<p><strong>ಮೈಸೂರು</strong>: ‘ನನ್ನ ಜಾತಿ, ಶಾಸಕ ಕೆ.ಹರೀಶ್ಗೌಡರ ಜಾತಿ ಯಾವುದೆಂಬುದು ಮುಖ್ಯವಲ್ಲ, ಸೌಹಾರ್ದಯುತವಾಗಿ ಬದುಕುವುದು ಮುಖ್ಯ’ ಎಂದು ಶಾಸಕ ತನ್ವೀರ್ ಸೇಠ್ ಪ್ರತಿಪಾದಿಸಿದರು.</p>.<p>ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಸಮಿತಿಯು ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಬುಧವಾರ ಆಯೋಜಿಸಿದ್ದ ಧರ್ಮಸ್ಥಳ ಕ್ಷೇತ್ರ ಯಾತ್ರೆ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿಂದೂ, ಮುಸ್ಲಿಮರು ಭಾವೈಕ್ಯತೆಯಿಂದ ಇದ್ದಾರೆ. ಆದರೆ, ಈ ವಿಚಾರದಲ್ಲಿ ರಾಜಕಾರಣ ಸಲ್ಲದು. ಬಿಜೆಪಿ ಸಾವಿನ ಮನೆಯಲ್ಲಿ ಬೆಂಕಿ ಕಾಯಿಸುವ ಕೆಲಸ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಧರ್ಮಸ್ಥಳ ಕ್ಷೇತ್ರದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಘಾಸಿ ಮಾಡಬಾರದು. ಈಗ ಯಾತ್ರೆ ಆರಂಭಿಸಿರುವುದು ರಾಜಕೀಯವಲ್ಲ. ಇದರಿಂದ ತನಿಖೆ ಮೇಲೆ ಪರಿಣಾಮವಾಗದು’ ಎಂದರು.</p>.<p>ಶಾಸಕ ಕೆ.ಹರೀಶ್ ಗೌಡ ಅವರು, ‘ಎಲ್ಲಾ ಜಾತಿ ಧರ್ಮದ ಜನ ಒಟ್ಟಾಗಿ ಈ ಯಾತ್ರೆ ಮಾಡುತ್ತಿದ್ದೇವೆ. ನಾವು ದೇವಸ್ಥಾನ, ಮಸೀದಿಗಳಿಗೆ ಹೋಗುತ್ತೇವೆ. ನಮಗೆ ಭೇದ– ಭಾವವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನನ್ನ ಜಾತಿ, ಶಾಸಕ ಕೆ.ಹರೀಶ್ಗೌಡರ ಜಾತಿ ಯಾವುದೆಂಬುದು ಮುಖ್ಯವಲ್ಲ, ಸೌಹಾರ್ದಯುತವಾಗಿ ಬದುಕುವುದು ಮುಖ್ಯ’ ಎಂದು ಶಾಸಕ ತನ್ವೀರ್ ಸೇಠ್ ಪ್ರತಿಪಾದಿಸಿದರು.</p>.<p>ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಸಮಿತಿಯು ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಬುಧವಾರ ಆಯೋಜಿಸಿದ್ದ ಧರ್ಮಸ್ಥಳ ಕ್ಷೇತ್ರ ಯಾತ್ರೆ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿಂದೂ, ಮುಸ್ಲಿಮರು ಭಾವೈಕ್ಯತೆಯಿಂದ ಇದ್ದಾರೆ. ಆದರೆ, ಈ ವಿಚಾರದಲ್ಲಿ ರಾಜಕಾರಣ ಸಲ್ಲದು. ಬಿಜೆಪಿ ಸಾವಿನ ಮನೆಯಲ್ಲಿ ಬೆಂಕಿ ಕಾಯಿಸುವ ಕೆಲಸ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಧರ್ಮಸ್ಥಳ ಕ್ಷೇತ್ರದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಘಾಸಿ ಮಾಡಬಾರದು. ಈಗ ಯಾತ್ರೆ ಆರಂಭಿಸಿರುವುದು ರಾಜಕೀಯವಲ್ಲ. ಇದರಿಂದ ತನಿಖೆ ಮೇಲೆ ಪರಿಣಾಮವಾಗದು’ ಎಂದರು.</p>.<p>ಶಾಸಕ ಕೆ.ಹರೀಶ್ ಗೌಡ ಅವರು, ‘ಎಲ್ಲಾ ಜಾತಿ ಧರ್ಮದ ಜನ ಒಟ್ಟಾಗಿ ಈ ಯಾತ್ರೆ ಮಾಡುತ್ತಿದ್ದೇವೆ. ನಾವು ದೇವಸ್ಥಾನ, ಮಸೀದಿಗಳಿಗೆ ಹೋಗುತ್ತೇವೆ. ನಮಗೆ ಭೇದ– ಭಾವವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>