<p><strong>ಮೈಸೂರು:</strong> ‘ನನ್ನ ಜಾತಿ, ಶಾಸಕ ಕೆ.ಹರೀಶ್ಗೌಡರ ಜಾತಿ ಯಾವುದು ಎಂಬುದು ಮುಖ್ಯವಲ್ಲ, ಸೌಹಾರ್ದಯುತವಾಗಿ ಬದುಕುವುದು ಮುಖ್ಯ’ ಎಂದು ಶಾಸಕ ತನ್ವೀರ್ ಸೇಠ್ ಪ್ರತಿಪಾದಿಸಿದರು.</p>.<p>ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಸಮಿತಿಯು ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಬುಧವಾರ ಆಯೋಜಿಸಿದ್ದ ಧರ್ಮಸ್ಥಳ ಕ್ಷೇತ್ರ ಯಾತ್ರೆ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿಂದೂ, ಮುಸ್ಲಿಮರು ಭಾವೈಕ್ಯತೆಯಿಂದ ಇದ್ದಾರೆ. ಆದರೆ, ಈ ವಿಚಾರದಲ್ಲಿ ರಾಜಕಾರಣ ಸಲ್ಲದು. ಬಿಜೆಪಿ ಸಾವಿನ ಮನೆಯಲ್ಲಿ ಬೆಂಕಿ ಕಾಯಿಸುವ ಕೆಲಸ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಧರ್ಮಸ್ಥಳ ಕ್ಷೇತ್ರದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಘಾಸಿ ಮಾಡಬಾರದು. ಈಗ ಯಾತ್ರೆ ಆರಂಭಿಸಿರುವುದು ರಾಜಕೀಯವಲ್ಲ. ಇದರಿಂದ ತನಿಖೆ ಮೇಲೆ ಪರಿಣಾಮವಾಗದು’ ಎಂದರು.</p>.<p>ಶಾಸಕ ಕೆ.ಹರೀಶ್ ಗೌಡ ಅವರು, ‘ಎಲ್ಲಾ ಜಾತಿ ಧರ್ಮದ ಜನ ಒಟ್ಟಾಗಿ ಈ ಯಾತ್ರೆ ಮಾಡುತ್ತಿದ್ದೇವೆ. ನಾವು ದೇವಸ್ಥಾನ, ಮಸೀದಿಗಳಿಗೆ ಹೋಗುತ್ತೇವೆ. ನಮಗೆ ಭೇದ– <br>ಭಾವವಿಲ್ಲ’ ಎಂದು ಹೇಳಿದರು.</p>.<p><strong>ಕಲ್ಲಡ್ಕ ಪ್ರಭಾಕರ್ ಭಟ್ ಯಾರ ಪರ?</strong></p><p><strong>ಮಡಿಕೇರಿ:</strong> ‘ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪರ ಇದ್ದಾರೆ?’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ಕುಮಾರ್ ಸೊರಕೆ ಪ್ರಶ್ನಿಸಿದರು. </p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ತನಿಖೆ ಭಾಗವಾಗಿ 13 ಕಡೆ ಅಗೆಯುವವರೆಗೆ ಬಿಜೆಪಿಯವರು ಸುಮ್ಮನಿದ್ದರು. ಈಗ ಬಿ.ಎಲ್.ಸಂತೋಷ್ ಅವರು ಧರ್ಮಸ್ಥಳದ ಪಾವಿತ್ರ್ಯ ಉಳಿಸಿ ಎಂದು ಹೋರಾಟಕ್ಕಿಳಿದಿದ್ದಾರೆ. ಹಾಗಾದರೆ ಇದು ಪ್ರಭಾಕರ್ ಭಟ್ ಹಾಗೂ ಬಿ.ಎಲ್.ಸಂತೋಷ್ ನಡುವಿನ ಹೋರಾಟವಾ ಎಂದರು.</p>.<div><blockquote>ಜೆಡಿಎಸ್ –ಬಿಜೆಪಿ ಪ್ರತ್ಯೇಕ ಪಕ್ಷಗಳು. ಅವರವರ ಹೋರಾಟ ಅವರದ್ದು. ಧರ್ಮಸ್ಥಳದ ವಿಚಾರದಲ್ಲಿ ಪ್ರತ್ಯೇಕ ಹೋರಾಟ ನಡೆಸಿದರೂ ನಾವು ಒಟ್ಟಿಗೇ ಇದ್ದೇವೆ ಬಿಟ್ಟುಕೊಟ್ಟಿಲ್ಲ. </blockquote><span class="attribution">–ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನನ್ನ ಜಾತಿ, ಶಾಸಕ ಕೆ.