ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ‘ಕಾಂಗ್ರೆಸ್ ಬೆಂಬಲಿತ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ಬುಡಕಟ್ಟು ಸಮಾಜದವರನ್ನು ಟಾರ್ಗೆಟ್ ಮಾಡಿ ಕೊಲ್ಲಲಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಗೊಂಡಾ ಬುಡಕಟ್ಟು ಸಮುದಾಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಕ್ಕೆ, ಹಳ್ಳಿಗೆ ನುಗ್ಗಿ ಗುಂಡಿಟ್ಟು ಕೊಲ್ಲಲಾಗಿದೆ. ಇಂತಹ ಪೈಶಾಚಿಕ ಕೃತ್ಯ ಈಚೆಗಿನ ದಿನಗಳಲ್ಲಿ ದೇಶದಲ್ಲಿ ನಡೆದಿದ್ದು ಇದೇ ಪ್ರಥಮ’ ಎಂದು ಕಿಡಿಕಾರಿದರು.