‘ಅ.17ರಂದು ದಸರಾ ಉದ್ಘಾಟನೆಗೆ 200 ಹಾಗೂ ಅ.26ರಂದು ಜಂಬೂಸವಾರಿಗೆ 300 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಬೇಕು. ಗಣ್ಯರು, ಸಿಬ್ಬಂದಿ, ಕಲಾವಿದರು ಹಾಗೂ ಭದ್ರತಾ ಸಿಬ್ಬಂದಿ ಕೂಡ ಈ ಸಂಖ್ಯೆಯಲ್ಲಿ ಸೇರಿದ್ದಾರೆ. ಸಾರ್ವಜನಿಕರಿಗೆವರ್ಚುವಲ್ ಆಗಿ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು’ ಎಂದು ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ನೇತೃತ್ವದ ಮೂವರ ಸದಸ್ಯರ ಸಮಿತಿಯುತನ್ನವರದಿಯಲ್ಲಿ ನಮೂದಿಸಿದೆ.