<p><strong>ಮೈಸೂರು</strong>: ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಮರ್ಪಣೆಯೊಂದಿಗೆ ನಿರಂತರ ಅಭ್ಯಾಸ ಅತ್ಯಗತ್ಯ’ ಎಂದು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ ಬಿ.ಎನ್. ವೀಣಾ ತಿಳಿಸಿದರು.</p><p>ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕಾವೇರಿ ಸಭಾಂಗಣದಲ್ಲಿ ಗುರುವಾರ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ‘ಮುಕ್ತ ಭಂಡಾರ’ ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p><p>ಗುರಿಯತ್ತ ಚಿತ್ತವಿರಲಿ: </p><p>‘ಓದುವಾಗ ಯಾವಾಗಲೂ ಒಬ್ಬ ವ್ಯಕ್ತಿಯನ್ನು ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ಆಗ ಓದಲು ಆಸಕ್ತಿ ಹೆಚ್ಚಾಗುತ್ತದೆ. ನಾವು ಓದುವಾಗ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಹೆಚ್ಚಾಗಿ ಅನುಸರಿಸುತ್ತಿದ್ದೆವು. ಅವರಂತೆ ಆಗಬೇಕು ಎಂದುಕೊಳ್ಳುತ್ತಿದ್ದೆವು. ಇದೀಗ ಅವರಂತೆ ಸಾರ್ವಜನಿಕ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಕೆಎಸ್ಒಯು ತರಬೇತಿ ಕೇಂದ್ರವು ನೀಡಿರುವ ತರಬೇತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗುರಿಯತ್ತ ಚಿತ್ತವಿರಬೇಕು’ ಎಂದು ಸಲಹೆ ನೀಡಿದರು.</p><p>‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳುವವರಿಗೆ ತರಬೇತಿ ನೀಡುವ ಮೂಲಕ ಕೆಎಸ್ಒಯು ಮಾದರಿ ಕಾರ್ಯ ಕೈಗೊಳ್ಳುತ್ತಿದೆ. ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ಮಾರ್ಗದರ್ಶನ ನೀಡುತ್ತಿದೆ’ ಎಂದು ಶ್ಲಾಘಿಸಿದರು.</p><p>ಎಲ್ಲವೂ ಬದಲಾಗಿದೆ: </p><p>‘ಸ್ಪರ್ಧಾತ್ಮಕ ಜಗತ್ತು ಸಾಗರದಂತಾಗಿದೆ. ಈಗಿನ ಸ್ಪರ್ಧಾತ್ಮಕ ಪರೀಕ್ಷೆಯೂ ಹಿಂದಿನಂತಿಲ್ಲ. ಪ್ರಶ್ನೆಪತ್ರಿಕೆ ಮಾದರಿಯೂ ಬದಲಾಗಿದೆ. ಇದೆಲ್ಲದಕ್ಕೂ ಸಿದ್ಧರಾಗಿರಬೇಕು. ಪರಿಶ್ರಮ ಇಲ್ಲದಿದ್ದರೆ ಯಾವ ಪರೀಕ್ಷೆಯಲ್ಲೂ ಗೆಲ್ಲಲಾಗುವುದಿಲ್ಲ. ಯಾವುದನ್ನೂ ಓದಬೇಕು, ಯಾವುದನ್ನು ಓದಬಾರದು ಎಂಬುದನ್ನು ತಿಳಿದುಕೊಂಡರೆ ಉತ್ತಮ. ನಿತ್ಯವೂ ದಿನಪತ್ರಿಕೆಗಳನ್ನು ಓದಬೇಕು. ಸಾಮಾನ್ಯ ಜ್ಞಾನ ಅಗತ್ಯ’ ಎಂದು ತಿಳಿಸಿದರು.