<p><strong>ಮೈಸೂರು: </strong>‘ಕೋವಿಡ್–19’ ಆತಂಕದಿಂದ ನಗರದ ಪ್ರವಾಸೋದ್ಯಮ ಕುಸಿದಿದ್ದು, ಬಹುತೇಕ ಹೋಟೆಲ್ಗಳು ಪ್ರವಾಸಿಗರಿಲ್ಲದೇ ಭಣಗುಡುತ್ತಿವೆ.</p>.<p>ಮೈಸೂರು ಅರಮನೆ, ಚಾಮರಾಜೇಂದ್ರ ಮೃಗಾಲಯಗಳು ಪ್ರವಾಸಿಗರಿಲ್ಲದೇ ಬಿಕೊ ಎನ್ನುವಂತಹ ವಾತಾವರಣ ಸೃಷ್ಟಿಯಾಗಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹೋಟೆಲ್ ಮಾಲೀಕರ ಸಂಘದ ನಗರ ಘಟಕದ ಅಧ್ಯಕ್ಷ ಸಿ. ನಾರಾಯಣಗೌಡ, ‘ಶೇ 50ರಷ್ಟು ಬುಕಿಂಗ್ಗಳು ರದ್ದಾಗಿವೆ. ಹೋಟೆಲ್ ಉದ್ಯಮ ಸಂಕಷ್ಟಕ್ಕೆ ತುತ್ತಾಗಿದೆ’ ಎಂದು ತಿಳಿಸಿದರು.</p>.<p>ನಗರದ ಹೋಟೆಲ್ಗಳಲ್ಲಿ 9.5 ಸಾವಿರ ಹೋಟೆಲ್ ರೂಮುಗಳಿವೆ. ಇವುಗಳಲ್ಲಿ ಶೇ 50ರಷ್ಟು ಮಾರ್ಚ್ ತಿಂಗಳಿನಲ್ಲಿ ಭರ್ತಿಯಾಗುತ್ತಿದ್ದವು. ಆದರೆ, ಈಗ ಕೇವಲ ಶೇ 10ರಷ್ಟು ಮಾತ್ರ ಭರ್ತಿಯಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೆಎಸ್ಆರ್ಟಿಸಿಯಲ್ಲೂ ಅಂತರರಾಜ್ಯ ಬಸ್ಗಳ ಬುಕ್ಕಿಂಗ್ನಲ್ಲಿ ಶೇ 15ರಿಂದ 20ರಷ್ಟು ಇಳಿಕೆ ಕಂಡು ಬಂದಿದ್ದು, ಬೇಡಿಕೆ ಕಡಿಮೆ ಇರುವ ಮಾರ್ಗಗಳಲ್ಲಿ ಬಸ್ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕುರಿತು ಚಿಂತನೆ ನಡೆದಿದೆ ಎಂದು ಕೆಎಸ್ಆರ್ಟಿಸಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ಕುಮಾರ್ ತಿಳಿಸಿದರು.</p>.<p>ಮೈಸೂರು ಅರಮನೆಗೆ ಕಳೆದ ವರ್ಷ ಮಾರ್ಚ್ 10ರಂದು 10,350 ಮಂದಿ ಪ್ರವಾಸಿಗರು ಭೇಟಿ ನೀಡಿದ್ದರೆ, ಈ ವರ್ಷ 5,244 ಮಂದಿ ಭೇಟಿ ನೀಡಿದ್ದಾರೆ.</p>.<p>ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳೆದ ಬುಧವಾರ (ಮಾರ್ಚ್ 4) 3,557 ಮಂದಿ ಭೇಟಿ ನೀಡಿದ್ದರು. ಮಾರ್ಚ್ 11ರಂದು 2,597 ಮಂದಿ ಭೇಟಿ ನೀಡಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ, ‘ಇದು ಪರೀಕ್ಷಾ ಸಮಯವಾಗಿರುವುದರಿಂದ ಸಾಮಾನ್ಯವಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗುತ್ತದೆ’ ಎಂದು ತಿಳಿಸಿದರು.</p>.<p>ಇಲ್ಲಿನ ಯೋಗ ಕೇಂದ್ರಗಳಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಕೆಯಾಗಿದೆ. ಜತೆಗೆ, ವಿದೇಶಿಗರೊಡನೆ ನಡೆಸುತ್ತಿದ್ದ ಆನ್ಲೈನ್ ಯೋಗ ಕೋಚಿಂಗ್ ತರಗತಿಗಳೂ ರದ್ದಾಗುತ್ತಿವೆ.</p>.<p>ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮದಲ್ಲಿಪಕ್ಷಿಧಾಮ ಪ್ರವೇಶಿಸುವವರು ಡೆಟಾಲ್ ಮತ್ತು ಬ್ಲೀಚಿಂಗ್ ಮಿಶ್ರಿತ ನೀರಿನಲ್ಲಿ ಕಾಲು ತೊಳೆದುಕೊಂಡು ಒಳ ಹೋಗುವಂತೆ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ‘ರೋಗಾಣುಗಳು ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಜತೆಗೆ, ಇಲಾಖೆಯ ಸಿಬ್ಬಂದಿಗೆ ‘ಮಾಸ್ಕ್’ ಧರಿಸುವಂತೆ ಸೂಚಿಸಲಾಗಿದೆ’ ಎಂದು ವನ್ಯಜೀವಿ ವಿಭಾಗದ ಡಿಎಫ್ಒ ಅಲೆಕ್ಸಾಂಡರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಕೋವಿಡ್–19’ ಆತಂಕದಿಂದ ನಗರದ ಪ್ರವಾಸೋದ್ಯಮ ಕುಸಿದಿದ್ದು, ಬಹುತೇಕ ಹೋಟೆಲ್ಗಳು ಪ್ರವಾಸಿಗರಿಲ್ಲದೇ ಭಣಗುಡುತ್ತಿವೆ.