ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ 200 ಸ್ಥಾನವನ್ನೂ ಗೆಲ್ಲುವುದಿಲ್ಲ: ಡಿಕೆಶಿ

Published 3 ಏಪ್ರಿಲ್ 2024, 15:32 IST
Last Updated 3 ಏಪ್ರಿಲ್ 2024, 15:32 IST
ಅಕ್ಷರ ಗಾತ್ರ

ಮೈಸೂರು: ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಪಾದಿಸಿದರು.

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ‘ರಾಜ್ಯದ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ. ಹಾಗೆಂದು ಆಮ್‌ ಆದ್ಮಿ ಪಕ್ಷ ಹಾಗೂ ಕಮ್ಯುನಿಸ್ಟ್‌ ಪಕ್ಷದವರೇ ಹೇಳುತ್ತಿದ್ದಾರೆ. ಈ ಎರಡೂ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತಗಟ್ಟೆ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮಾಡಬೇಕು’ ಎಂದರು.

‘ಚಾಮರಾಜನಗರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಬೆಂಬಲಿಗರು, ನೆಂಟರು ನನ್ನನ್ನು ಭೇಟಿಯಾಗಿ, ‘ನಮಗೆ ಬಿಜೆಪಿಯಲ್ಲಿ ಇರಲು ಆಗುವುದಿಲ್ಲ’ ಎಂದು ಹೇಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ’ ಎಂದರು.

‘ಅಮಿತ್ ಶಾ ಅವರೇ, ನಿಮ್ಮಲ್ಲಿರುವಷ್ಟು ಭಿನ್ನಾಭಿಪ್ರಾಯ, ಕಿತ್ತಾಟ ನಮ್ಮಲ್ಲಿಲ್ಲ. ಅಧಿಕಾರಕ್ಕಾಗಿ ಶಿವಕುಮಾರ್‌ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ, ನಾನು ಮತ್ತು ಸಿದ್ದರಾಮಯ್ಯ ಒಗ್ಗಟ್ಟಾಗಿದ್ದೇವೆ. ಇಡೀ ಸಚಿವ ಸಂಪುಟ ಒಗ್ಗಟ್ಟಾಗಿದೆ. ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದೇವೆ. ಅಧಿಕಾರಕ್ಕೆ ನಾನು ಕಾದಿರುವೆ ಎಂಬುದು ನಿಮ್ಮ ಭ್ರಮೆ’ ಎಂದು ತಿರುಗೇಟು ನೀಡಿದರು.

ಬಳಿಕ ಅವರು, ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು. ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT