ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಸಂಸದ ಪ್ರತಾಪ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರ ಯತ್ನ

Published 5 ಜುಲೈ 2023, 7:14 IST
Last Updated 5 ಜುಲೈ 2023, 7:14 IST
ಅಕ್ಷರ ಗಾತ್ರ

ಮೈಸೂರು: ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಲದರ್ಶಿನಿಯಲ್ಲಿನ ಸಂಸದ ಪ್ರತಾಪ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಬುಧವಾರ ಯತ್ನಿಸಿದರು.

ರಾಜ್ಯಕ್ಕೆ ಅಕ್ಕಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸದ ಸಂಸದರಿಗೆ ಧಿಕ್ಕಾರ, ಪೇಪರ್ ಸಿಂಹ ಅಕ್ಕಿ ಕೊಡ್ರಪ್ಪ ಎಂದು ಘೋಷಣೆ ಕೂಗಿದರು.

ಪೊಲೀಸರು ಮಧ್ಯ ಪ್ರವೇಶಿಸಿ, ಕಾಂಗ್ರೆಸ್ ಕಾರ್ಯಕರ್ತರು ಒಳ ಹೋಗದಂತೆ ತಡೆದರು. ನಂತರ ಗೇಟಿನ ಮುಂಭಾಗ ಪ್ರತಿಭಟನೆ‌ ನಡೆಯಿತು.

ಈ ಸಂದರ್ಭ ಸಂಸದ ಪ್ರತಾಪ ಸಿಂಹ ಕಚೇರಿಯ ಒಳಗೇ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT