ಮೈಸೂರು: ಇಲ್ಲಿನ ಜಯನಗರದ ಮಳಲವಾಡಿಯಲ್ಲಿರುವ ನೂತನ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಹೊಸದಾಗಿ ಮೂರು ನ್ಯಾಯಾಲಯದ ವಿಭಾಗಗಳನ್ನು ಉದ್ಘಾಟಿಸಲಾಯಿತು.
ನ್ಯಾಯಾಲಯದಲ್ಲಿ ಹೆಚ್ಚುವರಿಯಾಗಿ ಹಿರಿಯ ಶ್ರೇಣಿಯ 5, 6, 7ನೇ ಎಸಿಜೆ ನ್ಯಾಯಾಲಯಗಳಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ.ಉದ್ದಾರ ಚಾಲನೆ ನೀಡಿದರು.
ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ್ ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಬಿ.ಶಿವಣ್ಣ, ಉಪಾಧ್ಯಕ್ಷ ಎಸ್.ಜಿ.ಶಿವಣ್ಣೇಗೌಡ ಮತ್ತಿತರ ಪದಾಧಿಕಾರಿಗಳು, ನ್ಯಾಯಾಧೀಶರು ಉಪಸ್ಥಿತರಿದ್ದರು.