ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಮಾತನಾಡಿ, ‘ಎಲ್ಲವನ್ನೂ ಹಣದಿಂದಲೇ ಅಳೆಯಲಾಗುತ್ತಿದೆ. ಸಾಂಸ್ಕೃತಿಕ, ಸಾಹಿತ್ಯಿಕ ಪತ್ರಿಕೆಗಳು ಆದಾಯ ತರುತ್ತಿಲ್ಲವೆಂದು ಮುಚ್ಚಲಾಗುತ್ತಿದೆ. ತಂತ್ರಜ್ಞಾನ ಮೇಲುಗೈ ಸಾಧಿಸಿದ್ದು, ಕಲೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.