<p><strong>ಮೈಸೂರು</strong>: ‘ಬಿಜೆಪಿಯವರು ಮುಸ್ಲಿಂ ಪದವನ್ನು ಬಳಸದೇ ರಾಜಕರಣ ಮಾಡಲಿ’ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಸ್ಲಿಂ ಹೆಸರು ಬಳಸದೆ ಸಂಘಟನೆ ಮಾಡಲಿ. ನಮ್ಮ ಜನರ ಹೆಸರು ಹೇಳಿ ರಾಜಕೀಯ ಮಾಡುವುದೇ ಅವರ ಬಂಡವಾಳ’ ಎಂದು ಟೀಕಿಸಿದರು.</p>.<p>‘ದೇಶದಲ್ಲಿ ನಾವು ಶೇ 20ರಷ್ಟು ಇದ್ದೇವೆ. ಪ್ರಗತಿಗೆ ನಮ್ಮ ಕೊಡುಗೆಯೂ ಅಪಾರ. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ಯಾಗ– ಬಲಿದಾನ ಮಾಡಿದ್ದೇವೆ. ಬ್ರಿಟಿಷರ ಬೂಟು ನೆಕ್ಕಿಲ್ಲ’ ಎಂದರು.</p>.<p>‘ಮುಸ್ಲಿಮರಿಗೆ ಏನಾದರೂ ಘೋಷಣೆ ಮಾಡಿದರೆ ಸಾಕು, ಬಿಜೆಪಿಯವರಿಗೆ ಹೊಟ್ಟೆ ಕಿಚ್ಚು ಶುರುವಾಗುತ್ತದೆ. ರಾಜ್ಯ ಬಜೆಟ್ನಲ್ಲಿ ಎಲ್ಲರಿಗೂ ಆದ್ಯತೆ ಕೊಡಲಾಗಿದೆ. ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಎಲ್ಲದಕ್ಕೂ ಹಣ ನೀಡಲಾಗಿದೆ. ಬಿಜೆಪಿಯವರು ಏನು ಬೇಕಾದರೂ ಹೇಳಲಿ, ಈ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ’ ಎಂದು ಹೇಳಿದರು.</p>.<p>‘ಬಿಜೆಪಿಯವರು ಹಲಾಲ್ ಬಜೆಟ್ ಎಂದೆಲ್ಲಾ ಹೇಳಿದರೂ ನಾವೇನು ಬೇಜಾರು ಮಾಡಿಕೊಳ್ಳುವುದಿಲ್ಲ. ಈ ದೇಶ ನಮ್ಮದು. ಅವರಷ್ಟೇ ನಮಗೂ ಹಕ್ಕಿದೆ. ದೇಶದ ಅಭಿವೃದ್ಧಿಗೆ ನಾವು ಸದಾ ಕೊಡುಗೆ ನೀಡುತ್ತಲೇ ಇದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಬಿಜೆಪಿಯವರು ಮುಸ್ಲಿಂ ಪದವನ್ನು ಬಳಸದೇ ರಾಜಕರಣ ಮಾಡಲಿ’ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಸ್ಲಿಂ ಹೆಸರು ಬಳಸದೆ ಸಂಘಟನೆ ಮಾಡಲಿ. ನಮ್ಮ ಜನರ ಹೆಸರು ಹೇಳಿ ರಾಜಕೀಯ ಮಾಡುವುದೇ ಅವರ ಬಂಡವಾಳ’ ಎಂದು ಟೀಕಿಸಿದರು.</p>.<p>‘ದೇಶದಲ್ಲಿ ನಾವು ಶೇ 20ರಷ್ಟು ಇದ್ದೇವೆ. ಪ್ರಗತಿಗೆ ನಮ್ಮ ಕೊಡುಗೆಯೂ ಅಪಾರ. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ಯಾಗ– ಬಲಿದಾನ ಮಾಡಿದ್ದೇವೆ. ಬ್ರಿಟಿಷರ ಬೂಟು ನೆಕ್ಕಿಲ್ಲ’ ಎಂದರು.</p>.<p>‘ಮುಸ್ಲಿಮರಿಗೆ ಏನಾದರೂ ಘೋಷಣೆ ಮಾಡಿದರೆ ಸಾಕು, ಬಿಜೆಪಿಯವರಿಗೆ ಹೊಟ್ಟೆ ಕಿಚ್ಚು ಶುರುವಾಗುತ್ತದೆ. ರಾಜ್ಯ ಬಜೆಟ್ನಲ್ಲಿ ಎಲ್ಲರಿಗೂ ಆದ್ಯತೆ ಕೊಡಲಾಗಿದೆ. ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಎಲ್ಲದಕ್ಕೂ ಹಣ ನೀಡಲಾಗಿದೆ. ಬಿಜೆಪಿಯವರು ಏನು ಬೇಕಾದರೂ ಹೇಳಲಿ, ಈ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ’ ಎಂದು ಹೇಳಿದರು.</p>.<p>‘ಬಿಜೆಪಿಯವರು ಹಲಾಲ್ ಬಜೆಟ್ ಎಂದೆಲ್ಲಾ ಹೇಳಿದರೂ ನಾವೇನು ಬೇಜಾರು ಮಾಡಿಕೊಳ್ಳುವುದಿಲ್ಲ. ಈ ದೇಶ ನಮ್ಮದು. ಅವರಷ್ಟೇ ನಮಗೂ ಹಕ್ಕಿದೆ. ದೇಶದ ಅಭಿವೃದ್ಧಿಗೆ ನಾವು ಸದಾ ಕೊಡುಗೆ ನೀಡುತ್ತಲೇ ಇದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>