<p><strong>ಮೈಸೂರು:</strong> ‘ಪ್ರಧಾನಿ ಮೋದಿ ಅವರಿಗೆ ಸ್ವಾತಂತ್ರ್ಯದ ನೆನಪು ಮರುಕಳಿಸಲಿ, ಜನಸಾಮಾನ್ಯರ ಸ್ವಾತಂತ್ರ್ಯಕ್ಕಾಗಿ ಸ್ವಾತಂತ್ರ್ಯ ದಿನವನ್ನು ಜಾರಿಗೆ ಬರಲಿ’ ಎಂಬ ಘೋಷಣೆಯೊಂದಿಗೆ ಕರಪತ್ರ ಚಳವಳಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ಭಾನುವಾರ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ದಸಂಸ ಕಾರ್ಯಕರ್ತರು ಚಳವಳಿ ಹಮ್ಮಿಕೊಂಡಿದ್ದರು. ಈ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಂಸದರು ಕಾರ್ಪೊರೇಟ್ ಸಂಸ್ಥೆೆಗಳಿಗೆ ಮಾರಾಟವಾಗಿದ್ದು, ಅವರಿಂದ ಸಂವಿಧಾನದ ಪಾವಿತ್ರ್ಯತೆ ಉಳಿಯುವುದಿಲ್ಲ. ಇವರಿಂದ ಜನಸಾಮಾನ್ಯರ ಸ್ವಾತಂತ್ರ್ಯವೂ ಉಳಿಯಲು ಸಾಧ್ಯವಿಲ್ಲ. ಜನರ ಬದುಕಿಗೆ ಇಲ್ಲದ ಸ್ವಾತಂತ್ರ್ಯ ಸ್ವಾತಂತ್ರ್ಯವೇ ಅಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದೇ ವೇಳೆ, ಜಿಲ್ಲಾಡಳಿತದ ವತಿಯಿಂದ ಬನ್ನಿಮಂಟಪದಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕರಪತ್ರಗಳನ್ನು ಹಂಚಲು ತೆರಳಲು ಮುಂದಾದರು. ಈ ವೇಳೆ, 25ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಸಿಎಆರ್ ಮೈದಾನಕ್ಕೆೆ ಕರೆದೊಯ್ದರು. ಬಳಿಕ ಅವರನ್ನು ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ, ಮುಖಂಡರಾದ ಎಸ್. ರಾಜಣ್ಣ, ಅಪ್ಸರ್ ಅಹಮ್ಮದ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪ್ರಧಾನಿ ಮೋದಿ ಅವರಿಗೆ ಸ್ವಾತಂತ್ರ್ಯದ ನೆನಪು ಮರುಕಳಿಸಲಿ, ಜನಸಾಮಾನ್ಯರ ಸ್ವಾತಂತ್ರ್ಯಕ್ಕಾಗಿ ಸ್ವಾತಂತ್ರ್ಯ ದಿನವನ್ನು ಜಾರಿಗೆ ಬರಲಿ’ ಎಂಬ ಘೋಷಣೆಯೊಂದಿಗೆ ಕರಪತ್ರ ಚಳವಳಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ಭಾನುವಾರ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ದಸಂಸ ಕಾರ್ಯಕರ್ತರು ಚಳವಳಿ ಹಮ್ಮಿಕೊಂಡಿದ್ದರು. ಈ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಂಸದರು ಕಾರ್ಪೊರೇಟ್ ಸಂಸ್ಥೆೆಗಳಿಗೆ ಮಾರಾಟವಾಗಿದ್ದು, ಅವರಿಂದ ಸಂವಿಧಾನದ ಪಾವಿತ್ರ್ಯತೆ ಉಳಿಯುವುದಿಲ್ಲ. ಇವರಿಂದ ಜನಸಾಮಾನ್ಯರ ಸ್ವಾತಂತ್ರ್ಯವೂ ಉಳಿಯಲು ಸಾಧ್ಯವಿಲ್ಲ. ಜನರ ಬದುಕಿಗೆ ಇಲ್ಲದ ಸ್ವಾತಂತ್ರ್ಯ ಸ್ವಾತಂತ್ರ್ಯವೇ ಅಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದೇ ವೇಳೆ, ಜಿಲ್ಲಾಡಳಿತದ ವತಿಯಿಂದ ಬನ್ನಿಮಂಟಪದಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕರಪತ್ರಗಳನ್ನು ಹಂಚಲು ತೆರಳಲು ಮುಂದಾದರು. ಈ ವೇಳೆ, 25ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಸಿಎಆರ್ ಮೈದಾನಕ್ಕೆೆ ಕರೆದೊಯ್ದರು. ಬಳಿಕ ಅವರನ್ನು ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ, ಮುಖಂಡರಾದ ಎಸ್. ರಾಜಣ್ಣ, ಅಪ್ಸರ್ ಅಹಮ್ಮದ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>