</p><p>‘ಕನಿಷ್ಠ ಮೂರು ವರ್ಷ ಕಷ್ಟಪಟ್ಟು ಓದಿ ಒಳ್ಳೆಯ ಕೆಲಸ ತೆಗೆದುಕೊಂಡರೆ, ಮುಂದಿನ ಮೂವತ್ತು ವರ್ಷ ಸುಖವಾಗಿರಬಹುದು. ವೈಫಲ್ಯಕ್ಕೆ ಕುಗ್ಗಬಾರದು. ಮರಳಿ ಪ್ರಯತ್ನಿಸಬೇಕು’ ಎಂದರು.</p><p><strong>ದೂರದ ಪಯಣ:</strong></p><p>ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ ಎಂ. ಬಾಲಸುಬ್ರಹ್ಮಣ್ಯ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆ ದೂರದ ಪಯಣದಂತೆ. ಬೇಗ ತಲುಪಲಾಗದು. ಇದಕ್ಕೆ ಪರಿಶ್ರಮ ಮುಖ್ಯ. ತರಬೇತಿಯಲ್ಲಿ ಹೇಳಿಕೊಟ್ಟ ಕೌಶಲಗಳನ್ನು ಅಳವಡಿಸಿಕೊಳ್ಳಿ’ ಎಂದು ಹೇಳಿದರು.</p><p>ಕೆಎಸ್ಒಯು ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ, ‘ಧೈರ್ಯವಿದ್ದರೆ ಏನನ್ನಾದರೂ ಸಾಧಿಸಬಹುದು. ನಿಮ್ಮನ್ನು ನೀವು ನಂಬಿ. ಆ ನಂಬಿಕೆ ಜೀವನ ಪರ್ಯಂತ ಇರಲಿ’ ಎಂದು ಸಲಹೆ ನೀಡಿದರು.</p><p>ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್, ಶೈಕ್ಷಣಿಕ ಡೀನ್ ರಾಮನಾಥಂ ನಾಯ್ಡು, ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ, ಸಿದ್ದೇಶ್ ಹೊನ್ನೂರು, ಗಣೇಶ್ ಕೆ.ಜಿ.ಕೊಪ್ಪಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಮರ್ಪಣೆಯೊಂದಿಗೆ ನಿರಂತರ ಅಭ್ಯಾಸ ಅತ್ಯಗತ್ಯ’ ಎಂದು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ ಬಿ.ಎನ್. ವೀಣಾ ತಿಳಿಸಿದರು.</p><p>ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕಾವೇರಿ ಸಭಾಂಗಣದಲ್ಲಿ ಗುರುವಾರ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ‘ಮುಕ್ತ ಭಂಡಾರ’ ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p><p>ಗುರಿಯತ್ತ ಚಿತ್ತವಿರಲಿ: </p><p>‘ಓದುವಾಗ ಯಾವಾಗಲೂ ಒಬ್ಬ ವ್ಯಕ್ತಿಯನ್ನು ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ಆಗ ಓದಲು ಆಸಕ್ತಿ ಹೆಚ್ಚಾಗುತ್ತದೆ. ನಾವು ಓದುವಾಗ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಹೆಚ್ಚಾಗಿ ಅನುಸರಿಸುತ್ತಿದ್ದೆವು. ಅವರಂತೆ ಆಗಬೇಕು ಎಂದುಕೊಳ್ಳುತ್ತಿದ್ದೆವು. ಇದೀಗ ಅವರಂತೆ ಸಾರ್ವಜನಿಕ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಕೆಎಸ್ಒಯು ತರಬೇತಿ ಕೇಂದ್ರವು ನೀಡಿರುವ ತರಬೇತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗುರಿಯತ್ತ ಚಿತ್ತವಿರಬೇಕು’ ಎಂದು ಸಲಹೆ ನೀಡಿದರು.</p><p>‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳುವವರಿಗೆ ತರಬೇತಿ ನೀಡುವ ಮೂಲಕ ಕೆಎಸ್ಒಯು ಮಾದರಿ ಕಾರ್ಯ ಕೈಗೊಳ್ಳುತ್ತಿದೆ. ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ಮಾರ್ಗದರ್ಶನ ನೀಡುತ್ತಿದೆ’ ಎಂದು ಶ್ಲಾಘಿಸಿದರು.</p><p>ಎಲ್ಲವೂ ಬದಲಾಗಿದೆ: </p><p>‘ಸ್ಪರ್ಧಾತ್ಮಕ ಜಗತ್ತು ಸಾಗರದಂತಾಗಿದೆ. ಈಗಿನ ಸ್ಪರ್ಧಾತ್ಮಕ ಪರೀಕ್ಷೆಯೂ ಹಿಂದಿನಂತಿಲ್ಲ. ಪ್ರಶ್ನೆಪತ್ರಿಕೆ ಮಾದರಿಯೂ ಬದಲಾಗಿದೆ. ಇದೆಲ್ಲದಕ್ಕೂ ಸಿದ್ಧರಾಗಿರಬೇಕು. ಪರಿಶ್ರಮ ಇಲ್ಲದಿದ್ದರೆ ಯಾವ ಪರೀಕ್ಷೆಯಲ್ಲೂ ಗೆಲ್ಲಲಾಗುವುದಿಲ್ಲ. ಯಾವುದನ್ನೂ ಓದಬೇಕು, ಯಾವುದನ್ನು ಓದಬಾರದು ಎಂಬುದನ್ನು ತಿಳಿದುಕೊಂಡರೆ ಉತ್ತಮ. ನಿತ್ಯವೂ ದಿನಪತ್ರಿಕೆಗಳನ್ನು ಓದಬೇಕು. ಸಾಮಾನ್ಯ ಜ್ಞಾನ ಅಗತ್ಯ’ ಎಂದು ತಿಳಿಸಿದರು.</p><p>‘ಕನಿಷ್ಠ ಮೂರು ವರ್ಷ ಕಷ್ಟಪಟ್ಟು ಓದಿ ಒಳ್ಳೆಯ ಕೆಲಸ ತೆಗೆದುಕೊಂಡರೆ, ಮುಂದಿನ ಮೂವತ್ತು ವರ್ಷ ಸುಖವಾಗಿರಬಹುದು. ವೈಫಲ್ಯಕ್ಕೆ ಕುಗ್ಗಬಾರದು. ಮರಳಿ ಪ್ರಯತ್ನಿಸಬೇಕು’ ಎಂದರು.</p><p><strong>ದೂರದ ಪಯಣ:</strong></p><p>ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ ಎಂ. ಬಾಲಸುಬ್ರಹ್ಮಣ್ಯ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆ ದೂರದ ಪಯಣದಂತೆ. ಬೇಗ ತಲುಪಲಾಗದು. ಇದಕ್ಕೆ ಪರಿಶ್ರಮ ಮುಖ್ಯ. ತರಬೇತಿಯಲ್ಲಿ ಹೇಳಿಕೊಟ್ಟ ಕೌಶಲಗಳನ್ನು ಅಳವಡಿಸಿಕೊಳ್ಳಿ’ ಎಂದು ಹೇಳಿದರು.</p><p>ಕೆಎಸ್ಒಯು ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ, ‘ಧೈರ್ಯವಿದ್ದರೆ ಏನನ್ನಾದರೂ ಸಾಧಿಸಬಹುದು. ನಿಮ್ಮನ್ನು ನೀವು ನಂಬಿ. ಆ ನಂಬಿಕೆ ಜೀವನ ಪರ್ಯಂತ ಇರಲಿ’ ಎಂದು ಸಲಹೆ ನೀಡಿದರು.</p><p>ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್, ಶೈಕ್ಷಣಿಕ ಡೀನ್ ರಾಮನಾಥಂ ನಾಯ್ಡು, ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ, ಸಿದ್ದೇಶ್ ಹೊನ್ನೂರು, ಗಣೇಶ್ ಕೆ.ಜಿ.ಕೊಪ್ಪಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>