ಹರೀಶ್ಗೌಡರ ಜಾತಿ ಯಾವುದು ಎಂಬುದು ಮುಖ್ಯವಲ್ಲ, ಸೌಹಾರ್ದಯುತವಾಗಿ ಬದುಕುವುದು ಮುಖ್ಯ’ ಎಂದು ಶಾಸಕ ತನ್ವೀರ್ ಸೇಠ್ ಪ್ರತಿಪಾದಿಸಿದರು.</p>.<p>ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಸಮಿತಿಯು ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಬುಧವಾರ ಆಯೋಜಿಸಿದ್ದ ಧರ್ಮಸ್ಥಳ ಕ್ಷೇತ್ರ ಯಾತ್ರೆ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿಂದೂ, ಮುಸ್ಲಿಮರು ಭಾವೈಕ್ಯತೆಯಿಂದ ಇದ್ದಾರೆ. ಆದರೆ, ಈ ವಿಚಾರದಲ್ಲಿ ರಾಜಕಾರಣ ಸಲ್ಲದು. ಬಿಜೆಪಿ ಸಾವಿನ ಮನೆಯಲ್ಲಿ ಬೆಂಕಿ ಕಾಯಿಸುವ ಕೆಲಸ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಧರ್ಮಸ್ಥಳ ಕ್ಷೇತ್ರದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಘಾಸಿ ಮಾಡಬಾರದು. ಈಗ ಯಾತ್ರೆ ಆರಂಭಿಸಿರುವುದು ರಾಜಕೀಯವಲ್ಲ. ಇದರಿಂದ ತನಿಖೆ ಮೇಲೆ ಪರಿಣಾಮವಾಗದು’ ಎಂದರು.</p>.<p>ಶಾಸಕ ಕೆ.ಹರೀಶ್ ಗೌಡ ಅವರು, ‘ಎಲ್ಲಾ ಜಾತಿ ಧರ್ಮದ ಜನ ಒಟ್ಟಾಗಿ ಈ ಯಾತ್ರೆ ಮಾಡುತ್ತಿದ್ದೇವೆ. ನಾವು ದೇವಸ್ಥಾನ, ಮಸೀದಿಗಳಿಗೆ ಹೋಗುತ್ತೇವೆ. ನಮಗೆ ಭೇದ– <br>ಭಾವವಿಲ್ಲ’ ಎಂದು ಹೇಳಿದರು.</p>.<p><strong>ಕಲ್ಲಡ್ಕ ಪ್ರಭಾಕರ್ ಭಟ್ ಯಾರ ಪರ?</strong></p><p><strong>ಮಡಿಕೇರಿ:</strong> ‘ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪರ ಇದ್ದಾರೆ?’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ಕುಮಾರ್ ಸೊರಕೆ ಪ್ರಶ್ನಿಸಿದರು. </p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ತನಿಖೆ ಭಾಗವಾಗಿ 13 ಕಡೆ ಅಗೆಯುವವರೆಗೆ ಬಿಜೆಪಿಯವರು ಸುಮ್ಮನಿದ್ದರು. ಈಗ ಬಿ.ಎಲ್.ಸಂತೋಷ್ ಅವರು ಧರ್ಮಸ್ಥಳದ ಪಾವಿತ್ರ್ಯ ಉಳಿಸಿ ಎಂದು ಹೋರಾಟಕ್ಕಿಳಿದಿದ್ದಾರೆ. ಹಾಗಾದರೆ ಇದು ಪ್ರಭಾಕರ್ ಭಟ್ ಹಾಗೂ ಬಿ.ಎಲ್.ಸಂತೋಷ್ ನಡುವಿನ ಹೋರಾಟವಾ ಎಂದರು.</p>.<div><blockquote>ಜೆಡಿಎಸ್ –ಬಿಜೆಪಿ ಪ್ರತ್ಯೇಕ ಪಕ್ಷಗಳು. ಅವರವರ ಹೋರಾಟ ಅವರದ್ದು. ಧರ್ಮಸ್ಥಳದ ವಿಚಾರದಲ್ಲಿ ಪ್ರತ್ಯೇಕ ಹೋರಾಟ ನಡೆಸಿದರೂ ನಾವು ಒಟ್ಟಿಗೇ ಇದ್ದೇವೆ ಬಿಟ್ಟುಕೊಟ್ಟಿಲ್ಲ. </blockquote><span class="attribution">–ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>