‘ಯೋಜನೆಯಲ್ಲಿ ಸಂಸದ ಪ್ರತಾಪ ಸಿಂಹನದ್ದಾಗಲಿ ಅಥವಾ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಪ್ರತಾಪ ಪ್ರತಿನಿಧಿಸುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಈ ಹೆದ್ದಾರಿಯ ಕೆಲವೇ ಕಿ.ಮೀ. ಮಾತ್ರವೇ ಸೇರುತ್ತದೆ. ಆದರೂ ನಮ್ಮದು, ನಾವೇ ಮಾಡಿಸಿದ್ದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ನಮ್ಮ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಅವರೇ ಮುಂದೆ ನಿಂತು ಈ ಯೋಜನೆಯನ್ನು ಮಾಡಿಸಿದ್ದರು’ ಎಂದು ಸಮರ್ಥಿಸಿಕೊಂಡರು.