ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ದಸರಾ ಕಾರ್ಯಕ್ರಮಕ್ಕೆ ಕಮಿಷನ್; ಕಠಿಣ ಕ್ರಮಕ್ಕೆ ಸಚಿವ ಮಹದೇವಪ್ಪ ಸೂಚನೆ

Published 14 ಅಕ್ಟೋಬರ್ 2023, 7:39 IST
Last Updated 14 ಅಕ್ಟೋಬರ್ 2023, 7:39 IST
ಅಕ್ಷರ ಗಾತ್ರ

ಮೈಸೂರು: ದಸರಾದಲ್ಲಿ ಕಾರ್ಯಕ್ರಮ ನೀಡಲು ಅವಕಾಶ ಒದಗಿಸಿ, ಹಣ ಬಿಡುಗಡೆ ಮಾಡಿಸಲು ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿ ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸವನ್ನು ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಿದ್ದೇನೆ' ಎಂದು ಹೇಳಿದ್ದಾರೆ.

ಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದೂ ತಿಳಿಸಿದ್ದಾರೆ.

ನಾವು ಸಾಂಸ್ಕೃತಿಕ ಉಪ ಸಮಿತಿಯವರು ಎಂದು ತಾರಾನಾಥರನ್ನು ಸಂಪರ್ಕಿಸಿದ್ದ ಇಬ್ಬರು, ಕಾರ್ಯಕ್ರಮಕ್ಕೆ ₹ 8 ಲಕ್ಷ ಕೇಳಿ ಸಾರ್, ಐದು ನೀವಿಟ್ಕೊಳಿ, 3 ನಮಗೆ ಕೊಡಿ ಎಂದು ಆಫರ್ ಮಾಡಿದ್ದರು. ಇದಕ್ಕೆ ಒಪ್ಪದ ತಾರಾನಾಥರು ತಮ್ಮನ್ನು ಸಂಪರ್ಕಿಸಿದ್ದವರನ್ನು ಬೈದು ಕಳುಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT