<p><strong>ಮೈಸೂರು: </strong>‘ಉಪ್ಪಾರ ಸಮುದಾಯದ ಮುಖಂಡರ ಹೆಸರನ್ನು ಹೇಳಲಿಲ್ಲ, ವೇದಿಕೆಗೂ ಕರೆದಿಲ್ಲ’ ಎಂದು ಸಮುದಾಯದ ಕಾರ್ಯಕರ್ತರು ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯ ನಡುವೆಯೇ ವೇದಿಕೆ ಏರಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ವರುಣ ವಿಧಾನಸಭಾ ಕ್ಷೇತ್ರದ ವರುಣ ಹಾಗೂ ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯು ನಗರದಲ್ಲಿ ಏರ್ಪಡಿಸಿದ್ದ ಸಭೆ<br />ಯಲ್ಲಿ ಕಾರ್ಯಕರ್ತರು, ‘ಸಮುದಾಯದವರಿಗೆ ಕ್ಷೇತ್ರದಲ್ಲಿ ಮಾನ್ಯತೆ ನೀಡುತ್ತಿಲ್ಲ’ ಎಂದು ದೂರಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಮಾತನಾಡುವಾಗ ಈ ಘಟನೆ ನಡೆಯಿತು.</p>.<p>ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸಮಾಧಾನ ಪಡಿಸಲು ಯತ್ನಿಸಿದರು. ಕಾರ್ಯಕರ್ತರು ಜೋರು ಧ್ವನಿಯಲ್ಲಿ ಮಾತು ಮುಂದುವರಿಸಿದಾಗ ಕೋಪದಿಂದ ಹೊರಹಾಕುವುದಾಗಿ ಎಚ್ಚರಿಸಿದರು. ಕಾರ್ಯಕರ್ತರು ಹೊರಹೋದ ನಂತರ ಮಹದೇವಪ್ಪ ಭಾಷಣ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಉಪ್ಪಾರ ಸಮುದಾಯದ ಮುಖಂಡರ ಹೆಸರನ್ನು ಹೇಳಲಿಲ್ಲ, ವೇದಿಕೆಗೂ ಕರೆದಿಲ್ಲ’ ಎಂದು ಸಮುದಾಯದ ಕಾರ್ಯಕರ್ತರು ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯ ನಡುವೆಯೇ ವೇದಿಕೆ ಏರಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ವರುಣ ವಿಧಾನಸಭಾ ಕ್ಷೇತ್ರದ ವರುಣ ಹಾಗೂ ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯು ನಗರದಲ್ಲಿ ಏರ್ಪಡಿಸಿದ್ದ ಸಭೆ<br />ಯಲ್ಲಿ ಕಾರ್ಯಕರ್ತರು, ‘ಸಮುದಾಯದವರಿಗೆ ಕ್ಷೇತ್ರದಲ್ಲಿ ಮಾನ್ಯತೆ ನೀಡುತ್ತಿಲ್ಲ’ ಎಂದು ದೂರಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಮಾತನಾಡುವಾಗ ಈ ಘಟನೆ ನಡೆಯಿತು.</p>.<p>ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸಮಾಧಾನ ಪಡಿಸಲು ಯತ್ನಿಸಿದರು. ಕಾರ್ಯಕರ್ತರು ಜೋರು ಧ್ವನಿಯಲ್ಲಿ ಮಾತು ಮುಂದುವರಿಸಿದಾಗ ಕೋಪದಿಂದ ಹೊರಹಾಕುವುದಾಗಿ ಎಚ್ಚರಿಸಿದರು. ಕಾರ್ಯಕರ್ತರು ಹೊರಹೋದ ನಂತರ ಮಹದೇವಪ್ಪ ಭಾಷಣ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>