<p><strong>ಮೈಸೂರು: </strong>ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನೆಗೆ ಒಂದು ದಿನವಷ್ಟೇ ಉಳಿದಿದ್ದು, ಸಿದ್ಧತೆಗಳು ಗರಿಗೆದರಿವೆ. ಇಲ್ಲಿನ ಅರಮನೆ ಹಾಗೂ ಚಾಮುಂಡಿಬೆಟ್ಟದಲ್ಲಿ ಸಿದ್ಧತಾ ಕಾರ್ಯಗಳು ಮಂಗಳವಾರ ಭರದಿಂದ ನಡೆದಿದ್ದವು. ದಸರಾ ಗಜಪಡೆಯ ಮರದ ಅಂಬಾರಿ ತಾಲೀಮು ಸಹ ಮುಂದುವರಿದಿದೆ.</p>.<p>ಚಾಮುಂಡಿಬೆಟ್ಟಕ್ಕೆ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶವನ್ನು ಅ. 7ರ ಮಧ್ಯಾಹ್ನದವರೆಗೂ ಸಂಪೂರ್ಣ ನಿರ್ಬಂಧಿಸಲಾಗಿದೆ. ಬೆಟ್ಟದಲ್ಲಿ ಭದ್ರತಾ ತಪಾಸಣೆ ನಡೆಯುತ್ತಿದ್ದು, ವೇದಿಕೆ ನಿರ್ಮಾಣ ಕಾರ್ಯವೂ ಆರಂಭವಾಗಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರವೇ ನಗರಕ್ಕೆ ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿಯ ದಸರಾ ಉದ್ಘಾಟಕರಾದ ಎಸ್.ಎಂ.ಕೃಷ್ಣ ಸಹ ಬುಧವಾರ ಮಧ್ಯಾಹ್ನ 2 ಗಂಟೆಗೆ ಇಲ್ಲಿಗೆ ಬಂದು ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.</p>.<p>ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಮಂಗಳವಾರವೇ ನಗರಕ್ಕೆ ಬಂದು ಜಲದರ್ಶಿನಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಬುಧವಾರವೇ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಹ ಮಂಗಳವಾರದಿಂದಲೇ ನಗರದಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>ಅರಮನೆಯಲ್ಲೂ ಖಾಸಗಿ ದರ್ಬಾರ್ಗಾಗಿ ಭರದ ಸಿದ್ಧತಾ ಕಾರ್ಯಗಳು ನಡೆದಿವೆ. ಕೋವಿಡ್ ಕಾರಣದಿಂದಾಗಿ ಮಾಧ್ಯಮದವರೂ ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದು, ರಾಜವಂಶಸ್ಥರಷ್ಟೇ ದರ್ಬಾರ್ನಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ಅರಮನೆಯ ವೇದಿಕೆ ಹಾಗೂ ಕಲಾಮಂದಿರದಲ್ಲಿ ದಸರೆಯ ಅಷ್ಟೂ ದಿನಗಳು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.</p>.<p>ದೀಪಾಲಂಕಾರದ ಪರೀಕ್ಷೆಗಳು ನಗರದ ಹಲವೆಡೆ ಭರದಿಂದ ನಡೆದಿದೆ. ಬಹುತೇಕ ಕಡೆ ದೀಪಾಲಂಕಾರಗಳು ನಡೆದಿದೆ. ವಿವಿಧ ವಿನ್ಯಾಸಗಳ ರಚನಾ ಕಾರ್ಯವೂ ಅಂತಿಮ ಹಂತದಲ್ಲಿದೆ. ಗುಂಡಿ ಮುಚ್ಚುವ ಕಾರ್ಯವೂ ತರಾತುರಿಯಲ್ಲಿ ಅಲ್ಲಲ್ಲಿ ನಡೆದಿರುವ ದೃಶ್ಯಗಳು ಕಂಡು ಬಂದವು.</p>.<p><strong>400 ಜನರಿಗಷ್ಟೇ ಅವಕಾಶ: </strong>ಅ. 7ರಂದು ಚಾಮುಂಡಿಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಸಮಾರಂಭಕ್ಕೆ 400 ಮಂದಿಗಷ್ಟೇ ಅವಕಾಶ ನೀಡಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕೇವಲ 100 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎಸ್.ಟಿ.ಸೋಮಶೇಖರ್, ‘ಅ.7ರಿಂದ 15 ರವರೆಗೆ ದಸರಾ ನಡೆಯಲಿದೆ. ಉದ್ಘಾಟನೆಯ ನಂತರ ಚಾಮುಂಡಿಬೆಟ್ಟದಲ್ಲಿ ಯಾವುದೇ ನಿರ್ಬಂಧ ಇಲ್ಲ. ದೇವಾಲಯಕ್ಕೆ ಸರ್ವರಿಗೂ ಮುಕ್ತ ಪ್ರವೇಶವಿದೆ’ ಎಂದು ಹೇಳಿದರು.</p>.