<p><strong>ಹುಣಸೂರು:</strong> ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರಿ ಬ್ಯಾಂಕ್ 35 ವರ್ಷಗಳಿಂದ ಒಂದೇ ವರ್ಗದ ಹಿಡಿತದಲ್ಲಿದ್ದು, ಈಗ ಕಾಂಗ್ರೆಸ್ ಪಕ್ಷದ ವಶವಾದಾಗ ಜಾತ್ಯತೀತ ವ್ಯವಸ್ಥೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದೆ ಎಂದು ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.</p>.<p>ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಎಂಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ದೊಡ್ಡಸ್ವಾಮಿಗೌಡರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹುಣಸೂರು ಕ್ಷೇತ್ರದಲ್ಲಿನ 27 ಸಹಕಾರಿ ಸಂಘಗಳಲ್ಲಿ 9 ಸಹಕಾರಿ ಸಂಘ ಸುಸ್ತಿಯಾಗಿವೆ. ಜಿಲ್ಲಾ ಸಹಕಾರಿ ಬ್ಯಾಂಕ್ ಠೇವಣಿ ಹಣ ₹ 400 ಕೋಟಿ ಇಂದ ₹900 ಕೋಟಿಗೆ ಹೆಚ್ಚಿಸಿದ್ದೇನೆ ಎಂದು ಕ್ಷೇತ್ರದ ಜನಪ್ರತಿನಿಧಿ ಹೇಳುತ್ತಿದ್ದರು ಎಂದು ಲೇವಡಿ ಮಾಡಿದರು.</p>.<p>ಜಿಲ್ಲಾ ಸಹಕಾರಿ ಬ್ಯಾಂಕ್ ಅಭಿವೃದ್ಧಿಗೊಳಿಸುವ ಹೆಸರಿನಲ್ಲಿ ಒಂದು ಕುಟುಂಬದ ಹಿಡಿತದಲ್ಲಿ ಸಿಲುಕಿ ಒಂದೇ ವರ್ಗಕ್ಕೆ ಬೇಕಾದ ಎಲ್ಲಾ ಸವಲತ್ತು ಬಳಸಿಕೊಂಡಿದ್ದರು. ಹಿಂದುಳಿದ ಸಮುದಾಯಗಳಿಗೆ ಯಾವುದೇ ಸವಲತ್ತು ಇಲ್ಲವಾಗಿತ್ತು ಎಂದು ದೂರಿದರು.</p>.<p>ತನಿಖೆ: ನೂತನ ಅಧ್ಯಕ್ಷರ ನೇತೃತ್ವದಲ್ಲಿ ತಾಲ್ಲೂಕಿನ ಸಹಕಾರಿ ಸಂಘಗಳ ಆಂತರಿಕ ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಯಬೇಕು. ಕ್ಷೇತ್ರದ 9 ಸಹಕಾರಿ ಬ್ಯಾಂಕ್ ಕಾರ್ಯದರ್ಶಿಗಳಿಂದ ಹಣ ದುರುಪಯೋಗವಾಗಿದ್ದು ಅವರ ವಿರುದ್ಧ ಕ್ರಮವಾಗಬೇಕು. ಸಹಕಾರಿ ಕ್ಷೇತ್ರದಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ತನಿಖೆ ಚುರುಕುಗೊಳಿಸಿ ಶಿಕ್ಷೆ ನೀಡಬೇಕು. ಈ ಕ್ಷೇತ್ರದಲ್ಲಿ ಶಿಕ್ಷೆಗೆ ಒಳಪಟ್ಟವರ ಸಂಖೆ ವಿರಳ. ಹೀಗಾಗಿ ಪ್ರಕರಣ ಹೆಚ್ಚಾಗಿದ್ದು, ಈ ಎಲ್ಲಕ್ಕೂ ಕಡಿವಾಣ ಹಾಕಬೇಕು ಎಂದರು.</p>.