</p>.<p>ಮೈಸೂರು ಅರಮನೆ, ಚಾಮರಾಜೇಂದ್ರ ಮೃಗಾಲಯಗಳು ಪ್ರವಾಸಿಗರಿಲ್ಲದೇ ಬಿಕೊ ಎನ್ನುವಂತಹ ವಾತಾವರಣ ಸೃಷ್ಟಿಯಾಗಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹೋಟೆಲ್ ಮಾಲೀಕರ ಸಂಘದ ನಗರ ಘಟಕದ ಅಧ್ಯಕ್ಷ ಸಿ. ನಾರಾಯಣಗೌಡ, ‘ಶೇ 50ರಷ್ಟು ಬುಕಿಂಗ್ಗಳು ರದ್ದಾಗಿವೆ. ಹೋಟೆಲ್ ಉದ್ಯಮ ಸಂಕಷ್ಟಕ್ಕೆ ತುತ್ತಾಗಿದೆ’ ಎಂದು ತಿಳಿಸಿದರು.</p>.<p>ನಗರದ ಹೋಟೆಲ್ಗಳಲ್ಲಿ 9.5 ಸಾವಿರ ಹೋಟೆಲ್ ರೂಮುಗಳಿವೆ. ಇವುಗಳಲ್ಲಿ ಶೇ 50ರಷ್ಟು ಮಾರ್ಚ್ ತಿಂಗಳಿನಲ್ಲಿ ಭರ್ತಿಯಾಗುತ್ತಿದ್ದವು. ಆದರೆ, ಈಗ ಕೇವಲ ಶೇ 10ರಷ್ಟು ಮಾತ್ರ ಭರ್ತಿಯಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೆಎಸ್ಆರ್ಟಿಸಿಯಲ್ಲೂ ಅಂತರರಾಜ್ಯ ಬಸ್ಗಳ ಬುಕ್ಕಿಂಗ್ನಲ್ಲಿ ಶೇ 15ರಿಂದ 20ರಷ್ಟು ಇಳಿಕೆ ಕಂಡು ಬಂದಿದ್ದು, ಬೇಡಿಕೆ ಕಡಿಮೆ ಇರುವ ಮಾರ್ಗಗಳಲ್ಲಿ ಬಸ್ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕುರಿತು ಚಿಂತನೆ ನಡೆದಿದೆ ಎಂದು ಕೆಎಸ್ಆರ್ಟಿಸಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ಕುಮಾರ್ ತಿಳಿಸಿದರು.</p>.<p>ಮೈಸೂರು ಅರಮನೆಗೆ ಕಳೆದ ವರ್ಷ ಮಾರ್ಚ್ 10ರಂದು 10,350 ಮಂದಿ ಪ್ರವಾಸಿಗರು ಭೇಟಿ ನೀಡಿದ್ದರೆ, ಈ ವರ್ಷ 5,244 ಮಂದಿ ಭೇಟಿ ನೀಡಿದ್ದಾರೆ.</p>.<p>ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳೆದ ಬುಧವಾರ (ಮಾರ್ಚ್ 4) 3,557 ಮಂದಿ ಭೇಟಿ ನೀಡಿದ್ದರು. ಮಾರ್ಚ್ 11ರಂದು 2,597 ಮಂದಿ ಭೇಟಿ ನೀಡಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ, ‘ಇದು ಪರೀಕ್ಷಾ ಸಮಯವಾಗಿರುವುದರಿಂದ ಸಾಮಾನ್ಯವಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗುತ್ತದೆ’ ಎಂದು ತಿಳಿಸಿದರು.</p>.<p>ಇಲ್ಲಿನ ಯೋಗ ಕೇಂದ್ರಗಳಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಕೆಯಾಗಿದೆ. ಜತೆಗೆ, ವಿದೇಶಿಗರೊಡನೆ ನಡೆಸುತ್ತಿದ್ದ ಆನ್ಲೈನ್ ಯೋಗ ಕೋಚಿಂಗ್ ತರಗತಿಗಳೂ ರದ್ದಾಗುತ್ತಿವೆ.</p>.<p>ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮದಲ್ಲಿಪಕ್ಷಿಧಾಮ ಪ್ರವೇಶಿಸುವವರು ಡೆಟಾಲ್ ಮತ್ತು ಬ್ಲೀಚಿಂಗ್ ಮಿಶ್ರಿತ ನೀರಿನಲ್ಲಿ ಕಾಲು ತೊಳೆದುಕೊಂಡು ಒಳ ಹೋಗುವಂತೆ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ‘ರೋಗಾಣುಗಳು ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಜತೆಗೆ, ಇಲಾಖೆಯ ಸಿಬ್ಬಂದಿಗೆ ‘ಮಾಸ್ಕ್’ ಧರಿಸುವಂತೆ ಸೂಚಿಸಲಾಗಿದೆ’ ಎಂದು ವನ್ಯಜೀವಿ ವಿಭಾಗದ ಡಿಎಫ್ಒ ಅಲೆಕ್ಸಾಂಡರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>