‘ಕುಡಿಯುವ ನೀರು ಟ್ಯಾಂಕರ್ ಪೂರೈಕೆ ವಿಷಯವೂ ಮತದಾರರಿಗೆ ಆಮಿಷ ವ್ಯಾಪ್ತಿಯಲ್ಲೇ ಬರುತ್ತದೆ. ಯಾರಾದರೂ ರಾಜಕೀಯ ವ್ಯಕ್ತಿಗಳು ಅಥವಾ ಮತದಾರರಿಗೆ ಆಮಿಷ ಒಡ್ಡಲು ಈ ಕಾರ್ಯದಲ್ಲಿ ತೊಡಗಿದರೆ ಅಂಥವರ ಮೇಲೆ ಕ್ರಮ ವಹಿಸಲಾಗುವುದು. ಅಲ್ಲದೇ, ನೀರು ಸರಬರಾಜಿನಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು. ತೀವ್ರ ಬರಗಾಲ ಇರುವುದರಿಂದ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ. ಈ ಕೆಲಸಕ್ಕೆ ಸಮಯ ಕೊಡಲೆಂದೇ ಪಿಡಿಒ ಮೊದಲಾದ ಅಧಿಕಾರಿಗಳನ್ನು ಚುನಾವಣಾ ಕಾರ್ಯಕ್ಕೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.