<p><strong>ಮೈಸೂರು</strong>: ‘ಭಾರತ ಕಮ್ಯುನಿಸ್ಟ್ ಪಕ್ಷಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಾಗೂ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಹಮ್ಮಿಕೊಂಡಿರುವ ‘ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮ ಶಕ್ತಿಯ ಸಂಘರ್ಷದ ಶತಮಾನದ ಪಯಣ’ ಜಾಥಾ ಡಿ.22ರಂದು ನಗರಕ್ಕೆ ಬರಲಿದೆ’ ಎಂದು ಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ ತಿಳಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಮಧ್ಯಾಹ್ನ 3ಕ್ಕೆ ನಗರದ ಹಿನಕಲ್ ಫ್ಲೈ ಓವರ್ ಬಳಿ ಜಾಥಾವನ್ನು ಬರಮಾಡಿಕೊಳ್ಳಲಾಗುವುದು. ನಂತರ ಜೆ.ಕೆ ಮೈದಾನದಿಂದ ಬೈಕ್ ರ್ಯಾಲಿ ನಡೆಸಿ, ಗಾಂಧಿ ವೃತ್ತದ ಬಳಿ ಸಂಜೆ 4ರಿಂದ 6ರವರೆಗೆ ಬಹಿರಂಗ ಸಭೆ ನಡೆಸಲಾಗುವುದು’ ಎಂದರು.</p>.<p>ಬಂಡವಾಳ ಶಾಹಿ, ಕಾರ್ಪೊರೇಟ್ ಕೋಮುವಾದಿ ಶಕ್ತಿಗಳ ವಿರುದ್ಧ ಜನಸಾಮಾನ್ಯರ ಧ್ವನಿಯಾಗಿ ಸಿಪಿಐ ಹೋರಾಟ ನಡೆಸುತ್ತಿದೆ. ಶತಮಾನೋತ್ಸವ ಕಾರ್ಯಕ್ರಮ ಅಂಗವಾಗಿ ಈಗಾಗಲೇ 26ರಂದು ಕೋಲಾರದ ಕೆಜಿಎಫ್ ನಗರದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಸಹ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಜೆ.ಶಿವಣ್ಣ, ಬಸವರಾಜು, ಶಿವಮಾದು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಭಾರತ ಕಮ್ಯುನಿಸ್ಟ್ ಪಕ್ಷಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಾಗೂ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಹಮ್ಮಿಕೊಂಡಿರುವ ‘ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮ ಶಕ್ತಿಯ ಸಂಘರ್ಷದ ಶತಮಾನದ ಪಯಣ’ ಜಾಥಾ ಡಿ.22ರಂದು ನಗರಕ್ಕೆ ಬರಲಿದೆ’ ಎಂದು ಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ ತಿಳಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಮಧ್ಯಾಹ್ನ 3ಕ್ಕೆ ನಗರದ ಹಿನಕಲ್ ಫ್ಲೈ ಓವರ್ ಬಳಿ ಜಾಥಾವನ್ನು ಬರಮಾಡಿಕೊಳ್ಳಲಾಗುವುದು. ನಂತರ ಜೆ.ಕೆ ಮೈದಾನದಿಂದ ಬೈಕ್ ರ್ಯಾಲಿ ನಡೆಸಿ, ಗಾಂಧಿ ವೃತ್ತದ ಬಳಿ ಸಂಜೆ 4ರಿಂದ 6ರವರೆಗೆ ಬಹಿರಂಗ ಸಭೆ ನಡೆಸಲಾಗುವುದು’ ಎಂದರು.</p>.<p>ಬಂಡವಾಳ ಶಾಹಿ, ಕಾರ್ಪೊರೇಟ್ ಕೋಮುವಾದಿ ಶಕ್ತಿಗಳ ವಿರುದ್ಧ ಜನಸಾಮಾನ್ಯರ ಧ್ವನಿಯಾಗಿ ಸಿಪಿಐ ಹೋರಾಟ ನಡೆಸುತ್ತಿದೆ. ಶತಮಾನೋತ್ಸವ ಕಾರ್ಯಕ್ರಮ ಅಂಗವಾಗಿ ಈಗಾಗಲೇ 26ರಂದು ಕೋಲಾರದ ಕೆಜಿಎಫ್ ನಗರದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಸಹ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಜೆ.ಶಿವಣ್ಣ, ಬಸವರಾಜು, ಶಿವಮಾದು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>