<p><strong>ಮೈಸೂರು</strong>: ಸಿಎಸ್ಟಿ-ಟಿಎ ಕಂಪನಿಗೆ ಸೇರಿದ ಮಿಷನ್ ಆಸ್ಪತ್ರೆ ಹಾಗೂ ವಿದ್ಯಾ ಸಂಸ್ಥೆಗಳ ಆಸ್ತಿ, ಹಣಕಾಸಿನ ವಹಿವಾಟಿನಲ್ಲಿ ಅವ್ಯವಹಾರ ನಡೆದಿದೆ ಎಂದು ದೂರಿ ಸಿಎಸ್ಟಿ-ಟಿಎ ಬೆನಿಫಿಶರಿಸ್ ಮತ್ತು ಸ್ಟೆಕ್ ಹೋಲ್ಡರ್ಸ್ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಜಮಾಯಿಸಿದ ಪ್ರತಿಭಟನಕಾರರು, ಬಿಷಪ್ ಮೋಹನ್ ಮನೋರಾಜ್ ಹಾಗೂ ವಿನ್ಸೆಂಟ್ ಪಾಲಣ್ಣ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು.</p>.<p>ಪ್ರತಿಭಟನಕಾರ ಎಸ್.ಪಿ.ಕುಮಾರ್ ಮಾತನಾಡಿ, ‘ಸಂಸ್ಥೆಯ ಆಸ್ತಿಯನ್ನು ಹಾಳು ಮಾಡುತ್ತಿರುವ ಬಿಷಪ್ಗೆ ಧಿಕ್ಕಾರ. ಬಿಷಪ್ ಮೋಹನ್ ಮನೋರಾಜ್ ಹಾಗೂ ವಿನ್ಸೆಂಟ್ ಪಾಲಣ್ಣ ತಮ್ಮದೇ ರಾಜ್ಯಭಾರ ನಡೆಸಿದ್ದಾರೆ’ ಎಂದು ದೂರಿದರು.</p>.<p>‘ಸಿಎಸ್ಟಿ ಹಾಗೂ ಕೆಎಸ್ಡಿಯ ಆಸ್ತಿಗಳನ್ನು ಇವರಿಬ್ಬರೂ ಸೇರಿಕೊಂಡು ಹಾಳು ಮಾಡುತ್ತಿದ್ದಾರೆ. ಈ ಸಂಘಗಳ ಹಣವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಆದರೆ, ಇವರು ತಮ್ಮ ಅಕ್ರಮಕ್ಕೆ ಬಳಸುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ, ಸಭೆಗಳಿಗೆ ಬಹಿಷ್ಕಾರ ಹಾಕಿ ನ್ಯಾಯ ಕೇಳದ ರೀತಿ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>ಸಿಎಸ್ಟಿ-ಟಿಎ ಬೆನಿಫಿಶರಿಸ್ ಮತ್ತು ಸ್ಟೆಕ್ ಹೋಲ್ಡರ್ಸ್ನ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸಿಎಸ್ಟಿ-ಟಿಎ ಕಂಪನಿಗೆ ಸೇರಿದ ಮಿಷನ್ ಆಸ್ಪತ್ರೆ ಹಾಗೂ ವಿದ್ಯಾ ಸಂಸ್ಥೆಗಳ ಆಸ್ತಿ, ಹಣಕಾಸಿನ ವಹಿವಾಟಿನಲ್ಲಿ ಅವ್ಯವಹಾರ ನಡೆದಿದೆ ಎಂದು ದೂರಿ ಸಿಎಸ್ಟಿ-ಟಿಎ ಬೆನಿಫಿಶರಿಸ್ ಮತ್ತು ಸ್ಟೆಕ್ ಹೋಲ್ಡರ್ಸ್ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಜಮಾಯಿಸಿದ ಪ್ರತಿಭಟನಕಾರರು, ಬಿಷಪ್ ಮೋಹನ್ ಮನೋರಾಜ್ ಹಾಗೂ ವಿನ್ಸೆಂಟ್ ಪಾಲಣ್ಣ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು.</p>.<p>ಪ್ರತಿಭಟನಕಾರ ಎಸ್.ಪಿ.ಕುಮಾರ್ ಮಾತನಾಡಿ, ‘ಸಂಸ್ಥೆಯ ಆಸ್ತಿಯನ್ನು ಹಾಳು ಮಾಡುತ್ತಿರುವ ಬಿಷಪ್ಗೆ ಧಿಕ್ಕಾರ. ಬಿಷಪ್ ಮೋಹನ್ ಮನೋರಾಜ್ ಹಾಗೂ ವಿನ್ಸೆಂಟ್ ಪಾಲಣ್ಣ ತಮ್ಮದೇ ರಾಜ್ಯಭಾರ ನಡೆಸಿದ್ದಾರೆ’ ಎಂದು ದೂರಿದರು.</p>.<p>‘ಸಿಎಸ್ಟಿ ಹಾಗೂ ಕೆಎಸ್ಡಿಯ ಆಸ್ತಿಗಳನ್ನು ಇವರಿಬ್ಬರೂ ಸೇರಿಕೊಂಡು ಹಾಳು ಮಾಡುತ್ತಿದ್ದಾರೆ. ಈ ಸಂಘಗಳ ಹಣವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಆದರೆ, ಇವರು ತಮ್ಮ ಅಕ್ರಮಕ್ಕೆ ಬಳಸುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ, ಸಭೆಗಳಿಗೆ ಬಹಿಷ್ಕಾರ ಹಾಕಿ ನ್ಯಾಯ ಕೇಳದ ರೀತಿ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>ಸಿಎಸ್ಟಿ-ಟಿಎ ಬೆನಿಫಿಶರಿಸ್ ಮತ್ತು ಸ್ಟೆಕ್ ಹೋಲ್ಡರ್ಸ್ನ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>