<p> ಹುಣಸೂರು ಕ್ಷೇತ್ರದ ಜನಪ್ರತಿನಿಧಿಗೆ ಸಹಕಾರಿ ಕ್ಷೇತ್ರ ಹೊರತುಪಡಿಸಿ,ಇತರ ಯಾವುದೇ ಘಟನೆಗಳ ಬಗ್ಗೆ ಕಾಳಜಿ ಇಲ್ಲ. ಇಲ್ಲಿ ಸುಲಿಗೆ, ದರೋಡೆ, ಸಾಮಾಜಿಕ ಸಮಸ್ಯೆಗಳಿದ್ದರೂ ಅಧಿಕಾರಿಗಳ ಸಭೆ ನಡೆಸಿ ವಿಚಾರಿಸುವ ಪ್ರಯತ್ನ ನಡೆದಿಲ್ಲ ಎಂದರು.</p>.<p> ಕುರುಬ ಸಮಾಜದ ಅಧ್ಯಕ್ಷ ಕುನ್ನೇಗೌಡ, ಅಣ್ಣಯ್ಯ ನಾಯಕ ಮಾತನಾಡಿದರು. ಬಿ.ಜಯರಾಂ, ಸಣ್ಣೇಗೌಡ, ದೇವರಾಜ್, ರವಿಪ್ರಸನ್ನ, ರಮೇಶ್, ಅಜ್ಗರ್ ಪಾಶಾ, ಶಿರೇನಹಳ್ಳಿ ಬಸವರಾಜು,ಬಾಲಸುಂದರ್, ರಂಗ ಕರ್ಮಿ ಜಯರಾಮ್ ನಿರೂಪಿಸಿದರು.</p>.<p><strong>‘ಪ್ರಥಮ ಸಭೆ 19ರಂದು</strong></p><p> ’ದೊಡ್ಡಸ್ವಾಮಿಗೌಡ ಮಾತನಾಡಿ ಎರಡೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 317 ಸಹಕಾರಿ ಬ್ಯಾಂಕ್ ಇದ್ದು ಈ ಪೈಕಿ ₹ 83 ಕೋಟಿ ಸುಸ್ತಿಯಲ್ಲಿವೆ. ಹುಣಸೂರು ಕ್ಷೇತ್ರದ 27 ಸಹಕಾರಿ ಬ್ಯಾಂಕ್ ಗಳಲ್ಲಿ ₹ 27 ಕೋಟಿ ಸುಸ್ತಿ ಇದೆ. ಜ. 19 ರಂದು ನಡೆಯಲಿರುವ ಪ್ರಥಮ ಸಭೆಯಲ್ಲಿ ವಿಷಯ ಚರ್ಚಿಸಿ ವಸೂಲಾತಿಗೆ ಕ್ರಮವಹಿಸುವೆ ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರ ಸಹಕಾರಿ ಸಂಘದ ರೈತರಿಗೆ ₹ 5 ಲಕ್ಷ ಬಡ್ಡಿ ರಹಿತ ಕೃಷಿ ಸಾಲ ಯೋಜನೆ ಜಾರಿಗೊಳಿಸಿದ್ದು ಅವಶ್ಯಕ ಇರುವವರಿಗೆ ಈ ಸಾಲ ನೀಡುತ್ತಿಲ್ಲ. ಕ್ರಮಕ್ಕೆ ಸೂಚಿಸುವೆ. ಕ್ಷೇತ್ರದ 9 ಸಹಕಾರಿ ಸಂಘಗಳಿಗೆ ಚುನಾವಣೆ ನಡೆಯದೆ ಆಡಳಿತಾಧಿಕಾರಿ ನಿಯೋಜಿಸಿದ್ದು ಶೀಘ್ರದಲ್ಲೇ ಚುನಾವಣೆ ನಡೆಸುವೆ. ಮೈಸೂರು ಜಿಲ್ಲಾ ಸಹಕಾರಿ ಬ್ಯಾಂಕ್ ಕೃಷಿ ಕ್ಷೇತ್ರಕ್ಕೆ ₹1350 ಕೋಟಿ ಸಾಲ ನೀಡಿದ್ದು ಕೃಷಿಯೇತರ ಕ್ಷೇತ್ರಕ್ಕೆ ₹ 650 ಕೋಟಿ ಸಾಲ ನೀಡಿದೆ ಎಂದರು.</p>.<div><blockquote>ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಅಭ್ಯರ್ಥಿಯು ಕಾಂಗ್ರೆಸ್ ಪಕ್ಷದ ಕಟ್ಟಾ ಬೆಂಬಲಿಗ160 ಕುಟುಂಬಗಳಿಗೆ ತಲಾ ₹ 10 ಲಕ್ಷದಂತೆ ಬಡ್ಡಿ ರಹಿತ ಸಾಲ ಮಂಜೂರು ಮಾಡಿ ಮತ ಓಲೈಕೆ ಮಾಡಿದ್ದರಿಂದ ಪಕ್ಷ ಇಲ್ಲಿ ಸೋಲು ಅನುಭವಿಸಿದೆ. ಸಹಕಾರಿ ಕ್ಷೇತ್ರವನ್ನು ರಾಜಕೀಯ ಹಿತಾಸಕ್ತಿಗೆ ಬಳಸಿಕೊಳ್ಳಲಾಗಿದೆ. </blockquote><span class="attribution">–ಎಚ್.ಪಿ.