<p>‘ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಅದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಮಂದಿಗೆ ಅವಕಾಶವಿದ್ದು, ಯಾವ ರೀತಿ ಅವಕಾಶ ಕಲ್ಪಿಸಬೇಕು ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನೆಗೆ ಒಂದು ದಿನವಷ್ಟೇ ಉಳಿದಿದ್ದು, ಸಿದ್ಧತೆಗಳು ಗರಿಗೆದರಿವೆ. ಇಲ್ಲಿನ ಅರಮನೆ ಹಾಗೂ ಚಾಮುಂಡಿಬೆಟ್ಟದಲ್ಲಿ ಸಿದ್ಧತಾ ಕಾರ್ಯಗಳು ಮಂಗಳವಾರ ಭರದಿಂದ ನಡೆದಿದ್ದವು. ದಸರಾ ಗಜಪಡೆಯ ಮರದ ಅಂಬಾರಿ ತಾಲೀಮು ಸಹ ಮುಂದುವರಿದಿದೆ.</p>.<p>ಚಾಮುಂಡಿಬೆಟ್ಟಕ್ಕೆ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶವನ್ನು ಅ. 7ರ ಮಧ್ಯಾಹ್ನದವರೆಗೂ ಸಂಪೂರ್ಣ ನಿರ್ಬಂಧಿಸಲಾಗಿದೆ. ಬೆಟ್ಟದಲ್ಲಿ ಭದ್ರತಾ ತಪಾಸಣೆ ನಡೆಯುತ್ತಿದ್ದು, ವೇದಿಕೆ ನಿರ್ಮಾಣ ಕಾರ್ಯವೂ ಆರಂಭವಾಗಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರವೇ ನಗರಕ್ಕೆ ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿಯ ದಸರಾ ಉದ್ಘಾಟಕರಾದ ಎಸ್.ಎಂ.ಕೃಷ್ಣ ಸಹ ಬುಧವಾರ ಮಧ್ಯಾಹ್ನ 2 ಗಂಟೆಗೆ ಇಲ್ಲಿಗೆ ಬಂದು ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.</p>.<p>ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಮಂಗಳವಾರವೇ ನಗರಕ್ಕೆ ಬಂದು ಜಲದರ್ಶಿನಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಬುಧವಾರವೇ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಹ ಮಂಗಳವಾರದಿಂದಲೇ ನಗರದಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>ಅರಮನೆಯಲ್ಲೂ ಖಾಸಗಿ ದರ್ಬಾರ್ಗಾಗಿ ಭರದ ಸಿದ್ಧತಾ ಕಾರ್ಯಗಳು ನಡೆದಿವೆ. ಕೋವಿಡ್ ಕಾರಣದಿಂದಾಗಿ ಮಾಧ್ಯಮದವರೂ ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದು, ರಾಜವಂಶಸ್ಥರಷ್ಟೇ ದರ್ಬಾರ್ನಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ಅರಮನೆಯ ವೇದಿಕೆ ಹಾಗೂ ಕಲಾಮಂದಿರದಲ್ಲಿ ದಸರೆಯ ಅಷ್ಟೂ ದಿನಗಳು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.</p>.<p>ದೀಪಾಲಂಕಾರದ ಪರೀಕ್ಷೆಗಳು ನಗರದ ಹಲವೆಡೆ ಭರದಿಂದ ನಡೆದಿದೆ. ಬಹುತೇಕ ಕಡೆ ದೀಪಾಲಂಕಾರಗಳು ನಡೆದಿದೆ. ವಿವಿಧ ವಿನ್ಯಾಸಗಳ ರಚನಾ ಕಾರ್ಯವೂ ಅಂತಿಮ ಹಂತದಲ್ಲಿದೆ. ಗುಂಡಿ ಮುಚ್ಚುವ ಕಾರ್ಯವೂ ತರಾತುರಿಯಲ್ಲಿ ಅಲ್ಲಲ್ಲಿ ನಡೆದಿರುವ ದೃಶ್ಯಗಳು ಕಂಡು ಬಂದವು.</p>.<p><strong>400 ಜನರಿಗಷ್ಟೇ ಅವಕಾಶ: </strong>ಅ. 7ರಂದು ಚಾಮುಂಡಿಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಸಮಾರಂಭಕ್ಕೆ 400 ಮಂದಿಗಷ್ಟೇ ಅವಕಾಶ ನೀಡಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕೇವಲ 100 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎಸ್.ಟಿ.ಸೋಮಶೇಖರ್, ‘ಅ.7ರಿಂದ 15 ರವರೆಗೆ ದಸರಾ ನಡೆಯಲಿದೆ. ಉದ್ಘಾಟನೆಯ ನಂತರ ಚಾಮುಂಡಿಬೆಟ್ಟದಲ್ಲಿ ಯಾವುದೇ ನಿರ್ಬಂಧ ಇಲ್ಲ. ದೇವಾಲಯಕ್ಕೆ ಸರ್ವರಿಗೂ ಮುಕ್ತ ಪ್ರವೇಶವಿದೆ’ ಎಂದು ಹೇಳಿದರು.</p>.<p>‘ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಅದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಮಂದಿಗೆ ಅವಕಾಶವಿದ್ದು, ಯಾವ ರೀತಿ ಅವಕಾಶ ಕಲ್ಪಿಸಬೇಕು ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>