<p>ಬೆಟ್ಟದಪುರ: ಇಲ್ಲಿನ ಗ್ರಾಮದೇವತೆಯಾದ ಶಾಂತವೀರಮ್ಮ ದೇವಾಲಯದಲ್ಲಿ ಹುಂಡಿ ಒಡೆದು ಹಣ ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>‘ಮಂಗಳವಾರ ಮಧ್ಯರಾತ್ರಿ ವೇಳೆ ಇಬ್ಬರು ಕಳ್ಳರು ದೇವಸ್ಥಾನಕ್ಕೆ ಬಂದಿರುವುದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರು ಯಾರೆಂದು ಪತ್ತೆಯಾಗಿಲ್ಲ’ ಎಂದು ಪೊಲೀಸ್ ಮೂಲಗಳಿ ತಿಳಿಸಿವೆ.</p>.<p>ಬೆಟ್ಟದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಂ.ಪ್ರಕಾಶ್ ಎತ್ತಿನಮನಿ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.</p>.<p>‘ದೇವಾಲಯದ ಹುಂಡಿಯಲ್ಲಿ ಸುಮಾರು ₹30 ಸಾವಿರ ಹಣ ಇರಬಹುದು ಎಂದು ಅಂದಾಜಿಸಲಾಗಿದೆ’ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.</p>.<p>ವರ್ಷದ ಹಿಂದೆ ಬೆಟ್ಟದಪುರ ಗ್ರಾಮದ ದಾನಿಗಳು ಭಕ್ತರು ಸೇರಿ ಸುಮಾರು ₹ 90 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗಿತ್ತು.</p>.<p>ದೇವಸ್ಥಾನದಲ್ಲಿ ನಡೆದಿರುವ ಈ ಕಳ್ಳತನ ಪ್ರಕರಣದಿಂದ ನಿವಾಸಿಗಳಲ್ಲಿ ಆತಂಕ ಮೂಡಿದೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಟ್ಟದಪುರ: ಇಲ್ಲಿನ ಗ್ರಾಮದೇವತೆಯಾದ ಶಾಂತವೀರಮ್ಮ ದೇವಾಲಯದಲ್ಲಿ ಹುಂಡಿ ಒಡೆದು ಹಣ ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>‘ಮಂಗಳವಾರ ಮಧ್ಯರಾತ್ರಿ ವೇಳೆ ಇಬ್ಬರು ಕಳ್ಳರು ದೇವಸ್ಥಾನಕ್ಕೆ ಬಂದಿರುವುದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರು ಯಾರೆಂದು ಪತ್ತೆಯಾಗಿಲ್ಲ’ ಎಂದು ಪೊಲೀಸ್ ಮೂಲಗಳಿ ತಿಳಿಸಿವೆ.</p>.<p>ಬೆಟ್ಟದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಂ.ಪ್ರಕಾಶ್ ಎತ್ತಿನಮನಿ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.</p>.<p>‘ದೇವಾಲಯದ ಹುಂಡಿಯಲ್ಲಿ ಸುಮಾರು ₹30 ಸಾವಿರ ಹಣ ಇರಬಹುದು ಎಂದು ಅಂದಾಜಿಸಲಾಗಿದೆ’ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.</p>.<p>ವರ್ಷದ ಹಿಂದೆ ಬೆಟ್ಟದಪುರ ಗ್ರಾಮದ ದಾನಿಗಳು ಭಕ್ತರು ಸೇರಿ ಸುಮಾರು ₹ 90 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗಿತ್ತು.</p>.<p>ದೇವಸ್ಥಾನದಲ್ಲಿ ನಡೆದಿರುವ ಈ ಕಳ್ಳತನ ಪ್ರಕರಣದಿಂದ ನಿವಾಸಿಗಳಲ್ಲಿ ಆತಂಕ ಮೂಡಿದೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>