ಮಂಜುನಾಥ್, ಮಾಜಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರಿ ಬ್ಯಾಂಕ್ 35 ವರ್ಷಗಳಿಂದ ಒಂದೇ ವರ್ಗದ ಹಿಡಿತದಲ್ಲಿದ್ದು, ಈಗ ಕಾಂಗ್ರೆಸ್ ಪಕ್ಷದ ವಶವಾದಾಗ ಜಾತ್ಯತೀತ ವ್ಯವಸ್ಥೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದೆ ಎಂದು ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.</p>.<p>ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಎಂಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ದೊಡ್ಡಸ್ವಾಮಿಗೌಡರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹುಣಸೂರು ಕ್ಷೇತ್ರದಲ್ಲಿನ 27 ಸಹಕಾರಿ ಸಂಘಗಳಲ್ಲಿ 9 ಸಹಕಾರಿ ಸಂಘ ಸುಸ್ತಿಯಾಗಿವೆ. ಜಿಲ್ಲಾ ಸಹಕಾರಿ ಬ್ಯಾಂಕ್ ಠೇವಣಿ ಹಣ ₹ 400 ಕೋಟಿ ಇಂದ ₹900 ಕೋಟಿಗೆ ಹೆಚ್ಚಿಸಿದ್ದೇನೆ ಎಂದು ಕ್ಷೇತ್ರದ ಜನಪ್ರತಿನಿಧಿ ಹೇಳುತ್ತಿದ್ದರು ಎಂದು ಲೇವಡಿ ಮಾಡಿದರು.</p>.<p>ಜಿಲ್ಲಾ ಸಹಕಾರಿ ಬ್ಯಾಂಕ್ ಅಭಿವೃದ್ಧಿಗೊಳಿಸುವ ಹೆಸರಿನಲ್ಲಿ ಒಂದು ಕುಟುಂಬದ ಹಿಡಿತದಲ್ಲಿ ಸಿಲುಕಿ ಒಂದೇ ವರ್ಗಕ್ಕೆ ಬೇಕಾದ ಎಲ್ಲಾ ಸವಲತ್ತು ಬಳಸಿಕೊಂಡಿದ್ದರು. ಹಿಂದುಳಿದ ಸಮುದಾಯಗಳಿಗೆ ಯಾವುದೇ ಸವಲತ್ತು ಇಲ್ಲವಾಗಿತ್ತು ಎಂದು ದೂರಿದರು.</p>.<p>ತನಿಖೆ: ನೂತನ ಅಧ್ಯಕ್ಷರ ನೇತೃತ್ವದಲ್ಲಿ ತಾಲ್ಲೂಕಿನ ಸಹಕಾರಿ ಸಂಘಗಳ ಆಂತರಿಕ ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಯಬೇಕು. ಕ್ಷೇತ್ರದ 9 ಸಹಕಾರಿ ಬ್ಯಾಂಕ್ ಕಾರ್ಯದರ್ಶಿಗಳಿಂದ ಹಣ ದುರುಪಯೋಗವಾಗಿದ್ದು ಅವರ ವಿರುದ್ಧ ಕ್ರಮವಾಗಬೇಕು. ಸಹಕಾರಿ ಕ್ಷೇತ್ರದಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ತನಿಖೆ ಚುರುಕುಗೊಳಿಸಿ ಶಿಕ್ಷೆ ನೀಡಬೇಕು. ಈ ಕ್ಷೇತ್ರದಲ್ಲಿ ಶಿಕ್ಷೆಗೆ ಒಳಪಟ್ಟವರ ಸಂಖೆ ವಿರಳ. ಹೀಗಾಗಿ ಪ್ರಕರಣ ಹೆಚ್ಚಾಗಿದ್ದು, ಈ ಎಲ್ಲಕ್ಕೂ ಕಡಿವಾಣ ಹಾಕಬೇಕು ಎಂದರು.</p>.<p> ಹುಣಸೂರು ಕ್ಷೇತ್ರದ ಜನಪ್ರತಿನಿಧಿಗೆ ಸಹಕಾರಿ ಕ್ಷೇತ್ರ ಹೊರತುಪಡಿಸಿ,ಇತರ ಯಾವುದೇ ಘಟನೆಗಳ ಬಗ್ಗೆ ಕಾಳಜಿ ಇಲ್ಲ. ಇಲ್ಲಿ ಸುಲಿಗೆ, ದರೋಡೆ, ಸಾಮಾಜಿಕ ಸಮಸ್ಯೆಗಳಿದ್ದರೂ ಅಧಿಕಾರಿಗಳ ಸಭೆ ನಡೆಸಿ ವಿಚಾರಿಸುವ ಪ್ರಯತ್ನ ನಡೆದಿಲ್ಲ ಎಂದರು.