‘ಕಾಗೆಗಳು ಸಾಮೂಹಿಕವಾಗಿ ಸಾವನ್ನಪ್ಪುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪಶು ಇಲಾಖೆ ಅಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಿ ಕಾರಣ ಪತ್ತೆಹಚ್ಚಲಾಗುವುದು. ಕಸ ವಿಲೆವಾರಿ ಸಮಸ್ಯೆ ಕಳೆದ ಮೂರು ವರ್ಷಗಳಿಂದ ಇರುವುದು ಸತ್ಯ. ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿಯಲಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್ ಹೇಳಿದರು.