<p><strong>ಮೈಸೂರು:</strong> ಸಾಲ ವಾಪಸ್ ಕೊಡದ ಕಾರಣಕ್ಕೆ ಸಾಲ ಪಡೆದಿದ್ದ ವ್ಯಕ್ತಿಯ 15 ವರ್ಷದ ಪುತ್ರಿಯನ್ನು ಒತ್ತೆಯಾಗಿಟ್ಟುಕೊಂಡು, ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಪೊಲೀಸ್ ಕಾನ್ಸ್ಟೆಬಲ್ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಪ್ರಕರಣ ಕುರಿತು ಮೊದಲೇ ಮಾಹಿತಿ ಇದ್ದರೂ ಮೇಲಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ ಎಂಬ ಆರೋಪದ ಮೇರೆಗೆ ಸೋಮವಾರ ರಾತ್ರಿ ಇವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಪದ್ಮಾ ಮತ್ತು ಪ್ರಸನ್ನಕುಮಾರ್ ಅವರನ್ನು ಬಂಧಿಸಲಾಗಿದೆ.</p>.<p><strong>ಕಳ್ಳತನ</strong></p>.<p><strong>ವರುಣಾ:</strong> ಇಲ್ಲಿಗೆ ಸಮೀಪದ ರಾಯನಹುಂಡಿಯ ಶಕ್ತಿ ವೈನ್ ಸ್ಟೋರ್ನಲ್ಲಿ ಮಂಗಳವಾರ ರಾತ್ರಿ ₹ 1.10 ಲಕ್ಷ ಮೌಲ್ಯದ ಮದ್ಯ ಕಳ್ಳತನವಾಗಿದೆ.</p>.<p>ಅಂಗಡಿಯ ಕಿಟಕಿ ಸರಳುಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಸಿ.ಸಿ.ಟಿವಿಗೆ ಅಳವಡಿಸಿದ್ದ ಡಿವಿಆರ್ನ್ನು ಸಹ ಕಳ್ಳರು ದೊಚಿದ್ದಾರೆ. ಬುಧವಾರ ಬೆಳಿಗ್ಗೆ ಶ್ವಾನದಳ ಹಾಗೂ ಬೆರಳಚ್ಚು ದಳ ಪರಿಶೀಲನೆ ನಡೆಸಿವೆ.</p>.<p>ಗ್ರಾಮಾಂತರ ಪ್ರೋಬೆಷನರಿ ಡಿವೈಎಸ್ಪಿ ಗಾನ ಪಿ.ಕುಮಾರ್, ವರುಣಾ ಪಿಎಸ್ಐ ಚಿಕ್ಕಸ್ವಾಮಿ ಹಾಗೂ ಸಿಬ್ಬಂದಿ ತನಿಖೆ ನಡೆಸಿದೆ. ಬಗ್ಗೆ ಮಾಲೀಕ ಶ್ರೀಕಾಂತ ದೂರು ಸಲ್ಲಿಸಿದ್ದು, ವರುಣಾ ಠಾಣೆಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸಾಲ ವಾಪಸ್ ಕೊಡದ ಕಾರಣಕ್ಕೆ ಸಾಲ ಪಡೆದಿದ್ದ ವ್ಯಕ್ತಿಯ 15 ವರ್ಷದ ಪುತ್ರಿಯನ್ನು ಒತ್ತೆಯಾಗಿಟ್ಟುಕೊಂಡು, ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಪೊಲೀಸ್ ಕಾನ್ಸ್ಟೆಬಲ್ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಪ್ರಕರಣ ಕುರಿತು ಮೊದಲೇ ಮಾಹಿತಿ ಇದ್ದರೂ ಮೇಲಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ ಎಂಬ ಆರೋಪದ ಮೇರೆಗೆ ಸೋಮವಾರ ರಾತ್ರಿ ಇವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಪದ್ಮಾ ಮತ್ತು ಪ್ರಸನ್ನಕುಮಾರ್ ಅವರನ್ನು ಬಂಧಿಸಲಾಗಿದೆ.</p>.<p><strong>ಕಳ್ಳತನ</strong></p>.<p><strong>ವರುಣಾ:</strong> ಇಲ್ಲಿಗೆ ಸಮೀಪದ ರಾಯನಹುಂಡಿಯ ಶಕ್ತಿ ವೈನ್ ಸ್ಟೋರ್ನಲ್ಲಿ ಮಂಗಳವಾರ ರಾತ್ರಿ ₹ 1.10 ಲಕ್ಷ ಮೌಲ್ಯದ ಮದ್ಯ ಕಳ್ಳತನವಾಗಿದೆ.</p>.<p>ಅಂಗಡಿಯ ಕಿಟಕಿ ಸರಳುಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಸಿ.ಸಿ.ಟಿವಿಗೆ ಅಳವಡಿಸಿದ್ದ ಡಿವಿಆರ್ನ್ನು ಸಹ ಕಳ್ಳರು ದೊಚಿದ್ದಾರೆ. ಬುಧವಾರ ಬೆಳಿಗ್ಗೆ ಶ್ವಾನದಳ ಹಾಗೂ ಬೆರಳಚ್ಚು ದಳ ಪರಿಶೀಲನೆ ನಡೆಸಿವೆ.</p>.<p>ಗ್ರಾಮಾಂತರ ಪ್ರೋಬೆಷನರಿ ಡಿವೈಎಸ್ಪಿ ಗಾನ ಪಿ.ಕುಮಾರ್, ವರುಣಾ ಪಿಎಸ್ಐ ಚಿಕ್ಕಸ್ವಾಮಿ ಹಾಗೂ ಸಿಬ್ಬಂದಿ ತನಿಖೆ ನಡೆಸಿದೆ. ಬಗ್ಗೆ ಮಾಲೀಕ ಶ್ರೀಕಾಂತ ದೂರು ಸಲ್ಲಿಸಿದ್ದು, ವರುಣಾ ಠಾಣೆಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>