<p><strong>ಮೈಸೂರು:</strong> ದೇಶದ ಅಭಿವೃದ್ಧಿಗೆ ಪ್ರಾಮಾಣಿಕ ತೆರಿಗೆ ಸಂದಾಯ ಅತಿ ಮುಖ್ಯ. ಆದಾಯ ತೆರಿಗೆ ಪಿಡುಗಲ್ಲ. ಅದು ದೇಶದ ಅಭಿವೃದ್ಧಿಗೆ ಪೂರಕ’ ಎಂದು ನಗರದ ಲೆಕ್ಕ ಪರಿಶೋಧಕ ಮತ್ತು ತೆರಿಗೆ ಸಲಹೆಗಾರ ಎಂ.ಸಿ. ಸುಂದರ್ ಹೇಳಿದರು.</p>.<p>ಇಲ್ಲಿನ ಹೊಸಮಠದ ನಟರಾಜ ಸ್ನಾತಕೋತ್ತರ ಅಧ್ಯಯನ ಕಾಲೇಜಿನಲ್ಲಿ ನಟರಾಜ ಪ್ರತಿಷ್ಠಾನದಿಂದ ಎಂ.ಕಾಂ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ‘ಪ್ರತಿಯೊಬ್ಬರು ತೆರಿಗೆ ಪಾವತಿಯನ್ನು ಮೂಲಭೂತ ಕರ್ತವ್ಯವೆಂದು ಭಾವಿಸಬೇಕು. ಆಯಾಕಾಲಕ್ಕೆ ಬದಲಾಗುವ ತೆರಿಗೆ ನಿಯಮ ಅರ್ಥೈಸಿಕೊಂದು ಅದರಂತೆ ಪಾವತಿಸಬೇಕು’ ಎಂದು ಹೇಳಿದರು.</p>.<p>ಪ್ರತಿಷ್ಠಾನ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ ಮಾತನಾಡಿ, ‘ಸಕಾಲದಲ್ಲಿ ಸೂಕ್ತವಾಗಿ ತೆರಿಗೆ ಪಾವತಿಸಿದರೆ ಭವ್ಯ ಭಾರತ ನಿರ್ಮಾಣದಲ್ಲಿ ಸಂಶಯವಿಲ್ಲ. ತೆರಿಗೆ ಬಗ್ಗೆ ಎಂ.ಕಾಂ ಮತ್ತು ಬಿ.ಕಾಂ ವಿದ್ಯಾರ್ಥಿಗಳು ತಲಸ್ಪರ್ಶಿ ಅಧ್ಯಯನ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದೇಶದ ಅಭಿವೃದ್ಧಿಗೆ ಪ್ರಾಮಾಣಿಕ ತೆರಿಗೆ ಸಂದಾಯ ಅತಿ ಮುಖ್ಯ. ಆದಾಯ ತೆರಿಗೆ ಪಿಡುಗಲ್ಲ. ಅದು ದೇಶದ ಅಭಿವೃದ್ಧಿಗೆ ಪೂರಕ’ ಎಂದು ನಗರದ ಲೆಕ್ಕ ಪರಿಶೋಧಕ ಮತ್ತು ತೆರಿಗೆ ಸಲಹೆಗಾರ ಎಂ.ಸಿ. ಸುಂದರ್ ಹೇಳಿದರು.</p>.<p>ಇಲ್ಲಿನ ಹೊಸಮಠದ ನಟರಾಜ ಸ್ನಾತಕೋತ್ತರ ಅಧ್ಯಯನ ಕಾಲೇಜಿನಲ್ಲಿ ನಟರಾಜ ಪ್ರತಿಷ್ಠಾನದಿಂದ ಎಂ.ಕಾಂ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ‘ಪ್ರತಿಯೊಬ್ಬರು ತೆರಿಗೆ ಪಾವತಿಯನ್ನು ಮೂಲಭೂತ ಕರ್ತವ್ಯವೆಂದು ಭಾವಿಸಬೇಕು. ಆಯಾಕಾಲಕ್ಕೆ ಬದಲಾಗುವ ತೆರಿಗೆ ನಿಯಮ ಅರ್ಥೈಸಿಕೊಂದು ಅದರಂತೆ ಪಾವತಿಸಬೇಕು’ ಎಂದು ಹೇಳಿದರು.</p>.<p>ಪ್ರತಿಷ್ಠಾನ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ ಮಾತನಾಡಿ, ‘ಸಕಾಲದಲ್ಲಿ ಸೂಕ್ತವಾಗಿ ತೆರಿಗೆ ಪಾವತಿಸಿದರೆ ಭವ್ಯ ಭಾರತ ನಿರ್ಮಾಣದಲ್ಲಿ ಸಂಶಯವಿಲ್ಲ. ತೆರಿಗೆ ಬಗ್ಗೆ ಎಂ.ಕಾಂ ಮತ್ತು ಬಿ.ಕಾಂ ವಿದ್ಯಾರ್ಥಿಗಳು ತಲಸ್ಪರ್ಶಿ ಅಧ್ಯಯನ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>