<p><strong>ಮೈಸೂರು:</strong> ‘ಮೈಸೂರು ದಸರಾ’ ನಿಮಿತ್ತ ‘ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘ’ವು ನಡೆಸಿದ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯಲ್ಲಿ ‘ಪ್ರಜಾವಾಣಿ’ಯ ಮೂವರು ಪತ್ರಿಕಾ ಛಾಯಾಗ್ರಾಹಕರು ಸೇರಿದಂತೆ 7 ಮಂದಿ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.</p>.<p>ಬೆಂಗಳೂರಿನ ಬಿ.ಸತೀಶ್ ಪ್ರಥಮ ಸ್ಥಾನ ಪಡೆದರು. ದ್ವಿತೀಯ, ತೃತೀಯ ಬಹುಮಾನಕ್ಕೆ ಕ್ರಮವಾಗಿ ‘ಪ್ರಜಾವಾಣಿ’ಯ ಛಾಯಾಗ್ರಾಹಕರಾದ ಎಂ.ಎಸ್.ಮಂಜುನಾಥ್ ಮತ್ತು ಪಿ.ರಂಜು ಭಾಜನರಾಗಿದ್ದಾರೆ. ಬಹುಮಾನವು ಕ್ರಮವಾಗಿ ₹ 25 ಸಾವಿರ, ₹15 ಸಾವಿರ ಹಾಗೂ ₹10 ಸಾವಿರ ನಗದು ಒಳಗೊಂಡಿದೆ. </p>.<p>ನೇತ್ರ ರಾಜು ಸ್ಮರಣಾರ್ಥ ಬಹುಮಾನ (₹15ಸಾವಿರ) ವಿಜಯಪುರದ ಸುಧೀಂದ್ರ ಕುಲಕರ್ಣಿ ಅವರಿಗೆ ಸಂದಿದೆ. ಎಸ್.ಚರಣ್, ಬಾಗಲಕೋಟೆಯ ಇಂದ್ರಕುಮಾರ್ ದಸ್ತೇನವರ ಹಾಗೂ ‘ಪ್ರಜಾವಾಣಿ’ಯ ಎಚ್.ಫಕ್ರುದ್ದೀನ್ ಅವರಿಗೆ ಸಮಾಧಾನಕರ ಬಹುಮಾನ (ತಲಾ ₹ 1ಸಾವಿರ) ಲಭಿಸಿದೆ.</p>.<p>ದಸರಾ ನಂತರ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸುವರು ಎಂದು ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮೈಸೂರು ದಸರಾ’ ನಿಮಿತ್ತ ‘ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘ’ವು ನಡೆಸಿದ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯಲ್ಲಿ ‘ಪ್ರಜಾವಾಣಿ’ಯ ಮೂವರು ಪತ್ರಿಕಾ ಛಾಯಾಗ್ರಾಹಕರು ಸೇರಿದಂತೆ 7 ಮಂದಿ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.</p>.<p>ಬೆಂಗಳೂರಿನ ಬಿ.ಸತೀಶ್ ಪ್ರಥಮ ಸ್ಥಾನ ಪಡೆದರು. ದ್ವಿತೀಯ, ತೃತೀಯ ಬಹುಮಾನಕ್ಕೆ ಕ್ರಮವಾಗಿ ‘ಪ್ರಜಾವಾಣಿ’ಯ ಛಾಯಾಗ್ರಾಹಕರಾದ ಎಂ.ಎಸ್.ಮಂಜುನಾಥ್ ಮತ್ತು ಪಿ.ರಂಜು ಭಾಜನರಾಗಿದ್ದಾರೆ. ಬಹುಮಾನವು ಕ್ರಮವಾಗಿ ₹ 25 ಸಾವಿರ, ₹15 ಸಾವಿರ ಹಾಗೂ ₹10 ಸಾವಿರ ನಗದು ಒಳಗೊಂಡಿದೆ. </p>.<p>ನೇತ್ರ ರಾಜು ಸ್ಮರಣಾರ್ಥ ಬಹುಮಾನ (₹15ಸಾವಿರ) ವಿಜಯಪುರದ ಸುಧೀಂದ್ರ ಕುಲಕರ್ಣಿ ಅವರಿಗೆ ಸಂದಿದೆ. ಎಸ್.ಚರಣ್, ಬಾಗಲಕೋಟೆಯ ಇಂದ್ರಕುಮಾರ್ ದಸ್ತೇನವರ ಹಾಗೂ ‘ಪ್ರಜಾವಾಣಿ’ಯ ಎಚ್.ಫಕ್ರುದ್ದೀನ್ ಅವರಿಗೆ ಸಮಾಧಾನಕರ ಬಹುಮಾನ (ತಲಾ ₹ 1ಸಾವಿರ) ಲಭಿಸಿದೆ.</p>.<p>ದಸರಾ ನಂತರ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸುವರು ಎಂದು ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>