‘ಪ್ರಾಧಿಕಾರದಲ್ಲಿರುವ ಪಿ.ಕಾಳಿಂಗರಾವ್ ರಂಗಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಿದ್ಧ ಕಲಾವಿದರು, ಗಾಯಕರಿಂದ ಪ್ರತಿ ದಿನ ಸಂಜೆ 7ರಿಂದ ರಾತ್ರಿ 9.30ರವರೆಗೆ ಆಯೋಜಿಸಲಾಗುತ್ತಿದೆ. ವಸ್ತುಪ್ರದರ್ಶನ ಆವರಣದಲ್ಲಿ ಎಲ್ಲ ರೀತಿಯ ಜಾಹೀರಾತು ನೀಡಲು ಅವಕಾಶವಿದೆ. ಉದ್ದಿಮೆದಾರರು, ವ್ಯಾಪಾರಸ್ಥರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0821–2446887, ಮೊ.ಸಂಖ್ಯೆ: 7204202444 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.