<p>ಮೈಸೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಶಿಫಾರಸ್ಸಿನ ಅನ್ವಯವೇ ದಸರಾ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.</p>.<p>ಈ ಸಂಬಂಧ ಶನಿವಾರ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಕ್ರಮ ವಹಿಸುವಂತೆ ಸೂಚನೆ ನೀಡಿದರು. ಕಾರ್ಯಕ್ರಮದ ವೇಳೆ ಕಟ್ಟುನಿಟ್ಟಾಗಿ ಸುರಕ್ಷತೆ ಕ್ರಮಗಳನ್ನು ಅನುಸರಿಸಬೇಕು. ಯಾವುದೇ ಲೋಪ ಉಂಟಾಗಬಾರದು ಎಂದು ತಾಕೀತು ಮಾಡಿದರು.</p>.<p>ಪ್ರಮುಖವಾಗಿ ಜಿಲ್ಲಾ ವೈದ್ಯಾಧಿಕಾರಿ ಡಾ.ವೆಂಕಟೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು. ಏನಾದರೂ ಎಡವಟ್ಟು ಸಂಭವಿಸಿದರೆ ತಾವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಶನಿವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಸಭೆ ನಡೆಯಬೇಕಿತ್ತು. ಆದರೆ, ಅವರು ಅನುಪಸ್ಥಿತಿಯಲ್ಲಿ ಸಚಿವರೇ ಸಮಿತಿಯ ಶಿಫಾರಸುಗಳ ಬಗ್ಗೆ ಚರ್ಚಿಸಿದರು.</p>.<p>ಸಂಸದ ಪ್ರತಾಪಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಇದ್ದರು.</p>.<p>ಈ ನಡುವೆ ಅರಮನೆ ಅಂಗಳದಲ್ಲಿ ಗಜಪಡೆ ಅಭ್ಯಾಸ ಮುಂದುವರಿದಿದೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ಭಾರ ಹೊರಿಸುವ ತಾಲೀಮು ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಶಿಫಾರಸ್ಸಿನ ಅನ್ವಯವೇ ದಸರಾ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.</p>.<p>ಈ ಸಂಬಂಧ ಶನಿವಾರ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಕ್ರಮ ವಹಿಸುವಂತೆ ಸೂಚನೆ ನೀಡಿದರು. ಕಾರ್ಯಕ್ರಮದ ವೇಳೆ ಕಟ್ಟುನಿಟ್ಟಾಗಿ ಸುರಕ್ಷತೆ ಕ್ರಮಗಳನ್ನು ಅನುಸರಿಸಬೇಕು. ಯಾವುದೇ ಲೋಪ ಉಂಟಾಗಬಾರದು ಎಂದು ತಾಕೀತು ಮಾಡಿದರು.</p>.<p>ಪ್ರಮುಖವಾಗಿ ಜಿಲ್ಲಾ ವೈದ್ಯಾಧಿಕಾರಿ ಡಾ.ವೆಂಕಟೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು. ಏನಾದರೂ ಎಡವಟ್ಟು ಸಂಭವಿಸಿದರೆ ತಾವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಶನಿವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಸಭೆ ನಡೆಯಬೇಕಿತ್ತು. ಆದರೆ, ಅವರು ಅನುಪಸ್ಥಿತಿಯಲ್ಲಿ ಸಚಿವರೇ ಸಮಿತಿಯ ಶಿಫಾರಸುಗಳ ಬಗ್ಗೆ ಚರ್ಚಿಸಿದರು.</p>.<p>ಸಂಸದ ಪ್ರತಾಪಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಇದ್ದರು.</p>.<p>ಈ ನಡುವೆ ಅರಮನೆ ಅಂಗಳದಲ್ಲಿ ಗಜಪಡೆ ಅಭ್ಯಾಸ ಮುಂದುವರಿದಿದೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ಭಾರ ಹೊರಿಸುವ ತಾಲೀಮು ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>