರು. ಅವರಿಗೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಸಿ.ಪುಟ್ಟರಂಗಶೆಟ್ಟಿ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಮುಡಾ ಅಧ್ಯಕ್ಷ ಕೆ.ಮರೀಗೌಡ ಮೊದಲಾದವರು ಜತೆಗಿದ್ದರು.</p>.<p>‘ಮೈಲಾರಿ ಹೋಟೆಲ್ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಇಲ್ಲಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು’ ಎಂದು ‘ಎಕ್ಸ್’ನಲ್ಲಿ ಹಂಚಿಕೊಂಡು ನೆನಪುಗಳಿಗೆ ಜಾರಿದರು.</p>.<p>ಬಳಿಕ, ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಅನೌಪಚಾರಿಕ ಸಭೆ ನಡೆಸಿದರು. ಮನೆಯ ಬಳಿಗೆ ಬಂದಿದ್ದ ಕೆಲವರಿಂದ ಅಹವಾಲು ಸ್ವೀಕರಿಸಿದರು. ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಎಲ್ಲರಿಂದಲೂ ಮನವಿ ಪತ್ರ ಸ್ವೀಕರಿಸಿದರು.</p>.<p>ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಸಲ್ಲಿಸಿದರು ಎಂದು ತಿಳಿದುಬಂದಿದೆ.</p>.<p>ನಂತರ ಮುಖ್ಯಮಂತ್ರಿ, ತಾಲ್ಲೂಕಿನ ಕಾಟೂರಿನ ತಮ್ಮ ತೋಟದಲ್ಲಿ ನಡೆದಿರುವ ಮನೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಬಳಿಕ ಟಿ.ಕೆ.ಲೇಔಟ್ನಲ್ಲಿರುವ ನಿವಾಸದಲ್ಲಿ ವಾಸ್ತವ್ಯ ಹೂಡಿದರು.</p>.<p>ಮೇ 25 (ಶನಿವಾರ) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು, ಇಲ್ಲಿಂದ ಬೆಳಿಗ್ಗೆ 11.30ಕ್ಕೆ ವಿಶೇಷ ವಿಮಾನದಲ್ಲಿ ತೆರಳುವರು. ರಾತ್ರಿ 8.20ಕ್ಕೆ ವಾಪಸಾಗಿ ನಗರದಲ್ಲೇ ವಾಸ್ತವ್ಯ ಹೂಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>