ಮೈಸೂರು: ಕರ್ನಾಟಕ ಮೃಗಾಲಯ ಪ್ರಾಧಿಕಾರದ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ನೇಮಿಸಲಾಗಿದೆ.
‘ಪ್ರಾಣಿಪ್ರಿಯ ದರ್ಶನ್ ನೇಮಕ ಸಂಬಂಧ ಪ್ರಾಧಿಕಾರದ 149ನೇ ಆಡಳಿತ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಅವರ ಜನ್ಮದಿನದ ಪ್ರಯುಕ್ತ ಬುಧವಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ’ ಎಂದು ಪ್ರಾಧಿಕಾರ ಅಧ್ಯಕ್ಷ ಎಲ್.ಆರ್.ಮಹಾದೇವಸ್ವಾಮಿ ತಿಳಿಸಿದರು.