</p>.<p> ಕುರುಬ ಸಮಾಜದ ಅಧ್ಯಕ್ಷ ಕುನ್ನೇಗೌಡ, ಅಣ್ಣಯ್ಯ ನಾಯಕ ಮಾತನಾಡಿದರು. ಬಿ.ಜಯರಾಂ, ಸಣ್ಣೇಗೌಡ, ದೇವರಾಜ್, ರವಿಪ್ರಸನ್ನ, ರಮೇಶ್, ಅಜ್ಗರ್ ಪಾಶಾ, ಶಿರೇನಹಳ್ಳಿ ಬಸವರಾಜು,ಬಾಲಸುಂದರ್, ರಂಗ ಕರ್ಮಿ ಜಯರಾಮ್ ನಿರೂಪಿಸಿದರು.</p>.<p><strong>‘ಪ್ರಥಮ ಸಭೆ 19ರಂದು</strong></p><p> ’ದೊಡ್ಡಸ್ವಾಮಿಗೌಡ ಮಾತನಾಡಿ ಎರಡೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 317 ಸಹಕಾರಿ ಬ್ಯಾಂಕ್ ಇದ್ದು ಈ ಪೈಕಿ ₹ 83 ಕೋಟಿ ಸುಸ್ತಿಯಲ್ಲಿವೆ. ಹುಣಸೂರು ಕ್ಷೇತ್ರದ 27 ಸಹಕಾರಿ ಬ್ಯಾಂಕ್ ಗಳಲ್ಲಿ ₹ 27 ಕೋಟಿ ಸುಸ್ತಿ ಇದೆ. ಜ. 19 ರಂದು ನಡೆಯಲಿರುವ ಪ್ರಥಮ ಸಭೆಯಲ್ಲಿ ವಿಷಯ ಚರ್ಚಿಸಿ ವಸೂಲಾತಿಗೆ ಕ್ರಮವಹಿಸುವೆ ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರ ಸಹಕಾರಿ ಸಂಘದ ರೈತರಿಗೆ ₹ 5 ಲಕ್ಷ ಬಡ್ಡಿ ರಹಿತ ಕೃಷಿ ಸಾಲ ಯೋಜನೆ ಜಾರಿಗೊಳಿಸಿದ್ದು ಅವಶ್ಯಕ ಇರುವವರಿಗೆ ಈ ಸಾಲ ನೀಡುತ್ತಿಲ್ಲ. ಕ್ರಮಕ್ಕೆ ಸೂಚಿಸುವೆ. ಕ್ಷೇತ್ರದ 9 ಸಹಕಾರಿ ಸಂಘಗಳಿಗೆ ಚುನಾವಣೆ ನಡೆಯದೆ ಆಡಳಿತಾಧಿಕಾರಿ ನಿಯೋಜಿಸಿದ್ದು ಶೀಘ್ರದಲ್ಲೇ ಚುನಾವಣೆ ನಡೆಸುವೆ. ಮೈಸೂರು ಜಿಲ್ಲಾ ಸಹಕಾರಿ ಬ್ಯಾಂಕ್ ಕೃಷಿ ಕ್ಷೇತ್ರಕ್ಕೆ ₹1350 ಕೋಟಿ ಸಾಲ ನೀಡಿದ್ದು ಕೃಷಿಯೇತರ ಕ್ಷೇತ್ರಕ್ಕೆ ₹ 650 ಕೋಟಿ ಸಾಲ ನೀಡಿದೆ ಎಂದರು.</p>.<div><blockquote>ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಅಭ್ಯರ್ಥಿಯು ಕಾಂಗ್ರೆಸ್ ಪಕ್ಷದ ಕಟ್ಟಾ ಬೆಂಬಲಿಗ160 ಕುಟುಂಬಗಳಿಗೆ ತಲಾ ₹ 10 ಲಕ್ಷದಂತೆ ಬಡ್ಡಿ ರಹಿತ ಸಾಲ ಮಂಜೂರು ಮಾಡಿ ಮತ ಓಲೈಕೆ ಮಾಡಿದ್ದರಿಂದ ಪಕ್ಷ ಇಲ್ಲಿ ಸೋಲು ಅನುಭವಿಸಿದೆ. ಸಹಕಾರಿ ಕ್ಷೇತ್ರವನ್ನು ರಾಜಕೀಯ ಹಿತಾಸಕ್ತಿಗೆ ಬಳಸಿಕೊಳ್ಳಲಾಗಿದೆ. </blockquote><span class="attribution">–ಎಚ್.ಪಿ.ಮಂಜುನಾಥ್, ಮಾಜಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>