ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಕಾಂಗ್ರೆಸ್‌ ಜನಾಂದೋಲನ ಸಮಾವೇಶ: ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ‘ಕೈ’ ಪಡೆ

Published : 9 ಆಗಸ್ಟ್ 2024, 23:30 IST
Last Updated : 9 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments
‘ಸುಳ್ಳು ಆರೋಪಗಳಿಗೆ ಉತ್ತರಿಸಿ’
‘ಪರಿಶಿಷ್ಟರು, ಆದಿವಾಸಿಗಳು, ಬಡವರ ಪರವಾಗಿ ಕೆಲಸ ಮಾಡುವ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಸುಳ್ಳು ಆರೋಪಗಳಿಗೆ ಉತ್ತರ ನೀಡಬೇಕಾಗಿದೆ’ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಹೇಳಿದರು.
‘ಕ್ಲೀನ್ ಸ್ವಾಮಿ’ ವಿರುದ್ಧದ ಪ್ರಕರಣ ಬಿಚ್ಚಿಡುವೆ
‘ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ಅವರ ವಿರುದ್ಧ 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದು, ಎಲ್ಲವನ್ನೂ ಬಿಚ್ಚಿಡುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗುಡುಗಿದರು. ‘ಅವರ ಪ್ರಕರಣದಲ್ಲಿ ವಿಚಾರಣೆ ನಡೆಸಲು ಲೋಕಾಯುಕ್ತದವರು ರಾಜ್ಯಪಾಲರಿಗೂ ಪತ್ರ ಬರೆದಿದ್ದಾರಂತೆ. ಆದರೆ, ಕುಮಾರಸ್ವಾಮಿ ಯೂಟರ್ನ್ ತೆಗೆದುಕೊಂಡು ಬಿಜೆಪಿ ಮೊರೆ ಹೋಗಿದ್ದಾರೆ’ ಎಂದು ಟೀಕಿಸಿದರು. ‘ಕುಮಾರಸ್ವಾಮಿ ಜೆಡಿಎಸ್‌ನಲ್ಲಿ ಯಾರನ್ನೂ ಬೆಳೆಯಲು ಬಿಡಲಿಲ್ಲ. ಮಗನಿಗೆ ರಾಜಕೀಯದಲ್ಲಿ ದಾರಿ ಮಾಡಿಕೊಡಲು ಹಲವು ನಾಯಕರನ್ನು ಪಕ್ಷದಿಂದ ಹೊರಹಾಕಿದ್ದಾರೆ. ಮಗನಿಗೆ ರಾಜಕೀಯ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಣ್ಣನ ಮಗನ ವಿರುದ್ಧವೇ ಪಿತೂರಿ ಮಾಡಿ ಅವನ ಮೇಲೂ ಕೇಸ್ ದಾಖಲಾಗುವಂತೆ ಮಾಡಿದ್ದಾರೆ. ಅಂಥವರು ಸಿದ್ದರಾಮಯ್ಯ ಹಾಗೂ ನನ್ನನ್ನು ಬಿಡುತ್ತಾರಾ? ಆದರೆ, ಅದರಲ್ಲಿ ಯಶಸ್ವಿಯಾಗುವುದಿಲ್ಲ’ ಎಂದು ಹೇಳಿದರು.
ಸಿದ್ದರಾಮಯ್ಯಗೆ ಹುರುಪು:
ಸಿದ್ದರಾಮಯ್ಯ ತವರಿನಲ್ಲಿ ನಡೆದ ಸಮಾವೇಶದಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಇಡೀ ಸಂಚಿವ ಸಂಪುಟ, ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ಹಾಗೂ ನಾಯಕರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸುವ ಜೊತೆಗೆ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಾಕ್ಷಿಯಾದರು.
ಯಾರು ರಾಜೀನಾಮೆ ಕೊಡುತ್ತಾರೆ ಎಂಬುದನ್ನು ಕಾಲ ತೀರ್ಮಾನಿಸುತ್ತದೆ
ಡಿ.ಕೆ. ಶಿವಕುಮಾರ್. ಉ‍ಪ ಮುಖ್ಯಮಂತ್ರಿ
ಶಕುನಿಗಳಂತೆ ಪಾದಯಾತ್ರೆ: ಟೀಕೆ ‘
ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನವನ್ನು ಈವರೆಗೂ ಕೊಟ್ಟಿಲ್ಲ. 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಮೋಸ ಮಾಡಲಾಗಿದೆ. ಮೇಕೆದಾಟು ಮಹದಾಯಿ ಯೋಜನೆಗೆ ಅನುಮತಿ ಕೊಟ್ಟಿಲ್ಲ. ಬೆಂಗಳೂರು ಕಿತ್ತೂರು ಕರ್ನಾಟಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೈ ಜೋಡಿಸುತ್ತಿಲ್ಲ’ ಎಂದು ದೂರಿದರು. ‘ಬಿಜೆಪಿ–ಜೆಡಿಎಸ್‌ನವರು ದುರ್ಯೋಧನ ಶಕುನಿಗಳಂತೆ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ನಡೆಸುತ್ತಿರುವುದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧದ ಪಾದಯಾತ್ರೆಯಲ್ಲ ಗ್ಯಾರಂಟಿ ಯೋಜನೆಗಳು ಮತ್ತು ಮಹಿಳೆಯರ ವಿರುದ್ಧದ ಯಾತ್ರೆ’ ಎಂದು ಟೀಕಿಸಿದರು. ‘ವಿರೋಧ ಪಕ್ಷದವರು ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಹಾಗೂ ನಮಗೆ ಶಕ್ತಿ ತುಂಬಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT