<p><strong>ಪಿರಿಯಾಪಟ್ಟಣ</strong>: ಚುನಾವಣಾ ಆಯೋಗವನ್ನು ಎಚ್ಚರಿಸಲು ಕಾಂಗ್ರೆಸ್ ಪಕ್ಷದಿಂದ ‘ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ’ ನಡೆಸಲಾಗುತ್ತಿದೆ ಎಂದು ಸಚಿವ ಕೆ. ವೆಂಕಟೇಶ್ ತಿಳಿಸಿದರು.</p><p>ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಘಟಕಗಳು ಭಾನುವಾರ ಏರ್ಪಡಿಸಲಾಗಿದ್ದ ಸಹಿ ಸಂಗ್ರಹ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಮತಗಳವು ನಡೆಯುತ್ತಿರುವುದನ್ನು ತಡೆಯುಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ಎಂದರು. </p>.<p>ರಾಜ್ಯದಲ್ಲಿ ನಡೆಯಲಿರುವ ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರದ ಬದಲು ಮತಪತ್ರಗಳನ್ನು ಉಪಯೋಗಿಸುವಂತೆ ಸಚಿವ ಸಂಪುಟ ನಿರ್ಣಯ ಕೈಗೊಂಡು ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದೆ ಎಂದರು. ಈ ಅಭಿಯಾನ ಯಶಸ್ವಿಯಾಗಲು ಕಾರ್ಯಕರ್ತರು ಸಹಕರಿಸಬೇಕು ಎಂದು ತಿಳಿಸಿದರು.</p>.<p>ಮೈಲಾಕ್ ಅಧ್ಯಕ್ಷ ಎಚ್. ಡಿ. ಗಣೇಶ್ ಮಾತನಾಡಿ, ಬಿಜೆಪಿ ಮತಗಳವಿನ ಮೂಲಕ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ದುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ಮಾತನಾಡಿ, ‘ಪ್ರತಿ ಜಿಲ್ಲೆಯಲ್ಲೂ 2 ಲಕ್ಷ ಸಹಿಸಂಗ್ರಹದ ಗುರಿಯನ್ನು ಕೆಪಿಸಿಸಿ ನೀಡಿದ್ದು, ತಾಲೂಕಿನಲ್ಲಿ ಕನಿಷ್ಠ 10 ಸಾವಿರ ಸಹಿ ಸಂಗ್ರಹಿಸಬೇಕಿದೆ. ಕಾರ್ಯಕರ್ತರು ಅಭಿಯಾನವನ್ನು ಯಶಸ್ವಿ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ಟಿ. ಸ್ವಾಮಿ, ರಹಮತ್ ಜಾನ್ ಬಾಬು, ಮಾಜಿ ಅಧ್ಯಕ್ಷ ಮಾನ್ಸೂನ್ ಚಂದ್ರು, ನಗರ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಗೌಡ, ಮೈಮುಲ್ ನಿರ್ದೇಶಕ ಪ್ರಕಾಶ್ , ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ</strong>: ಚುನಾವಣಾ ಆಯೋಗವನ್ನು ಎಚ್ಚರಿಸಲು ಕಾಂಗ್ರೆಸ್ ಪಕ್ಷದಿಂದ ‘ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ’ ನಡೆಸಲಾಗುತ್ತಿದೆ ಎಂದು ಸಚಿವ ಕೆ. ವೆಂಕಟೇಶ್ ತಿಳಿಸಿದರು.</p><p>ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಘಟಕಗಳು ಭಾನುವಾರ ಏರ್ಪಡಿಸಲಾಗಿದ್ದ ಸಹಿ ಸಂಗ್ರಹ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಮತಗಳವು ನಡೆಯುತ್ತಿರುವುದನ್ನು ತಡೆಯುಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ಎಂದರು. </p>.<p>ರಾಜ್ಯದಲ್ಲಿ ನಡೆಯಲಿರುವ ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರದ ಬದಲು ಮತಪತ್ರಗಳನ್ನು ಉಪಯೋಗಿಸುವಂತೆ ಸಚಿವ ಸಂಪುಟ ನಿರ್ಣಯ ಕೈಗೊಂಡು ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದೆ ಎಂದರು. ಈ ಅಭಿಯಾನ ಯಶಸ್ವಿಯಾಗಲು ಕಾರ್ಯಕರ್ತರು ಸಹಕರಿಸಬೇಕು ಎಂದು ತಿಳಿಸಿದರು.</p>.<p>ಮೈಲಾಕ್ ಅಧ್ಯಕ್ಷ ಎಚ್. ಡಿ. ಗಣೇಶ್ ಮಾತನಾಡಿ, ಬಿಜೆಪಿ ಮತಗಳವಿನ ಮೂಲಕ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ದುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ಮಾತನಾಡಿ, ‘ಪ್ರತಿ ಜಿಲ್ಲೆಯಲ್ಲೂ 2 ಲಕ್ಷ ಸಹಿಸಂಗ್ರಹದ ಗುರಿಯನ್ನು ಕೆಪಿಸಿಸಿ ನೀಡಿದ್ದು, ತಾಲೂಕಿನಲ್ಲಿ ಕನಿಷ್ಠ 10 ಸಾವಿರ ಸಹಿ ಸಂಗ್ರಹಿಸಬೇಕಿದೆ. ಕಾರ್ಯಕರ್ತರು ಅಭಿಯಾನವನ್ನು ಯಶಸ್ವಿ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ಟಿ. ಸ್ವಾಮಿ, ರಹಮತ್ ಜಾನ್ ಬಾಬು, ಮಾಜಿ ಅಧ್ಯಕ್ಷ ಮಾನ್ಸೂನ್ ಚಂದ್ರು, ನಗರ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಗೌಡ, ಮೈಮುಲ್ ನಿರ್ದೇಶಕ ಪ್ರಕಾಶ್ , ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>