ಇವರು ಇಲ್ಲಿನ ರಿಂಗ್ರಸ್ತೆಯ ಪೊಲೀಸ್ ಬಡಾವಣೆ ಬಳಿ ಉತ್ತನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಪೊಲೀಸ್ ಬಡಾವಣೆಯ ಸುಣ್ಣದಗೂಡು ಹತ್ತಿರ ಹಿಂದಿನಿಂದ ಬಂದ ಕ್ರೇನ್ ಡಿಕ್ಕಿ ಹೊಡೆದಿದೆ. ಆದರೆ, ಕ್ರೇನ್ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ರಂಗಸ್ವಾಮಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸಿದ್ದಾರ್ಥನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.